AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?

ನಿರ್ಮಾಪಕನಾಗಿ ದ್ವಾರಕೀಶ್​ ಅವರು ಸ್ಯಾಂಡಲ್​ವುಡ್​ನಲ್ಲಿ ಯಶಸ್ಸು ಕಂಡಿದ್ದರು. ವಿಷ್ಣುವರ್ಧನ್​ ಜೊತೆ ಅವರು ಹಲವು ಸಿನಿಮಾ ಮಾಡಿದ್ದರು. ‘ವಿಷ್ಣು ಒಳ್ಳೆಯ ನಟ. ನಾನು ಒಳ್ಳೆಯ ನಿರ್ಮಾಪಕ. ಅವನಿಗೆ ಒಳ್ಳೆಯ ನಿರ್ಮಾಪಕ ಬೇಕಿತ್ತು. ನನಗೆ ಒಳ್ಳೆಯ ನಟ ಬೇಕಿತ್ತು. ಅದೇ ನಮ್ಮ ಒಟನಾಡಕ್ಕೆ ಕಾರಣ’ ಎಂದು ದ್ವಾರಕೀಶ್​ ಹೇಳಿದ್ದರು. ಬಿ. ಗಣಪತಿ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರ ಹಂಚಿಕೊಂಡಿದ್ದರು.

ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?
ಡಾ. ರಾಜ್​ಕುಮಾರ್​, ದ್ವಾರಕೀಶ್​, ವಿಷ್ಣುವರ್ಧನ್
ಮದನ್​ ಕುಮಾರ್​
|

Updated on: Apr 16, 2024 | 3:38 PM

Share

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್​ ಅವರ ನಿಧನಕ್ಕೆ (Dwarakish Death) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್​ ನೀಡಿದ ಕೊಡುಗೆಯನ್ನು ಸ್ವರಿಸಿಕೊಳ್ಳಲಾಗುತ್ತಿದೆ. ಬಹುತೇಕ ಎಲ್ಲ ಸ್ಟಾರ್​ ಕಲಾವಿದರ ಜೊತೆ ದ್ವಾರಕೀಶ್​ (Dwarakish) ಅವರು ಒಡನಾಟ ಹೊಂದಿದ್ದರು. ನಟ ರಾಜ್​ಕುಮಾರ್​ ಜೊತೆಗೂ ಅನೇಕ ಸಿನಿಮಾಗಳಲ್ಲಿ ದ್ವಾರಕೀಶ್​ ನಟಿಸಿದ್ದರು. ಆದರೆ ದ್ವಾರಕೀಶ್​ ನಿರ್ಮಾಣದ ಎರಡು ಸಿನಿಮಾಗಳಲ್ಲಿ ಮಾತ್ರ ರಾಜ್​ಕುಮಾರ್​ (Dr Rajkumar) ನಟಿಸಿದರು. ಆ ಬಳಿಕ ಅವರು ವಿಷ್ಣುವರ್ಧನ್​ ಜೊತೆಗೆ ಹೆಚ್ಚು ಸಿನಿಮಾಗಳನ್ನು ಮಾಡಲು ಆರಂಭಿಸಿದರು.

ಡಾ. ರಾಜ್​ಕುಮಾರ್ ಅವರ ಕಾಲ್​ಶೀಟ್​ ಸಿಗುವುದು ಎಂದರೆ ಸುಲಭದ ಮಾತಲ್ಲ. 1960ರ ದಶಕದಲ್ಲಿ ಅವರು ಅಷ್ಟು ಬ್ಯುಸಿ ಆಗಿದ್ದರು. ದ್ವಾರಕೀಶ್​ ಅವರು ಆಗತಾನೇ ನಿರ್ಮಾಪಕನಾಗಿದ್ದರು. ದ್ವಾರಕೀಶ್ ಆಗಿನ್ನೂ 25-26ರ ಪ್ರಾಯದ ಯುವಕ. ಅದಾಗಲೇ ರಾಜ್​ಕುಮಾರ್​ ಜೊತೆ ನಟಿಸಿ ಫೇಮಸ್​ ಆಗಿದ್ದರು ಅವರು ನಿರ್ಮಾಪಕನಾಗಿ ಡೇಟ್ಸ್​ ಪಡೆಯುವುದು ಸಲಭ ಆಗಿರಲಿಲ್ಲ. ಹೇಗೋ ಡೇಟ್ಸ್​ ಪಡೆದ ಅವರು ‘ಮೇಯರ್​ ಮುತ್ತಣ್ಣ’ ಸಿನಿಮಾ ಮಾಡಿ ಯಶಸ್ಸು ಕಂಡರು.

ಇದನ್ನೂ ಓದಿ: ರಿಷಬ್ ಶೆಟ್ಟಿಗೆ ಮನೆ ಮಾರಿದ್ದ ದ್ವಾರಕೀಶ್; ಬೆಂಗಳೂರಿನ ಹೊರ ವಲಯದಲ್ಲಿ ವಾಸವಾಗಿದ್ದರು

ಬಳಿಕ ದ್ವಾರಕೀಶ್​ ಅವರು ಡಾ. ರಾಜ್​ಕುಮಾರ್ ನಟನೆಯ ‘ಭಾಗ್ಯವಂತರು’ ಸಿನಿಮಾವನ್ನು ನಿರ್ಮಿಸಿದರು. ಅದಾದ ಬಳಿಕ ಮತ್ತೆ ಡಾ. ರಾಜ್​ಕುಮಾರ್​ ಸಿನಿಮಾಗಳಿಗೆ ದ್ವಾರಕೀಶ್​ ಬಂಡವಾಳ ಹೂಡಲು ಸಾಧ್ಯವಾಗಲಿಲ್ಲ. ಯಾಕೆಂದರೆ, ಅದಾಗಲೇ ಪಾರ್ವತಮ್ಮ ರಾಜ್​ಕುಮಾರ್​ ಅವರು ತಮ್ಮದೇ ‘ವಜ್ರೇಶ್ವರಿ ಕಂಬೈನ್ಸ್’ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದರು. ರಾಜ್​ಕುಮಾರ್​ ಅವರ ಎಲ್ಲ ಸಿನಿಮಾಗಳು ‘ವಜ್ರೇಶ್ವರಿ ಕಂಬೈನ್ಸ್​’ ಮೂಲಕವೇ ನಿರ್ಮಾಣವಾಗಲು ಆರಂಭವಾದವು. ಹಾಗಾಗಿ ದ್ವಾರಕೀಶ್​ ಅವರಿಗಾಗಲಿ ಅಥವಾ ಬೇರೆ ನಿರ್ಮಾಪಕರಿಗಾಗಲಿ ಅಣ್ಣಾವ್ರ ಕಾಲ್​ಶೀಟ್​ ಸಿಗದಾಯಿತು.

1970ರ ದಶಕದಲ್ಲಿ ವಿಷ್ಣುವರ್ಧನ್​ ಸ್ಟಾರ್​ ನಟನಾದರು. ವಿಷ್ಣುವರ್ಧನ್​ ಮತ್ತು ದ್ವಾರಕೀಶ್​ ಅವರು ‘ಕಳ್ಳ ಕುಳ್ಳ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರಿಬ್ಬರು ಏಕವಚನದಲ್ಲಿ ಮಾತನಾಡಿಕೊಳ್ಳುವಷ್ಟು ಆಪ್ತರಾದರು. ನಿರ್ಮಾಪಕನಾಗಿ ಸಕ್ರಿಯರಾಗಿದ್ದ ದ್ವಾರಕೀಶ್​ ಅವರಿಗೆ ಈ ರೀತಿಯ ಸ್ಟಾರ್​ ಕಲಾವಿದರ ಕಾಲ್​ಶೀಟ್​ ಅಗತ್ಯವಾಗಿತ್ತು. ಅತ್ತ ಡಾ. ರಾಜ್​ಕುಮಾರ್​ ಅವರ ಡೇಟ್ಸ್​ ಸಿಗದಿದ್ದಾಗ, ಇತ್ತ ದ್ವಾರಕೀಶ್​ ಅವರಿಗೆ ವಿಷ್ಣು ಅವರ ಕಾಲ್​ಶೀಟ್​ ಸುಲಭದಲ್ಲಿ ಸಿಗುವಂತಾಯಿತು. ಹಾಗಾಗಿ ಅವರು ವಿಷ್ಣುಗಾಗಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು