AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ ಯಶಸ್ಸಿನ ಬೆನ್ನಲ್ಲೆ ತಮಿಳು ಸಿನಿಮಾದಿಂದ ದುನಿಯಾ ವಿಜಿಗೆ ಬುಲಾವ್

Duniya Viji: ‘ಭೀಮ’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ದುನಿಯಾ ವಿಜಯ್ ಮತ್ತು ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ. ದುನಿಯಾ ವಿಜಯ್ ತಮಿಳಿನ ಸ್ಟಾರ್ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ನಟಿಸಲಿದ್ದಾರೆ.

‘ಭೀಮ’ ಯಶಸ್ಸಿನ ಬೆನ್ನಲ್ಲೆ ತಮಿಳು ಸಿನಿಮಾದಿಂದ ದುನಿಯಾ ವಿಜಿಗೆ ಬುಲಾವ್
Follow us
ಮಂಜುನಾಥ ಸಿ.
|

Updated on: Aug 15, 2024 | 3:54 PM

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಉತ್ತಮ ಗಳಿಕೆ ಮಾಡುತ್ತಿದೆ. ‘ಸಲಗ’ ಬಳಿಕ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ಇದು. ಸಿನಿಮಾ ಬಿಡುಗಡೆ ಆದ ಕೆಲವೇ ದಿನಗಳಿಗೆ ಚಿತ್ರಮಂದಿರದಲ್ಲಿ 15 ಕೋಟಿ ಗಳಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರತಂಡ ಈಗಾಗಲೇ ಸಿನಿಮಾದ ಸಕ್ಸಸ್ ಮೀಟ್ ಆಯೋಜಿಸಿದ್ದಾಗಿದೆ. ದುನಿಯಾ ವಿಜಯ್ ಅಂತೂ ಸತತ ಎರಡನೇ ಬಾರಿಗೆ ನಿರ್ದೇಶನದಲ್ಲಿ ಗೆದ್ದಿದ್ದಾರೆ. ಇದೆಲ್ಲದರ ನಡುವೆ ದುನಿಯಾ ವಿಜಯ್​ಗೆ ತಮಿಳು ಚಿತ್ರರಂಗದಿಂದ ಬುಲಾವ್ ಬಂದಿದೆ ಎನ್ನಲಾಗುತ್ತಿದೆ. ಅಸಲಿಗೆ ‘ಭೀಮ’ ಸಿನಿಮಾಕ್ಕೆ ಮುಂಚೆಯೇ ಈ ಬುಲಾವ್ ಬಂದಿತ್ತಂತೆ.

‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಸಂದರ್ಶನವೊಂದರಲ್ಲಿ ಮಾತನಾಡಿರುವ ದುನಿಯಾ ವಿಜಯ್​, ‘ತಮಿಳಿನಿಂದ ಒಂದು ಆಫರ್ ಬರುವ ಮುನ್ಸೂಚನೆ ಇದೆ. ಲೋಕೇಶ್ ಕನಗರಾಜ್ ಸಿನಿಮಾ ಒಂದರ ಪಾತ್ರಕ್ಕಾಗಿ ನನ್ನ ಬಗ್ಗೆ ಆಲೋಚಿಸಿದ್ದಾರೆ ಎಂಬ ಸುದ್ದಿ ನನ್ನ ವರೆಗೂ ಬಂದಿದೆ. ಚೆನ್ನೈನವರೇ ಹೀಗೆ ಮಾತೊಂದನ್ನು ನನಗೆ ಹೇಳಿದ್ದಾರೆ. ಆದರೆ ನನಗೆ ಲೋಕೇಶ್ ಕನಗರಾಜ್ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಮುಂದೆ ನೋಡೋಣ ಏನಾಗುತ್ತದೆಯೋ’ ಎಂದಿದ್ದಾರೆ ವಿಜಿ.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

‘ಲೋಕೇಶ್ ಕನಗರಾಜ್ ನನ್ನ ಬಹಳ ಮೆಚ್ಚಿನ ನಿರ್ದೇಶಕ. ಅವರ ಮುಂದಿನ ಸಿನಿಮಾದಲ್ಲಿ ನನಗೊಂದು ಪಾತ್ರ ನೀಡುವ ಬಗ್ಗೆ ಅಂದುಕೊಂಡಿದ್ದಾರಂತೆ. ಒಂದೊಮ್ಮೆ ನನ್ನನ್ನು ನಟಿಸಲು ಕರೆದರೆ ಕಂಡಿತ ನಿರಾಕರಣೆ ಮಾಡುವುದಿಲ್ಲ. ಖಂಡಿತ ನಟಿಸುತ್ತೇನೆ. ನನಗೆ ಬಹಳ ಇಷ್ಟದ ನಿರ್ದೇಶಕ ಅವರು’ ಎಂದಿದ್ದಾರೆ. ಅಂದಹಾಗೆ ಲೊಕೇಶ್ ಕನಗರಾಜ್ ಇದೀಗ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದರ ಬಳಿಕ ‘ವಿಕ್ರಂ 2’, ‘ಖೈದಿ 2’ ಸಿನಿಮಾಗಳನ್ನು ನಿರ್ದೇಶನ ಮಾಡಲಿದ್ದಾರೆ. ಇವುಗಳಲ್ಲಿ ದುನಿಯಾ ವಿಜಯ್ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಕಾದು ನೋಡಬೇಕಿದೆ.

ಇನ್ನು ದುನಿಯಾ ವಿಜಯ್​ಗೆ ಪರಭಾಷೆ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಈ ಹಿಂದೆ ನಂದಮೂರಿ ಬಾಲಕೃಷ್ಣ ನಟಿಸಿರುವ ‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಮುಖ್ಯ ವಿಲನ್ ಪಾತ್ರದಲ್ಲಿ ದುನಿಯಾ ವಿಜಿ ನಟಿಸಿದ್ದರು. ಸ್ವತಃ ಬಾಲಕೃಷ್ಣ, ದುನಿಯಾ ವಿಜಯ್ ನಟನೆಗೆ ಭೇಷ್ ಎಂದಿದ್ದರು. ಇದೀಗ ತಮಿಳಿನಿಂದಲೂ ಬುಲಾವ್ ಬರುವ ಸಾಧ್ಯತೆ ಇದ್ದು, ವಿಜಿ ಅದನ್ನು ಹೇಗೆ ಬಳಸಿಕೊಳ್ಳಲಿದ್ದಾರೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್