‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​

‘ಇವತ್ತು ದ್ವಾರಕೀಶ್​ ಅವರು ನಮ್ಮ ಜೊತೆ ಇಲ್ಲ. ಆದರೆ ಎಂದೂ ಮರೆಯದ ಸಿನಿಮಾಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅದಕ್ಕಾಗಿ ದ್ವಾರಕೀಶ್​ ಅವರಿಗೆ ಧನ್ಯವಾದಗಳು’ ಎಂದು ನಟ, ನಿರ್ದೇಶಕ ರಮೇಶ್​ ಅರವಿಂದ್​ ಹೇಳಿದ್ದಾರೆ. ಹಿರಿಯ ಕಲಾವಿದನ ಅಗಲಿಕೆಗೆ ಅವರು ಸಂತಾಪ ಸೂಚಿಸಿದ್ದಾರೆ. ‘ಆಪ್ತಮಿತ್ರ’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ರಮೇಶ್​ ಅರವಿಂದ್​ ಅವರು ನೆನಪು ಮಾಡಿಕೊಂಡಿದ್ದಾರೆ.

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​
ರಮೇಶ್​ ಅರವಿಂದ್​, ದ್ವಾರಕೀಶ್​
Follow us
|

Updated on: Apr 16, 2024 | 6:54 PM

ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ (Dwarakish) ಅವರು ನಿಧನರಾಗಿದ್ದಾರೆ. ಇಂದು (ಏಪ್ರಿಲ್​ 16) ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ. ದ್ವಾರಕೀಶ್​ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಜೊತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ಕೆಲಸ ಮಾಡಿದ್ದರು. ಅವರು ನಿರ್ಮಾಣ ಮಾಡಿದ್ದ ‘ಆಪ್ತಮಿತ್ರ’ ಚಿತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದರು. ಇಂದು ದ್ವಾರಕೀಶ್​ ಅವರ ಅಗಲಿಕೆಯ (Dwarakish Death) ವಿಷಯ ತಿಳಿದು ರಮೇಶ್​ ಮರುಗಿದ್ದಾರೆ. ಆ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ದ್ವಾರಕೀಶ್​ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ರಮೇಶ್​ ಅರವಿಂದ್​ (Ramesh Aravind) ಮೆಲುಕು ಹಾಕಿದ್ದಾರೆ.

‘ನಾವೆಲ್ಲ ವಿದ್ಯಾರ್ಥಿಗಳಾಗಿದ್ದಾಗ ‘ಕಳ್ಳ ಕುಳ್ಳ’, ‘ಸಿಂಗಾಪುರದಲ್ಲಿ ರಾಜಾ ಕುಳ್ಳ’, ‘ಕಿಟ್ಟು ಪುಟ್ಟು’ ಮುಂತಾದ ಸಿನಿಮಾಗಳನ್ನು ನೋಡಿ ನಮಗೆ ಬಹಳ ಇಷ್ಟ ಆಗಿತ್ತು. ದ್ವಾರಕೀಶ್​ ಅವರ ಮನೆ ನಮ್ಮ ಮನೆ ಬಳಿಯೇ ಇತ್ತು. ಎನ್​.ಆರ್​. ಕಾಲೋನಿಯಲ್ಲಿ ಇರುವ ಅವರ ಮನೆಯ ಸುತ್ತ ನಾವು ಸೈಕಲ್​ನಲ್ಲಿ ರೌಂಡ್​ ಹೊಡೆಯುತ್ತಿದ್ದೆವು. ಇದೇ ದ್ವಾರಕೀಶ್​ ಅವರ ಮನೆ ಎಂದು ಹೇಳಿಕೊಂಡು ಹೋಗುತ್ತಿದ್ದೆವು. ಕೆಲವು ವರ್ಷಗಳ ನಂತರ, ನಾವು ಕಾಲೇಜಿಗೆ ಬಂದಾಗ ಆ ಮನೆಯನ್ನು ದ್ವಾರಕೀಶ್​ ಸರ್​ ಮಾರಿಬಿಟ್ಟಿದ್ದರು ಅಂತ ಕೇಳಿದೆವು. ನಮಗೆ ಆಗ ಅಯ್ಯೋ ಎನಿಸಿತು’ ಎಂದು ರಮೇಶ್​ ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ: ಹಾಸ್ಯ ನಟ ದ್ವಾರಕೀಶ್​ ನಿಧನ: ದರ್ಶನ್​, ಸುದೀಪ್​ ಮೊದಲ ಪ್ರತಿಕ್ರಿಯೆ ಏನು?

‘ಚಿತ್ರರಂಗದಲ್ಲಿ ದ್ವಾರಕೀಶ್​ ಅವರು ನೋಡಿದಂತಹ ಏರು-ಪೇರು, ಸೋಲು-ಗೆಲುವು ದೊಡ್ಡದು. ಎಲ್ಲವನ್ನೂ ದಾಟಿಕೊಂಡು ಅವರು ನಿಂತ ರೀತಿ ಬಹಳ ವಿಶೇಷ. ನಮ್ಮ ಚಿತ್ರರಂಗಕ್ಕೆ ಎಂಥೆಂಥಾ ಸಿನಿಮಾಗಳನ್ನು ನೀಡಿದ್ದಾರೆ. ಸೋಲನ್ನು ನೋಡಿದ ಬಳಿಕ ‘ಆಪ್ತ ಮಿತ್ರ’ ರೀತಿಯ ಅದ್ಭುತ ಸಿನಿಮಾವನ್ನು ನೀಡುತ್ತಾರೆ. ಅದು ನಿಜವಾದ ದ್ವಾರಕೀಶ್​. ಅವರಿಗೆ ಇದ್ದಂತಹ ಆತ್ಮವಿಶ್ವಾಸ ಅಂಥದ್ದು’ ಎಂದಿದ್ದಾರೆ ರಮೇಶ್​ ಅರವಿಂದ್​.

‘ನಾವು ಆಪ್ತಮಿತ್ರ ಸಿನಿಮಾ ಮಾಡುವಾಗ ದ್ವಾರಕೀಶ್​ ಅವರು ಸೆಟ್​ಗೆ ಬಂದರೆ ಒಂದು ಜಾಲಿ ವಾತಾವರಣ ಸೃಷ್ಟಿ ಮಾಡುತ್ತಿದ್ದರು. ಎಲ್ಲರ ಜೊತೆ ಬೆರೆಯುವ ರೀತಿ, ಅವರ ಸಮಸ್ಯೆಗಳ ಬಗ್ಗೆ ಅವರೇ ಜೋಕ್​ ಮಾಡುತ್ತಿದ್ದ ಜಾಲಿ ವ್ಯಕ್ತಿ ಅವರಾಗಿದ್ದರು. ಒಂದು ಕಡೆ ಬಿಸ್ನೆಸ್​ ಮೈಂಡ್​, ಇನ್ನೊಂದು ಕಡೆ ಸಿನಿಮಾ ಬಗ್ಗೆ ಅಪಾರವಾದ ಪ್ರೀತಿ. ಇದೆಲ್ಲ ಸೇರಿ ದ್ವಾರಕೀಶ್​ ಚಿತ್ರ ಎಂಬ ದೊಡ್ಡ ಸಂಸ್ಥೆ ಮಾಡಿದ್ದರು. 50 ಸಿನಿಮಾಗಳನ್ನು ನಿರ್ಮಾಣ ಮಾಡುವುದು ಎಂದರೆ ಸುಲಭವಲ್ಲ. ಎಂಥಾ ದೊಡ್ಡ ಸಾಧನೆ ಅಂತ ಕಲ್ಪನೆ ಮಾಡಿಕೊಳ್ಳಿ’ ಎಂದು ರಮೇಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ