AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಸಂಭಾವನೆ ಅಲ್ಲ, ಲಾಭದಲ್ಲೂ ಪಾಲು ಪಡೆಯುತ್ತಾರೆ ಯಶ್; ‘ಕೆಜಿಎಫ್’ಗೂ ಮೊದಲಿನಿಂದಲೇ ಈ ತಂತ್ರ

ರಾಕಿಂಗ್ ಸ್ಟಾರ್ ಯಶ್ ತಮ್ಮ ಸಂಭಾವನೆ ಮತ್ತು ಲಾಭ ಹಂಚಿಕೆ ಮಾದರಿಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನಿರ್ಮಾಪಕರ ಜೊತೆ ಸೇರಿ ರಿಸ್ಕ್ ತೆಗೆದುಕೊಳ್ಳುವ ತಮ್ಮ ಸೂತ್ರವನ್ನು ವಿವರಿಸಿದ್ದಾರೆ. ಆರಂಭಿಕ ದಿನಗಳಲ್ಲಿ ಏಳು ಸಿನಿಮಾಗಳನ್ನು ನಿರಾಕರಿಸಿದ ರೋಚಕ ಕಥೆ ಹಾಗೂ ಟಾಕ್ಸಿಕ್ ಸಿನಿಮಾ ಬಜೆಟ್ ವಿವರ ಇಲ್ಲಿದೆ.

ಕೇವಲ ಸಂಭಾವನೆ ಅಲ್ಲ, ಲಾಭದಲ್ಲೂ ಪಾಲು ಪಡೆಯುತ್ತಾರೆ ಯಶ್; 'ಕೆಜಿಎಫ್'ಗೂ ಮೊದಲಿನಿಂದಲೇ ಈ ತಂತ್ರ
ಯಶ್
ರಾಜೇಶ್ ದುಗ್ಗುಮನೆ
|

Updated on: Aug 17, 2026 | 6:58 AM

Share

ಮುಖ್ಯಾಂಶಗಳು

  • ಒಟ್ಟಿಗೆ ಗಳಿಸೋಣ, ಒಟ್ಟಿಗೆ ಕಳೆದುಕೊಳ್ಳೋಣ: ಯಶ್ ಲಾಭ ಹಂಚಿಕೆ ಸೂತ್ರ
  • ಸ್ಕ್ರಿಪ್ಟ್ ಇಲ್ಲವೆಂದು ಏಳು ಸಿನಿಮಾಗಳನ್ನು ನಿರಾಕರಿಸಿದ್ದ ಕನ್ನಡಿಗ
  • 80 ಕೋಟಿಯ ಕೆಜಿಎಫ್‌ಯಿಂದ 500 ಕೋಟಿಯ ಟಾಕ್ಸಿಕ್‌ವರೆಗೆ ಬಿಗ್ ಪ್ಲಾನ್

ರಾಕಿಂಗ್ ಸ್ಟಾರ್ ಯಶ್ (Yash) ಭಾರತದ ಅತ್ಯಧಿಕ ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಅವರು ಪ್ರತಿ ಸಿನಿಮಾಗೆ 50 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಪಡೆಯುತ್ತಾರೆ ಎಂಬ ಮಾತಿದೆ. ಆದರೆ ಅವರು ಕೇವಲ ನಿಗದಿತ ಸಂಭಾವನೆಗೆ ಸೀಮಿತವಾಗಿಲ್ಲ. ಲಾಭ ಹಂಚಿಕೆ ಮಾದರಿಯ ಮೂಲಕ ಅವರು ಇನ್ನಷ್ಟು ಹೆಚ್ಚು ಗಳಿಕೆ ಮಾಡುತ್ತಿದ್ದಾರೆ. ಈ ಕುರಿತು ಯಶ್ ಇತ್ತೀಚೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ಆಪ್ ಕಿ ಅದಾಲತ್’ ಶೋನಲ್ಲಿ ಮಾತನಾಡಿದ್ದಾರೆ ಯಶ್. ತಾವು ಎಂದಿಗೂ ಕೇವಲ ನಟನಾಗಿ ಕೆಲಸ ಮಾಡಿಲ್ಲ ಎಂದಿದ್ದಾರೆ. ಕೆಜಿಎಫ್‌ಗಿಂತ ಮುಂಚಿನಿಂದಲೂ ಅವರು ನಿರ್ಮಾಪಕರ ಜೊತೆ ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಡ್ವಾನ್ಸ್ ಹಣ ಪಡೆದು ನಿರ್ಮಾಪಕರನ್ನು ಸಂಕಷ್ಟಕ್ಕೆ ತಳ್ಳುವುದು ಅವರ ಶೈಲಿಯಲ್ಲ. ನಾವು ಒಟ್ಟಿಗೆ ಗಳಿಸಬೇಕು ಮತ್ತು ಒಟ್ಟಿಗೆ ನಷ್ಟ ಭರಿಸಬೇಕು ಎಂಬುದು ಅವರ ತತ್ವವಾಗಿದೆ. ಸಿನಿಮಾ ಗೆದ್ದರೆ ಮಾತ್ರ ತಮಗೆ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಅವರು ನಂಬಿದ್ದಾರೆ.

ತಮ್ಮ ಚಿತ್ರಜೀವನದ ಆರಂಭಿಕ ದಿನಗಳನ್ನು ಯಶ್ ನೆನಪಿಸಿಕೊಂಡಿದ್ದಾರೆ. ಟಿವಿ ಧಾರಾವಾಹಿಗಳ ಮೂಲಕ ಬಣ್ಣದ ಲೋಕಕ್ಕೆ ಬಂದ ಅವರು ನಂತರ ಸಿನಿಮಾರಂಗ ಪ್ರವೇಶಿಸಿದರು. ಆರಂಭದಲ್ಲಿ ಸ್ಕ್ರಿಪ್ಟ್ ನೀಡದ ಕಾರಣಕ್ಕೆ ಅವರು ಬರೋಬ್ಬರಿ ಹಲವು ಸಿನಿಮಾಗಳನ್ನು ನಿರಾಕರಿಸಿದ್ದರು. ಪಾತ್ರ ಮತ್ತು ಕಥೆ ಇಷ್ಟವಾಗದಿದ್ದರೆ ನಟಿಸಲು ಸಾಧ್ಯವಿಲ್ಲ ಎಂಬುದು ಅವರ ಖಡಕ್ ನಿಲುವಾಗಿತ್ತು. ತಾವು ನಂಬಿದ ಹಾದಿಯಲ್ಲಿ ಮುನ್ನಡೆದು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕೆಜಿಎಫ್  ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ? ಕೊನೆಗೂ ಮೌನ ಮುರಿದ ನಟ ಯಶ್

‘ಕೆಜಿಎಫ್’ ಸಿನಿಮಾ ಜಾಗತಿಕವಾಗಿ ನೂರಾರು ಕೋಟಿ ರೂಪಾಯಿ ಗಳಿಸಿ ಸಾಧನೆ ಮಾಡಿದೆ. 80 ಕೋಟಿ ಬಜೆಟ್‌ನಲ್ಲಿ ತಯಾರಾಗಿದ್ದ ಕೆಜಿಎಫ್ ದೊಡ್ಡ ಲಾಭ ತಂದುಕೊಟ್ಟಿತ್ತು. ಈಗ ಅವರ ಮುಂದಿನ ಚಿತ್ರ ಟಾಕ್ಸಿಕ್ 500 ಕೋಟಿಗೂ ಅಧಿಕ ಬಜೆಟ್‌ನಲ್ಲಿ ಮೂಡಿಬರುತ್ತಿದೆ. ಇದರ ಜೊತೆಗೆ ರಾಮಾಯಣ ಚಿತ್ರಕ್ಕೂ ಅವರು ಸಹ ನಿರ್ಮಾಪಕರಾಗಿದ್ದಾರೆ. ಅಭಿಮಾನಿಗಳ ಪ್ರೀತಿಗೆ ಧಕ್ಕೆ ಬಾರದಂತೆ ಕೆಲಸ ಮಾಡುವುದೇ ತಮ್ಮ ಗುರಿ ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ