AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ದ್ವಾರಕೀಶ್​ ನಿಧನ: ದರ್ಶನ್​, ಸುದೀಪ್​ ಮೊದಲ ಪ್ರತಿಕ್ರಿಯೆ ಏನು?

ಚಂದನವನದ ಬೆಳವಣಿಗೆಯಲ್ಲಿ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​ ಅವರು ಕೊಡುಗೆ ದೊಡ್ಡದು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ನೋವಾಗಿದೆ. ನಟರಾದ ಕಿಚ್ಚ ಸುದೀಪ್​, ದರ್ಶನ್​, ಸತೀಶ್​ ನೀನಾಸಂ ಮುಂತಾದವರು ದ್ವಾರಕೀಶ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಲವು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಹಾಸ್ಯ ನಟ ದ್ವಾರಕೀಶ್​ ನಿಧನ: ದರ್ಶನ್​, ಸುದೀಪ್​ ಮೊದಲ ಪ್ರತಿಕ್ರಿಯೆ ಏನು?
ಸುದೀಪ್​, ದ್ವಾರಕೀಶ್​, ದರ್ಶನ್​
ಮದನ್​ ಕುಮಾರ್​
|

Updated on: Apr 16, 2024 | 5:02 PM

Share

ಬಣ್ಣದ ಲೋಕದಲ್ಲಿ ಸ್ಟಾರ್​ ಕಲಾವಿದನಾಗಿ ಮಿಂಚಿದ್ದ ಹಾಸ್ಯ ನಟ ದ್ವಾರಕೀಶ್​ (Dwarakish) ಅವರು 81ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು (ಏಪ್ರಿಲ್​ 16) ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದರು. ದ್ವಾರಕೀಶ್​ ಅವರ ಅಗಲಿಕೆಯ ಸುದ್ದಿ ತಿಳಿದು ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಟಾರ್​ ಕಲಾವಿದರಾದ ದರ್ಶನ್​, ಕಿಚ್ಚ ಸುದೀಪ್​ (Kichcha Sudeep) ಮುಂತಾದವರು ದ್ವಾರಕೀಶ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಹಿರಿಯ ನಟನ ಆತ್ಮಕ್ಕೆ ಶಾಂತಿ ಕೋರಲಾಗಿದೆ. ದರ್ಶನ್​ (Darshan) ಅವರು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

‘ದ್ವಾರಕೀಶ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅದನ್ನು ಯಾವಾಗಲೂ ಸ್ಮರಿಸಲಾಗುವುದು. ಅವರ ಅಗಲಿಕೆಯಿಂದ ತೀವ್ರ ನೋವಾಗಿದೆ. ನೀವು ಸದಾ ನಮ್ಮ ಹೃದಯದಲ್ಲಿರುತ್ತೀರಿ ಸರ್​’ ಎಂದು ‘ಹೊಂಬಾಳೆ ಫಿಲ್ಸ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

‘ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು, ಮರೆಯಕೂಡದು. ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತಾ’ ಎಂದು ನಟ ಕಿಚ್ಚ ಸುದೀಪ್​ ಅವರು ಪೋಸ್ಟ್ ಮಾಡಿದ್ದಾರೆ. ದ್ವಾರಕೀಶ್​ ಅವರ ಅಪರೂಪದ ಫೋಟೋಗಳನ್ನು ಸುದೀಪ್​ ಹಂಚಿಕೊಂಡಿದ್ದಾರೆ.

‘ಎಕ್ಸ್​’ (ಟ್ವಿಟರ್​) ಮೂಲಕ ನಟ ದರ್ಶನ್​ ಅವರು ಕೂಡ ದ್ವಾರಕೀಶ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ ‘ಪ್ರಚಂಡ ಕುಳ್ಳ’ನಾಗಿ 5 ದಶಕಗಳು ಸೇವೆ ಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ’ ಎಂದು ದರ್ಶನ್​ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dwarakish: ‘ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ’: ಕಂಬನಿ ಮಿಡಿದ ರಜನಿಕಾಂತ್​

‘ಕನ್ನಡಕ್ಕೆ, ಕನ್ನಡ ಚಿತ್ರರಂಗಕ್ಕೆ ನಿಮ್ಮ ಸೇವೆ ಅಪಾರ. ನಮ್ಮ ಬಾಲ್ಯ, ಸಿನಿ ಬದುಕು ಚೆಂದವಾಗಿರಲು ನಿಮ್ಮ ಸಿನಿಮಾಗಳು ಕಾರಣ. ಕನ್ನಡ ಚಿತ್ರರಂಗದ ಶ್ರೀಮಂತಿಕೆಗೆ ನೀವು ಬಹು ಕಾರಣ. ಅಂತಿಮ ನಮನಗಳು ಸರ್. ಹೋಗಿ ಬನ್ನಿ.. ನಿಮ್ಮ ಹೆಜ್ಜೆ ಗುರುತುಗಳು ಸದಾ ಚಿರಾಯು’ ಎಂದು ನಟ ಸತೀಶ್​ ನೀನಾಸಂ ಅವರು ದ್ವಾರಕೀಶ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ