AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಟಿಸುತ್ತಿದ್ದ ಈ ಸಿನಿಮಾ ಕೆಲಸಗಳು ಕೊನೆಗೂ ಪೂರ್ಣಗೊಳ್ಳಲೇ ಇಲ್ಲ

ಪುನೀತ್​ ಅಪಾರ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರು ಮೃತಪಟ್ಟಿದ್ದರಿಂದ ಅನೇಕ ಸಿನಿಮಾ ಕೆಲಸಗಳು ಹಾಗೆಯೇ ಉಳಿದುಕೊಂಡಿವೆ. ಯಾವುದು ಆ ಸಿನಿಮಾಗಳು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪುನೀತ್​ ನಟಿಸುತ್ತಿದ್ದ ಈ ಸಿನಿಮಾ ಕೆಲಸಗಳು ಕೊನೆಗೂ ಪೂರ್ಣಗೊಳ್ಳಲೇ ಇಲ್ಲ
ಪುನೀತ್​
TV9 Web
| Edited By: |

Updated on: Oct 29, 2021 | 3:34 PM

Share

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ್ದಾರೆ. ಕೇವಲ 46ನೇ ವಯಸ್ಸಿಗೆ ಅವರು ಹೃದಯಾಘಾತಕ್ಕೆ ಒಳಗಾಗುತ್ತಾರೆ ಎಂಬುದನ್ನು ಯಾರಿಯೂ ಊಹಿಸಿರಲಿಲ್ಲ. ಪುನೀತ್​ ಅಪಾರ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರು ಮೃತಪಟ್ಟಿದ್ದರಿಂದ ಅನೇಕ ಸಿನಿಮಾ ಕೆಲಸಗಳು ಹಾಗೆಯೇ ಉಳಿದುಕೊಂಡಿವೆ. ಯಾವುದು ಆ ಸಿನಿಮಾಗಳು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ದ್ವಿತ್ವ:

ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ‘ದ್ವಿತ್ವ’ ಸಿನಿಮಾ ಮಾಡಬೆಕಿತ್ತು. ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದರು. 2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್***​’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ದ್ವಿತ್ವ ಚಿತ್ರದ ಮೂಲಕ ತ್ರಿಷಾ ಮತ್ತೆ ಕನ್ನಡಕ್ಕೆ ಬರಬೇಕಿತ್ತು.

ಜೇಮ್ಸ್

‘ಬಹದ್ದೂರ್’​, ‘ಭರ್ಜರಿ’, ‘ಭರಾಟೆ’ ಸಿನಿಮಾ ನಿರ್ದೇಶನ ಮಾಡುವ ಮೂಲಕ ಸಾಕಷ್ಟು ಹೆಸರು ಮಾಡಿರುವ ಚೇತನ್​ ಕುಮಾರ್​ ಅವರು ಪುನೀತ್​ ರಾಜ್​ಕುಮಾರ್​ ನಟನೆಯ ‘ಜೇಮ್ಸ್​’ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದರು. ಕ್ರಿಸ್​ಮಸ್​ಗೆ ಸಿನಿಮಾದ ಟೀಸರ್​ ರಿಲೀಸ್​ ಆಗಬೇಕಿತ್ತು.

ಪಿಆರ್​ಕೆ ಬ್ಯಾನರ್ ಅಡಿಯ ಸಿನಿಮಾ

ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್​ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್​ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ. ಈಗ ಈ ಕನಸು ನನಸಾಗುವ ಕಾಲ ಸನಿಹವಾಗಿದೆ ಎನ್ನುವ ಮಾತು ಕೇಳಿ ಬಂದಿತ್ತು. ‘ಪೃಥ್ವಿ’ ಸಿನಿಮಾದಲ್ಲಿ ಪುನೀತ್​ ಹಾಗೂ ಜೇಕಬ್​ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಐಎಎಸ್​ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇದೇ ರೀತಿಯ ಕಥೆಯನ್ನು ಜೇಕಬ್​ ಹೆಣೆದಿದ್ದರು. ಪುನೀತ್​ ಚಿತ್ರಕ್ಕೆ ಹೀರೋ ಆಗಿದ್ದರು. ಪಿಎಆರ್​ಕೆ ಬ್ಯಾನರ್​ ಅಡಿಯಲ್ಲಿ ಸಿನಿಮಾ ಮೂಡಿ ಬರಬೇಕಿತ್ತು.

ಪುನೀತ್ ರಾಜ್​ಕುಮಾರ್ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ