AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಅವಕಾಶ: ನೆಚ್ಚಿನ ನಟನ ಎದುರೇ ವಿಲನ್ ಆಗಲಿದ್ದಾರೆ ದುನಿಯಾ ವಿಜಯ್

Duniya Vijay: ನಟ ದುನಿಯಾ ವಿಜಯ್​ಗೆ ಮತ್ತೊಂದು ದೊಡ್ಡ ಅವಕಾಶ ಎದುರಾಗಿದೆ. ತಮ್ಮ ಮೆಚ್ಚಿನ ನಟನ ಎದುರು ವಿಲನ್ ಆಗಿ ನಟಿಸಲಿದ್ದಾರೆ ದುನಿಯಾ ವಿಜಯ್.

ಭರ್ಜರಿ ಅವಕಾಶ: ನೆಚ್ಚಿನ ನಟನ ಎದುರೇ ವಿಲನ್ ಆಗಲಿದ್ದಾರೆ ದುನಿಯಾ ವಿಜಯ್
ದುನಿಯಾ ವಿಜಯ್
ಮಂಜುನಾಥ ಸಿ.
|

Updated on: Oct 31, 2023 | 6:54 PM

Share

ಸತತ ಸೋಲುಗಳಿಂದ ಕಂಗೆಟ್ಟಿದ್ದ ದುನಿಯಾ ವಿಜಯ್​ (Duniya Vijay) ಅವರನ್ನು ಕೈಹಿಡಿದಿದ್ದು ‘ಸಲಗ’ ಸಿನಿಮಾ. ಅವರೇ ನಿರ್ದೇಶಿಸಿ, ನಟಿಸಿದ ‘ಸಲಗ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಯ್ತು. ಆ ಸಿನಿಮಾದ ಬಳಿಕ ಮತ್ತೆ ದುನಿಯಾ ವಿಜಯ್​ರ ನಟನಾ ವೃತ್ತಿ ಟ್ರ್ಯಾಕ್​ಗೆ ಬಂದಂತಿದೆ. ‘ಸಲಗ’ ಸಿನಿಮಾದ ಬಳಿಕ ದುನಿಯಾ ವಿಜಯ್​ಗೆ ಪರಭಾಷೆ ಸಿನಿಮಾಗಳ ಅವಕಾಶಗಳೂ ಸಹ ಹೆಚ್ಚಾಗಿವೆ. ತೆಲುಗಿನಲ್ಲಿ ಬಾಲಕೃಷ್ಣ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ವಿಜಿ, ಇದೀಗ ತಮ್ಮ ಆರಾಧ್ಯ ದೈವ, ಅಚ್ಚುಮೆಚ್ಚಿನ ನಟನ ಎದುರು ವಿಲನ್ ಆಗಿ ನಟಿಸಲಿದ್ದಾರೆ.

ದುನಿಯಾ ವಿಜಯ್​ಗೆ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಎಂದರೆ ಅಚ್ಚುಮೆಚ್ಚು. ತಾವು ರಜನೀಕಾಂತ್ ಫ್ಯಾನ್ ಎಂಬುದನ್ನು ಹಲವು ಸಂದರ್ಭಗಳಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಅವರ ಎದುರೇ ವಿಲನ್ ಆಗಿ ನಟಿಸುವ ಅವಕಾಶ ದುನಿಯಾ ವಿಜಯ್​ರನ್ನು ಅರಸಿ ಬಂದಿದೆ ಎನ್ನಲಾಗುತ್ತಿದೆ.

ರಜನೀಕಾಂತ್​ರ ಹೊಸ ಸಿನಿಮಾವನ್ನು ತಮಿಳಿನ ಯಶಸ್ವೀ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್. ಈಗಾಗಲೇ ಲೋಕೇಶ್ ಕನಗರಾಜ್ ದುನಿಯಾ ವಿಜಯ್ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ನಿಖಿಲ್​ ಕುಮಾರ್​ ಸಿನಿಮಾದಲ್ಲಿ ದುನಿಯಾ ವಿಜಯ್​ ವಿಲನ್​? ಹಬ್ಬಿದೆ ಗುಸು ಗುಸು

ರಜನೀಕಾಂತ್ ಪ್ರಸ್ತುತ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿಜೆ ಜ್ಞಾನವೇಲು ನಿರ್ದೇಶನದ ಸಿನಿಮಾದಲ್ಲಿ ರಜನೀಕಾಂತ್ ನಟಿಸುತ್ತಿದ್ದಾರೆ. ಅದರ ಜೊತೆಗೆ ತಮ್ಮ ಪುತ್ರಿ ನಿರ್ದೇಶಿಸುತ್ತಿರುವ ಸಿನಿಮಾದಲ್ಲಿಯೂ ರಜನೀ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಮುಗಿದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾದಲ್ಲಿ ರಜನೀಕಾಂತ್ ನಟಿಸಲಿದ್ದಾರೆ. ಇದೇ ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ರಜನೀಕಾಂತ್ ಜೊತೆ ನಟಿಸಿದ ನಟರಿಗೆ ದೊಡ್ಡ ಮಟ್ಟದ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಅದರಲ್ಲಿಯೂ ಲೋಕೇಶ್ ಕನಗರಾಜ್ ಅಂತೂ ತಮ್ಮ ಸಿನಿಮಾಗಳಲ್ಲಿ ವಿಲನ್ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿರುತ್ತಾರೆ, ಬಹಳ ಒಳ್ಳೆಯ ಸೀನ್​ಗಳನ್ನು ವಿಲನ್​ ಪಾತ್ರಗಳಿಗೆ ಇಟ್ಟಿರುತ್ತಾರೆ. ಹಾಗಾಗಿ ದುನಿಯಾ ವಿಜಯ್ ಅವರ ಪ್ರತಿಭೆಗೆ ದೊಡ್ಡ ಅವಕಾಶವೇ ಸಿಕ್ಕಂತಾಗಿದೆ.

ದುನಿಯಾ ವಿಜಯ್ ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರೇ ನಿರ್ದೇಶಿಸಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹಾಡು ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ. ಸಿನಿಮಾದ ಪ್ರಚಾರದಲ್ಲಿ ಶೀಘ್ರವೇ ದುನಿಯಾ ವಿಜಯ್ ಭಾಗಿಯಾಗಲಿದ್ದಾರೆ. ‘ಭೀಮ’ ಸಿನಿಮಾ ಬಿಡುಗಡೆ ಬಳಿಕ ದುನಿಯಾ ವಿಜಯ್ ತಮಿಳು ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ