AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ ಚಿತ್ರದಲ್ಲಿದೆ ಶಾಕಿಂಗ್​ ವಿಷಯ; ಹಾಡು ಬಿಡುಗಡೆ ವೇಳೆ ಮಾಹಿತಿ ನೀಡಿದ ದುನಿಯಾ ವಿಜಯ್​

‘ನೈಜ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಪ್ರೀತಿ-ಪ್ರೇಮ, ದುಶ್ಚಟ ಮುಂತಾದ ವಿಚಾರಗಳು ಹೆಣ್ಮಕ್ಕಳು ಮತ್ತು ಗಂಡು ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬುದನ್ನು ಬಹಳ ನೇರವಾಗಿ ತೋರಿಸುತ್ತೇನೆ. ಅದನ್ನು ಹೇಗೆ ತಡೆದುಕೊಳ್ಳುತ್ತಾರೋ ಗೊತ್ತಿಲ್ಲ. ಇದರಲ್ಲಿ ಎಚ್ಚರಿಕೆ ಗಂಟೆ ಇದೆ’ ಎಂದಿದ್ದಾರೆ ದುನಿಯಾ ವಿಜಯ್​.

‘ಭೀಮ’ ಚಿತ್ರದಲ್ಲಿದೆ ಶಾಕಿಂಗ್​ ವಿಷಯ; ಹಾಡು ಬಿಡುಗಡೆ ವೇಳೆ ಮಾಹಿತಿ ನೀಡಿದ ದುನಿಯಾ ವಿಜಯ್​
ದುನಿಯಾ ವಿಜಯ್​
Follow us
ಮದನ್​ ಕುಮಾರ್​
|

Updated on:Sep 18, 2023 | 2:54 PM

ನಟ ದುನಿಯಾ ವಿಜಯ್​ (Duniya Vijay) ಅವರು ನಿರ್ದೇಶಕನಾಗಿಯೂ ಬ್ಯುಸಿ ಆಗಿದ್ದಾರೆ. ‘ಸಲಗ’ ಚಿತ್ರದ ಮೂಲಕ ಭರ್ಜರಿ ಯಶಸ್ಸು ಕಂಡ ಅವರು ಈಗ ‘ಭೀಮ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ದೊಡ್ಡ ನಿರೀಕ್ಷೆ ಇದೆ. ಇಂದು (ಸೆ.18) ಗೌರಿ ಗಣೇಶ ಹಬ್ಬದ ಪ್ರಯುಕ್ತ ‘ಭೀಮ’ ಚಿತ್ರದ ಹಾಡು (Bheema Movie Song) ಬಿಡುಗಡೆ ಆಗಿದೆ. ‘ಬ್ಯಾಡ್​ ಬಾಯ್ಸ್​..’ ಎಂಬ ಈ ಹಾಡಿನ ಬಿಡುಗಡೆ ವೇಳೆ ದುನಿಯಾ ವಿಜಯ್ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆ ಏನು ಎಂಬುದರ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ. ಪೋಷಕರು ಮತ್ತು ಮಕ್ಕಳು ಶಾಕ್​ ಆಗುವಂತಹ ಒಂದು ವಿಷಯವನ್ನು ಇಟ್ಟುಕೊಂಡು ಅವರು ‘ಭೀಮ’ ಸಿನಿಮಾ (Bheema Movie) ಮಾಡಿದ್ದಾರೆ. ಇದು ನೈಜ ಘಟನೆಗಳನ್ನು ಆಧರಿಸಿದೆ ಎಂಬುದು ವಿಶೇಷ.

‘ನಾನು ಒಂದೆರಡು ಕಡೆಗಳಿಗೆ ಭೇಟಿ ನೀಡಿದೆ. ಅಲ್ಲಿ ನೋಡಿದಾಗ ಶಾಕ್​ ಆಯಿತು. ಅಲ್ಲಿರುವ ನಾಲ್ಕು ಹೆಣ್ಣು ಮಕ್ಕಳು, 10-15  ಹುಡುಗರು ಬದುಕಿದ್ದರೂ ವೇಸ್ಟ್​. ಅವರು ಯಾವಾಗ ಸಾಯುತ್ತಾರೋ ಗೊತ್ತಿಲ್ಲ. ಸತ್ತಾಗ ನಮಗೆ ಹೇಳಬೇಡಿ ಎನ್ನುತ್ತಾ ನೋವು ಅನುಭವಿಸುತ್ತಿರುವ ತಂದೆ-ತಾಯಿ ಇದ್ದಾರೆ. ಆ ವಿಚಾರ ನನ್ನನ್ನು ಕಾಡಿತು. ಈ ವಿಚಾರದ ಮೇಲೆ ಯಾಕೆ ಸಿನಿಮಾ ಮಾಡಬಾರದು ಅಂತ ನನಗೆ ಅನಿಸಿತು’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ.

‘ಭೀಮ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದುನಿಯಾ ವಿಜಯ್​:

‘ನನ್ನ ಬಳಿ ಕೆಲವು ವಿಡಿಯೋ ಮತ್ತು ಫೋಟೋಗಳು ಇವೆ. ಸಿನಿಮಾ ರಿಲೀಸ್​ಗೂ ಮುನ್ನ ಇದನ್ನು ನಿಮಗೆ ತೋರಿಸುತ್ತೇನೆ. ಚಟಕ್ಕೆ ಛಲ ಇಲ್ಲ. ಯಾವ ಮಟ್ಟಕ್ಕೆ ಬೇಕಾದರೂ ಕರೆದುಕೊಂಡು ಹೋಗುತ್ತದೆ. ಇಂದಿನ ಯುವ ಜನತೆ ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂಬುದನ್ನು ನೋಡಿದಾಗ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಅದನ್ನೆಲ್ಲ ನಿಮಗೆ ಸಾಕ್ಷಿ ಸಮೇತ ತೋರಿಸುತ್ತೇವೆ. ಈ ಸಮಸ್ಯೆಗೆ ಪರಿಹಾರ ಎಲ್ಲರ ಕೈಯಲ್ಲೂ ಇದೆ. ಅಧಿಕಾರದಲ್ಲಿ ಇರುವ ಯುವಜನತೆ, ಆಫೀಸರ್​ಗಳು, ತಂದೆ-ತಾಯಿ, ರಾಜಕಾರಣಿಗಳು ಸೇರಿದಂತೆ ಎಲ್ಲರಿಗೂ ಈ ವಿಚಾರದಲ್ಲಿ ಜವಾಬ್ದಾರಿ ಇದೆ’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ.

Duniya Vijay: ಪಕ್ಕಾ ಅಭಿಮಾನಿಗೆ ವಿಶೇಷ ಪ್ರೀತಿ ತೋರಿಸಿದ ನಟ ದುನಿಯಾ ವಿಜಯ್

‘ನೈಜ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಪ್ರೀತಿ-ಪ್ರೇಮ, ದುಶ್ಚಟ ಮುಂತಾದ ವಿಚಾರಗಳು ಹೆಣ್ಮಕ್ಕಳು ಮತ್ತು ಗಂಡು ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬುದನ್ನು ಬಹಳ ನೇರವಾಗಿ ತೋರಿಸುತ್ತೇನೆ. ಅನೇಕ ಕಡೆಗಳಲ್ಲಿ ಓಡಾಡಿ, ತುಂಬ ಅಧ್ಯಯನ ಮಾಡಿದ್ದೇನೆ. ಯುವಜನತೆ ಇಂದು ಏನು ಮಾಡುತ್ತಿದೆ ಎಂಬುದನ್ನು ಬಹಳ ಸತ್ಯವಾಗಿ ತೆರೆದಿಟ್ಟಿದ್ದೇನೆ. ಅದನ್ನು ಹೇಗೆ ತಡೆದುಕೊಳ್ಳುತ್ತಾರೋ ಗೊತ್ತಿಲ್ಲ. ಪೋಷಕರಿಗೆ ಈ ಸಿನಿಮಾದಲ್ಲಿ ಎಚ್ಚರಿಕೆ ಗಂಟೆ ಇದೆ’ ಎಂದಿದ್ದಾರೆ ದುನಿಯಾ ವಿಜಯ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Mon, 18 September 23

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು