AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?

ನಿರ್ಮಾಪಕನಾಗಿ ದ್ವಾರಕೀಶ್​ ಅವರು ಸ್ಯಾಂಡಲ್​ವುಡ್​ನಲ್ಲಿ ಯಶಸ್ಸು ಕಂಡಿದ್ದರು. ವಿಷ್ಣುವರ್ಧನ್​ ಜೊತೆ ಅವರು ಹಲವು ಸಿನಿಮಾ ಮಾಡಿದ್ದರು. ‘ವಿಷ್ಣು ಒಳ್ಳೆಯ ನಟ. ನಾನು ಒಳ್ಳೆಯ ನಿರ್ಮಾಪಕ. ಅವನಿಗೆ ಒಳ್ಳೆಯ ನಿರ್ಮಾಪಕ ಬೇಕಿತ್ತು. ನನಗೆ ಒಳ್ಳೆಯ ನಟ ಬೇಕಿತ್ತು. ಅದೇ ನಮ್ಮ ಒಟನಾಡಕ್ಕೆ ಕಾರಣ’ ಎಂದು ದ್ವಾರಕೀಶ್​ ಹೇಳಿದ್ದರು. ಬಿ. ಗಣಪತಿ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರ ಹಂಚಿಕೊಂಡಿದ್ದರು.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?
ಡಾ. ರಾಜ್​ಕುಮಾರ್​, ದ್ವಾರಕೀಶ್​, ವಿಷ್ಣುವರ್ಧನ್
ಮದನ್​ ಕುಮಾರ್​
|

Updated on: Apr 16, 2024 | 3:38 PM

Share

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ ಅವರ ನಿಧನಕ್ಕೆ (Dwarakish Death) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್​ ನೀಡಿದ ಕೊಡುಗೆಯನ್ನು ಸ್ವರಿಸಿಕೊಳ್ಳಲಾಗುತ್ತಿದೆ. ಬಹುತೇಕ ಎಲ್ಲ ಸ್ಟಾರ್​ ಕಲಾವಿದರ ಜೊತೆ ದ್ವಾರಕೀಶ್​ (Dwarakish) ಅವರು ಒಡನಾಟ ಹೊಂದಿದ್ದರು. ನಟ ರಾಜ್​ಕುಮಾರ್​ ಜೊತೆಗೂ ಅನೇಕ ಸಿನಿಮಾಗಳಲ್ಲಿ ದ್ವಾರಕೀಶ್​ ನಟಿಸಿದ್ದರು. ಆದರೆ ದ್ವಾರಕೀಶ್​ ನಿರ್ಮಾಣದ ಎರಡು ಸಿನಿಮಾಗಳಲ್ಲಿ ಮಾತ್ರ ರಾಜ್​ಕುಮಾರ್​ (Dr Rajkumar) ನಟಿಸಿದರು. ಆ ಬಳಿಕ ಅವರು ವಿಷ್ಣುವರ್ಧನ್​ ಜೊತೆಗೆ ಹೆಚ್ಚು ಸಿನಿಮಾಗಳನ್ನು ಮಾಡಲು ಆರಂಭಿಸಿದರು.

ಡಾ. ರಾಜ್​ಕುಮಾರ್ ಅವರ ಕಾಲ್​ಶೀಟ್​ ಸಿಗುವುದು ಎಂದರೆ ಸುಲಭದ ಮಾತಲ್ಲ. 1960ರ ದಶಕದಲ್ಲಿ ಅವರು ಅಷ್ಟು ಬ್ಯುಸಿ ಆಗಿದ್ದರು. ದ್ವಾರಕೀಶ್​ ಅವರು ಆಗತಾನೇ ನಿರ್ಮಾಪಕನಾಗಿದ್ದರು. ದ್ವಾರಕೀಶ್ ಆಗಿನ್ನೂ 25-26ರ ಪ್ರಾಯದ ಯುವಕ. ಅದಾಗಲೇ ರಾಜ್​ಕುಮಾರ್​ ಜೊತೆ ನಟಿಸಿ ಫೇಮಸ್​ ಆಗಿದ್ದರು ಅವರು ನಿರ್ಮಾಪಕನಾಗಿ ಡೇಟ್ಸ್​ ಪಡೆಯುವುದು ಸಲಭ ಆಗಿರಲಿಲ್ಲ. ಹೇಗೋ ಡೇಟ್ಸ್​ ಪಡೆದ ಅವರು ‘ಮೇಯರ್​ ಮುತ್ತಣ್ಣ’ ಸಿನಿಮಾ ಮಾಡಿ ಯಶಸ್ಸು ಕಂಡರು.

ಇದನ್ನೂ ಓದಿ: ರಿಷಬ್ ಶೆಟ್ಟಿಗೆ ಮನೆ ಮಾರಿದ್ದ ದ್ವಾರಕೀಶ್; ಬೆಂಗಳೂರಿನ ಹೊರ ವಲಯದಲ್ಲಿ ವಾಸವಾಗಿದ್ದರು

ಬಳಿಕ ದ್ವಾರಕೀಶ್​ ಅವರು ಡಾ. ರಾಜ್​ಕುಮಾರ್ ನಟನೆಯ ‘ಭಾಗ್ಯವಂತರು’ ಸಿನಿಮಾವನ್ನು ನಿರ್ಮಿಸಿದರು. ಅದಾದ ಬಳಿಕ ಮತ್ತೆ ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ದ್ವಾರಕೀಶ್​ ಬಂಡವಾಳ ಹೂಡಲು ಸಾಧ್ಯವಾಗಲಿಲ್ಲ. ಯಾಕೆಂದರೆ, ಅದಾಗಲೇ ಪಾರ್ವತಮ್ಮ ರಾಜ್​ಕುಮಾರ್​ ಅವರು ತಮ್ಮದೇ ‘ವಜ್ರೇಶ್ವರಿ ಕಂಬೈನ್ಸ್’ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದರು. ರಾಜ್​ಕುಮಾರ್​ ಅವರ ಎಲ್ಲ ಸಿನಿಮಾಗಳು ‘ವಜ್ರೇಶ್ವರಿ ಕಂಬೈನ್ಸ್​’ ಮೂಲಕವೇ ನಿರ್ಮಾಣವಾಗಲು ಆರಂಭವಾದವು. ಹಾಗಾಗಿ ದ್ವಾರಕೀಶ್​ ಅವರಿಗಾಗಲಿ ಅಥವಾ ಬೇರೆ ನಿರ್ಮಾಪಕರಿಗಾಗಲಿ ಅಣ್ಣಾವ್ರ ಕಾಲ್​ಶೀಟ್​ ಸಿಗದಾಯಿತು.

1970ರ ದಶಕದಲ್ಲಿ ವಿಷ್ಣುವರ್ಧನ್​ ಸ್ಟಾರ್​ ನಟನಾದರು. ವಿಷ್ಣುವರ್ಧನ್​ ಮತ್ತು ದ್ವಾರಕೀಶ್​ ಅವರು ‘ಕಳ್ಳ ಕುಳ್ಳ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರಿಬ್ಬರು ಏಕವಚನದಲ್ಲಿ ಮಾತನಾಡಿಕೊಳ್ಳುವಷ್ಟು ಆಪ್ತರಾದರು. ನಿರ್ಮಾಪಕನಾಗಿ ಸಕ್ರಿಯರಾಗಿದ್ದ ದ್ವಾರಕೀಶ್​ ಅವರಿಗೆ ಈ ರೀತಿಯ ಸ್ಟಾರ್​ ಕಲಾವಿದರ ಕಾಲ್​ಶೀಟ್​ ಅಗತ್ಯವಾಗಿತ್ತು. ಅತ್ತ ಡಾ. ರಾಜ್​ಕುಮಾರ್​ ಅವರ ಡೇಟ್ಸ್​ ಸಿಗದಿದ್ದಾಗ, ಇತ್ತ ದ್ವಾರಕೀಶ್​ ಅವರಿಗೆ ವಿಷ್ಣು ಅವರ ಕಾಲ್​ಶೀಟ್​ ಸುಲಭದಲ್ಲಿ ಸಿಗುವಂತಾಯಿತು. ಹಾಗಾಗಿ ಅವರು ವಿಷ್ಣುಗಾಗಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ