AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​

‘ಇವತ್ತು ದ್ವಾರಕೀಶ್​ ಅವರು ನಮ್ಮ ಜೊತೆ ಇಲ್ಲ. ಆದರೆ ಎಂದೂ ಮರೆಯದ ಸಿನಿಮಾಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅದಕ್ಕಾಗಿ ದ್ವಾರಕೀಶ್​ ಅವರಿಗೆ ಧನ್ಯವಾದಗಳು’ ಎಂದು ನಟ, ನಿರ್ದೇಶಕ ರಮೇಶ್​ ಅರವಿಂದ್​ ಹೇಳಿದ್ದಾರೆ. ಹಿರಿಯ ಕಲಾವಿದನ ಅಗಲಿಕೆಗೆ ಅವರು ಸಂತಾಪ ಸೂಚಿಸಿದ್ದಾರೆ. ‘ಆಪ್ತಮಿತ್ರ’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ರಮೇಶ್​ ಅರವಿಂದ್​ ಅವರು ನೆನಪು ಮಾಡಿಕೊಂಡಿದ್ದಾರೆ.

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​
ರಮೇಶ್​ ಅರವಿಂದ್​, ದ್ವಾರಕೀಶ್​
ಮದನ್​ ಕುಮಾರ್​
|

Updated on: Apr 16, 2024 | 6:54 PM

Share

ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ (Dwarakish) ಅವರು ನಿಧನರಾಗಿದ್ದಾರೆ. ಇಂದು (ಏಪ್ರಿಲ್​ 16) ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ. ದ್ವಾರಕೀಶ್​ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಜೊತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ಕೆಲಸ ಮಾಡಿದ್ದರು. ಅವರು ನಿರ್ಮಾಣ ಮಾಡಿದ್ದ ‘ಆಪ್ತಮಿತ್ರ’ ಚಿತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದರು. ಇಂದು ದ್ವಾರಕೀಶ್​ ಅವರ ಅಗಲಿಕೆಯ (Dwarakish Death) ವಿಷಯ ತಿಳಿದು ರಮೇಶ್​ ಮರುಗಿದ್ದಾರೆ. ಆ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ದ್ವಾರಕೀಶ್​ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ರಮೇಶ್​ ಅರವಿಂದ್​ (Ramesh Aravind) ಮೆಲುಕು ಹಾಕಿದ್ದಾರೆ.

‘ನಾವೆಲ್ಲ ವಿದ್ಯಾರ್ಥಿಗಳಾಗಿದ್ದಾಗ ‘ಕಳ್ಳ ಕುಳ್ಳ’, ‘ಸಿಂಗಾಪುರದಲ್ಲಿ ರಾಜಾ ಕುಳ್ಳ’, ‘ಕಿಟ್ಟು ಪುಟ್ಟು’ ಮುಂತಾದ ಸಿನಿಮಾಗಳನ್ನು ನೋಡಿ ನಮಗೆ ಬಹಳ ಇಷ್ಟ ಆಗಿತ್ತು. ದ್ವಾರಕೀಶ್​ ಅವರ ಮನೆ ನಮ್ಮ ಮನೆ ಬಳಿಯೇ ಇತ್ತು. ಎನ್​.ಆರ್​. ಕಾಲೋನಿಯಲ್ಲಿ ಇರುವ ಅವರ ಮನೆಯ ಸುತ್ತ ನಾವು ಸೈಕಲ್​ನಲ್ಲಿ ರೌಂಡ್​ ಹೊಡೆಯುತ್ತಿದ್ದೆವು. ಇದೇ ದ್ವಾರಕೀಶ್​ ಅವರ ಮನೆ ಎಂದು ಹೇಳಿಕೊಂಡು ಹೋಗುತ್ತಿದ್ದೆವು. ಕೆಲವು ವರ್ಷಗಳ ನಂತರ, ನಾವು ಕಾಲೇಜಿಗೆ ಬಂದಾಗ ಆ ಮನೆಯನ್ನು ದ್ವಾರಕೀಶ್​ ಸರ್​ ಮಾರಿಬಿಟ್ಟಿದ್ದರು ಅಂತ ಕೇಳಿದೆವು. ನಮಗೆ ಆಗ ಅಯ್ಯೋ ಎನಿಸಿತು’ ಎಂದು ರಮೇಶ್​ ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ: ಹಾಸ್ಯ ನಟ ದ್ವಾರಕೀಶ್​ ನಿಧನ: ದರ್ಶನ್​, ಸುದೀಪ್​ ಮೊದಲ ಪ್ರತಿಕ್ರಿಯೆ ಏನು?

‘ಚಿತ್ರರಂಗದಲ್ಲಿ ದ್ವಾರಕೀಶ್​ ಅವರು ನೋಡಿದಂತಹ ಏರು-ಪೇರು, ಸೋಲು-ಗೆಲುವು ದೊಡ್ಡದು. ಎಲ್ಲವನ್ನೂ ದಾಟಿಕೊಂಡು ಅವರು ನಿಂತ ರೀತಿ ಬಹಳ ವಿಶೇಷ. ನಮ್ಮ ಚಿತ್ರರಂಗಕ್ಕೆ ಎಂಥೆಂಥಾ ಸಿನಿಮಾಗಳನ್ನು ನೀಡಿದ್ದಾರೆ. ಸೋಲನ್ನು ನೋಡಿದ ಬಳಿಕ ‘ಆಪ್ತ ಮಿತ್ರ’ ರೀತಿಯ ಅದ್ಭುತ ಸಿನಿಮಾವನ್ನು ನೀಡುತ್ತಾರೆ. ಅದು ನಿಜವಾದ ದ್ವಾರಕೀಶ್​. ಅವರಿಗೆ ಇದ್ದಂತಹ ಆತ್ಮವಿಶ್ವಾಸ ಅಂಥದ್ದು’ ಎಂದಿದ್ದಾರೆ ರಮೇಶ್​ ಅರವಿಂದ್​.

‘ನಾವು ಆಪ್ತಮಿತ್ರ ಸಿನಿಮಾ ಮಾಡುವಾಗ ದ್ವಾರಕೀಶ್​ ಅವರು ಸೆಟ್​ಗೆ ಬಂದರೆ ಒಂದು ಜಾಲಿ ವಾತಾವರಣ ಸೃಷ್ಟಿ ಮಾಡುತ್ತಿದ್ದರು. ಎಲ್ಲರ ಜೊತೆ ಬೆರೆಯುವ ರೀತಿ, ಅವರ ಸಮಸ್ಯೆಗಳ ಬಗ್ಗೆ ಅವರೇ ಜೋಕ್​ ಮಾಡುತ್ತಿದ್ದ ಜಾಲಿ ವ್ಯಕ್ತಿ ಅವರಾಗಿದ್ದರು. ಒಂದು ಕಡೆ ಬಿಸ್ನೆಸ್​ ಮೈಂಡ್​, ಇನ್ನೊಂದು ಕಡೆ ಸಿನಿಮಾ ಬಗ್ಗೆ ಅಪಾರವಾದ ಪ್ರೀತಿ. ಇದೆಲ್ಲ ಸೇರಿ ದ್ವಾರಕೀಶ್​ ಚಿತ್ರ ಎಂಬ ದೊಡ್ಡ ಸಂಸ್ಥೆ ಮಾಡಿದ್ದರು. 50 ಸಿನಿಮಾಗಳನ್ನು ನಿರ್ಮಾಣ ಮಾಡುವುದು ಎಂದರೆ ಸುಲಭವಲ್ಲ. ಎಂಥಾ ದೊಡ್ಡ ಸಾಧನೆ ಅಂತ ಕಲ್ಪನೆ ಮಾಡಿಕೊಳ್ಳಿ’ ಎಂದು ರಮೇಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!