AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?

ನಿರ್ಮಾಪಕನಾಗಿ ದ್ವಾರಕೀಶ್​ ಅವರು ಸ್ಯಾಂಡಲ್​ವುಡ್​ನಲ್ಲಿ ಯಶಸ್ಸು ಕಂಡಿದ್ದರು. ವಿಷ್ಣುವರ್ಧನ್​ ಜೊತೆ ಅವರು ಹಲವು ಸಿನಿಮಾ ಮಾಡಿದ್ದರು. ‘ವಿಷ್ಣು ಒಳ್ಳೆಯ ನಟ. ನಾನು ಒಳ್ಳೆಯ ನಿರ್ಮಾಪಕ. ಅವನಿಗೆ ಒಳ್ಳೆಯ ನಿರ್ಮಾಪಕ ಬೇಕಿತ್ತು. ನನಗೆ ಒಳ್ಳೆಯ ನಟ ಬೇಕಿತ್ತು. ಅದೇ ನಮ್ಮ ಒಟನಾಡಕ್ಕೆ ಕಾರಣ’ ಎಂದು ದ್ವಾರಕೀಶ್​ ಹೇಳಿದ್ದರು. ಬಿ. ಗಣಪತಿ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರ ಹಂಚಿಕೊಂಡಿದ್ದರು.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?
ಡಾ. ರಾಜ್​ಕುಮಾರ್​, ದ್ವಾರಕೀಶ್​, ವಿಷ್ಣುವರ್ಧನ್
ಮದನ್​ ಕುಮಾರ್​
|

Updated on: Apr 16, 2024 | 3:38 PM

Share

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ ಅವರ ನಿಧನಕ್ಕೆ (Dwarakish Death) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್​ ನೀಡಿದ ಕೊಡುಗೆಯನ್ನು ಸ್ವರಿಸಿಕೊಳ್ಳಲಾಗುತ್ತಿದೆ. ಬಹುತೇಕ ಎಲ್ಲ ಸ್ಟಾರ್​ ಕಲಾವಿದರ ಜೊತೆ ದ್ವಾರಕೀಶ್​ (Dwarakish) ಅವರು ಒಡನಾಟ ಹೊಂದಿದ್ದರು. ನಟ ರಾಜ್​ಕುಮಾರ್​ ಜೊತೆಗೂ ಅನೇಕ ಸಿನಿಮಾಗಳಲ್ಲಿ ದ್ವಾರಕೀಶ್​ ನಟಿಸಿದ್ದರು. ಆದರೆ ದ್ವಾರಕೀಶ್​ ನಿರ್ಮಾಣದ ಎರಡು ಸಿನಿಮಾಗಳಲ್ಲಿ ಮಾತ್ರ ರಾಜ್​ಕುಮಾರ್​ (Dr Rajkumar) ನಟಿಸಿದರು. ಆ ಬಳಿಕ ಅವರು ವಿಷ್ಣುವರ್ಧನ್​ ಜೊತೆಗೆ ಹೆಚ್ಚು ಸಿನಿಮಾಗಳನ್ನು ಮಾಡಲು ಆರಂಭಿಸಿದರು.

ಡಾ. ರಾಜ್​ಕುಮಾರ್ ಅವರ ಕಾಲ್​ಶೀಟ್​ ಸಿಗುವುದು ಎಂದರೆ ಸುಲಭದ ಮಾತಲ್ಲ. 1960ರ ದಶಕದಲ್ಲಿ ಅವರು ಅಷ್ಟು ಬ್ಯುಸಿ ಆಗಿದ್ದರು. ದ್ವಾರಕೀಶ್​ ಅವರು ಆಗತಾನೇ ನಿರ್ಮಾಪಕನಾಗಿದ್ದರು. ದ್ವಾರಕೀಶ್ ಆಗಿನ್ನೂ 25-26ರ ಪ್ರಾಯದ ಯುವಕ. ಅದಾಗಲೇ ರಾಜ್​ಕುಮಾರ್​ ಜೊತೆ ನಟಿಸಿ ಫೇಮಸ್​ ಆಗಿದ್ದರು ಅವರು ನಿರ್ಮಾಪಕನಾಗಿ ಡೇಟ್ಸ್​ ಪಡೆಯುವುದು ಸಲಭ ಆಗಿರಲಿಲ್ಲ. ಹೇಗೋ ಡೇಟ್ಸ್​ ಪಡೆದ ಅವರು ‘ಮೇಯರ್​ ಮುತ್ತಣ್ಣ’ ಸಿನಿಮಾ ಮಾಡಿ ಯಶಸ್ಸು ಕಂಡರು.

ಇದನ್ನೂ ಓದಿ: ರಿಷಬ್ ಶೆಟ್ಟಿಗೆ ಮನೆ ಮಾರಿದ್ದ ದ್ವಾರಕೀಶ್; ಬೆಂಗಳೂರಿನ ಹೊರ ವಲಯದಲ್ಲಿ ವಾಸವಾಗಿದ್ದರು

ಬಳಿಕ ದ್ವಾರಕೀಶ್​ ಅವರು ಡಾ. ರಾಜ್​ಕುಮಾರ್ ನಟನೆಯ ‘ಭಾಗ್ಯವಂತರು’ ಸಿನಿಮಾವನ್ನು ನಿರ್ಮಿಸಿದರು. ಅದಾದ ಬಳಿಕ ಮತ್ತೆ ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ದ್ವಾರಕೀಶ್​ ಬಂಡವಾಳ ಹೂಡಲು ಸಾಧ್ಯವಾಗಲಿಲ್ಲ. ಯಾಕೆಂದರೆ, ಅದಾಗಲೇ ಪಾರ್ವತಮ್ಮ ರಾಜ್​ಕುಮಾರ್​ ಅವರು ತಮ್ಮದೇ ‘ವಜ್ರೇಶ್ವರಿ ಕಂಬೈನ್ಸ್’ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದರು. ರಾಜ್​ಕುಮಾರ್​ ಅವರ ಎಲ್ಲ ಸಿನಿಮಾಗಳು ‘ವಜ್ರೇಶ್ವರಿ ಕಂಬೈನ್ಸ್​’ ಮೂಲಕವೇ ನಿರ್ಮಾಣವಾಗಲು ಆರಂಭವಾದವು. ಹಾಗಾಗಿ ದ್ವಾರಕೀಶ್​ ಅವರಿಗಾಗಲಿ ಅಥವಾ ಬೇರೆ ನಿರ್ಮಾಪಕರಿಗಾಗಲಿ ಅಣ್ಣಾವ್ರ ಕಾಲ್​ಶೀಟ್​ ಸಿಗದಾಯಿತು.

1970ರ ದಶಕದಲ್ಲಿ ವಿಷ್ಣುವರ್ಧನ್​ ಸ್ಟಾರ್​ ನಟನಾದರು. ವಿಷ್ಣುವರ್ಧನ್​ ಮತ್ತು ದ್ವಾರಕೀಶ್​ ಅವರು ‘ಕಳ್ಳ ಕುಳ್ಳ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರಿಬ್ಬರು ಏಕವಚನದಲ್ಲಿ ಮಾತನಾಡಿಕೊಳ್ಳುವಷ್ಟು ಆಪ್ತರಾದರು. ನಿರ್ಮಾಪಕನಾಗಿ ಸಕ್ರಿಯರಾಗಿದ್ದ ದ್ವಾರಕೀಶ್​ ಅವರಿಗೆ ಈ ರೀತಿಯ ಸ್ಟಾರ್​ ಕಲಾವಿದರ ಕಾಲ್​ಶೀಟ್​ ಅಗತ್ಯವಾಗಿತ್ತು. ಅತ್ತ ಡಾ. ರಾಜ್​ಕುಮಾರ್​ ಅವರ ಡೇಟ್ಸ್​ ಸಿಗದಿದ್ದಾಗ, ಇತ್ತ ದ್ವಾರಕೀಶ್​ ಅವರಿಗೆ ವಿಷ್ಣು ಅವರ ಕಾಲ್​ಶೀಟ್​ ಸುಲಭದಲ್ಲಿ ಸಿಗುವಂತಾಯಿತು. ಹಾಗಾಗಿ ಅವರು ವಿಷ್ಣುಗಾಗಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?