AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​

‘ಇವತ್ತು ದ್ವಾರಕೀಶ್​ ಅವರು ನಮ್ಮ ಜೊತೆ ಇಲ್ಲ. ಆದರೆ ಎಂದೂ ಮರೆಯದ ಸಿನಿಮಾಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅದಕ್ಕಾಗಿ ದ್ವಾರಕೀಶ್​ ಅವರಿಗೆ ಧನ್ಯವಾದಗಳು’ ಎಂದು ನಟ, ನಿರ್ದೇಶಕ ರಮೇಶ್​ ಅರವಿಂದ್​ ಹೇಳಿದ್ದಾರೆ. ಹಿರಿಯ ಕಲಾವಿದನ ಅಗಲಿಕೆಗೆ ಅವರು ಸಂತಾಪ ಸೂಚಿಸಿದ್ದಾರೆ. ‘ಆಪ್ತಮಿತ್ರ’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ರಮೇಶ್​ ಅರವಿಂದ್​ ಅವರು ನೆನಪು ಮಾಡಿಕೊಂಡಿದ್ದಾರೆ.

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​
ರಮೇಶ್​ ಅರವಿಂದ್​, ದ್ವಾರಕೀಶ್​
ಮದನ್​ ಕುಮಾರ್​
|

Updated on: Apr 16, 2024 | 6:54 PM

Share

ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ (Dwarakish) ಅವರು ನಿಧನರಾಗಿದ್ದಾರೆ. ಇಂದು (ಏಪ್ರಿಲ್​ 16) ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ. ದ್ವಾರಕೀಶ್​ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಜೊತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ಕೆಲಸ ಮಾಡಿದ್ದರು. ಅವರು ನಿರ್ಮಾಣ ಮಾಡಿದ್ದ ‘ಆಪ್ತಮಿತ್ರ’ ಚಿತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದರು. ಇಂದು ದ್ವಾರಕೀಶ್​ ಅವರ ಅಗಲಿಕೆಯ (Dwarakish Death) ವಿಷಯ ತಿಳಿದು ರಮೇಶ್​ ಮರುಗಿದ್ದಾರೆ. ಆ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ದ್ವಾರಕೀಶ್​ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ರಮೇಶ್​ ಅರವಿಂದ್​ (Ramesh Aravind) ಮೆಲುಕು ಹಾಕಿದ್ದಾರೆ.

‘ನಾವೆಲ್ಲ ವಿದ್ಯಾರ್ಥಿಗಳಾಗಿದ್ದಾಗ ‘ಕಳ್ಳ ಕುಳ್ಳ’, ‘ಸಿಂಗಾಪುರದಲ್ಲಿ ರಾಜಾ ಕುಳ್ಳ’, ‘ಕಿಟ್ಟು ಪುಟ್ಟು’ ಮುಂತಾದ ಸಿನಿಮಾಗಳನ್ನು ನೋಡಿ ನಮಗೆ ಬಹಳ ಇಷ್ಟ ಆಗಿತ್ತು. ದ್ವಾರಕೀಶ್​ ಅವರ ಮನೆ ನಮ್ಮ ಮನೆ ಬಳಿಯೇ ಇತ್ತು. ಎನ್​.ಆರ್​. ಕಾಲೋನಿಯಲ್ಲಿ ಇರುವ ಅವರ ಮನೆಯ ಸುತ್ತ ನಾವು ಸೈಕಲ್​ನಲ್ಲಿ ರೌಂಡ್​ ಹೊಡೆಯುತ್ತಿದ್ದೆವು. ಇದೇ ದ್ವಾರಕೀಶ್​ ಅವರ ಮನೆ ಎಂದು ಹೇಳಿಕೊಂಡು ಹೋಗುತ್ತಿದ್ದೆವು. ಕೆಲವು ವರ್ಷಗಳ ನಂತರ, ನಾವು ಕಾಲೇಜಿಗೆ ಬಂದಾಗ ಆ ಮನೆಯನ್ನು ದ್ವಾರಕೀಶ್​ ಸರ್​ ಮಾರಿಬಿಟ್ಟಿದ್ದರು ಅಂತ ಕೇಳಿದೆವು. ನಮಗೆ ಆಗ ಅಯ್ಯೋ ಎನಿಸಿತು’ ಎಂದು ರಮೇಶ್​ ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ: ಹಾಸ್ಯ ನಟ ದ್ವಾರಕೀಶ್​ ನಿಧನ: ದರ್ಶನ್​, ಸುದೀಪ್​ ಮೊದಲ ಪ್ರತಿಕ್ರಿಯೆ ಏನು?

‘ಚಿತ್ರರಂಗದಲ್ಲಿ ದ್ವಾರಕೀಶ್​ ಅವರು ನೋಡಿದಂತಹ ಏರು-ಪೇರು, ಸೋಲು-ಗೆಲುವು ದೊಡ್ಡದು. ಎಲ್ಲವನ್ನೂ ದಾಟಿಕೊಂಡು ಅವರು ನಿಂತ ರೀತಿ ಬಹಳ ವಿಶೇಷ. ನಮ್ಮ ಚಿತ್ರರಂಗಕ್ಕೆ ಎಂಥೆಂಥಾ ಸಿನಿಮಾಗಳನ್ನು ನೀಡಿದ್ದಾರೆ. ಸೋಲನ್ನು ನೋಡಿದ ಬಳಿಕ ‘ಆಪ್ತ ಮಿತ್ರ’ ರೀತಿಯ ಅದ್ಭುತ ಸಿನಿಮಾವನ್ನು ನೀಡುತ್ತಾರೆ. ಅದು ನಿಜವಾದ ದ್ವಾರಕೀಶ್​. ಅವರಿಗೆ ಇದ್ದಂತಹ ಆತ್ಮವಿಶ್ವಾಸ ಅಂಥದ್ದು’ ಎಂದಿದ್ದಾರೆ ರಮೇಶ್​ ಅರವಿಂದ್​.

‘ನಾವು ಆಪ್ತಮಿತ್ರ ಸಿನಿಮಾ ಮಾಡುವಾಗ ದ್ವಾರಕೀಶ್​ ಅವರು ಸೆಟ್​ಗೆ ಬಂದರೆ ಒಂದು ಜಾಲಿ ವಾತಾವರಣ ಸೃಷ್ಟಿ ಮಾಡುತ್ತಿದ್ದರು. ಎಲ್ಲರ ಜೊತೆ ಬೆರೆಯುವ ರೀತಿ, ಅವರ ಸಮಸ್ಯೆಗಳ ಬಗ್ಗೆ ಅವರೇ ಜೋಕ್​ ಮಾಡುತ್ತಿದ್ದ ಜಾಲಿ ವ್ಯಕ್ತಿ ಅವರಾಗಿದ್ದರು. ಒಂದು ಕಡೆ ಬಿಸ್ನೆಸ್​ ಮೈಂಡ್​, ಇನ್ನೊಂದು ಕಡೆ ಸಿನಿಮಾ ಬಗ್ಗೆ ಅಪಾರವಾದ ಪ್ರೀತಿ. ಇದೆಲ್ಲ ಸೇರಿ ದ್ವಾರಕೀಶ್​ ಚಿತ್ರ ಎಂಬ ದೊಡ್ಡ ಸಂಸ್ಥೆ ಮಾಡಿದ್ದರು. 50 ಸಿನಿಮಾಗಳನ್ನು ನಿರ್ಮಾಣ ಮಾಡುವುದು ಎಂದರೆ ಸುಲಭವಲ್ಲ. ಎಂಥಾ ದೊಡ್ಡ ಸಾಧನೆ ಅಂತ ಕಲ್ಪನೆ ಮಾಡಿಕೊಳ್ಳಿ’ ಎಂದು ರಮೇಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ