AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

Yash Radhika Pandit: ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ರಾಮ-ಸೀತೆಯ ಪಾತ್ರ ಮಾಡಿದರೆ ಹೇಗಿರುತ್ತದೆ? ಇಂಥದ್ದೊಂದು ಕಲ್ಪನೆಯಲ್ಲಿ ಈ ಫೋಟೊವನ್ನು ಎಡಿಟ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ
ಯಶ್​, ರಾಧಿಕಾ ಪಂಡಿತ್
Follow us
ಮದನ್​ ಕುಮಾರ್​
|

Updated on: Jun 22, 2023 | 11:51 AM

ಈಗ ಎಲ್ಲೆಲ್ಲೂ ‘ಆದಿಪುರುಷ್​’ ಸಿನಿಮಾ (Adipurush Movie) ಬಗ್ಗೆ ಚರ್ಚೆ ಆಗುತ್ತಿದೆ. ಓಂ ರಾವತ್​ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾಗೆ ಎಲ್ಲ ಕಡೆಗಳಿಂದ ನೆಗೆಟಿವ್​ ವಿಮರ್ಶೆ ಸಿಕ್ಕಿದೆ. ರಾಮಾಯಣದ ಪಾತ್ರಗಳನ್ನು ಮನಸ್ಸಿಗೆ ಬಂದಂತೆ ತೋರಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ಈ ಹಿಂದೆ ರಾಮಾಯಣ’ (Ramayana) ಧಾರಾವಾಹಿಯಲ್ಲಿ ಅದೇ ಪಾತ್ರವನ್ನು ಅರುಣ್​ ಗೋವಿಲ್​ ಮತ್ತು ದೀಪಿಕಾ ಚಿಖ್ಲಿಯಾ ಅವರು ನಿಭಾಯಿಸಿದ್ದರು. ಆ ಕಲಾವಿದರ ಫೋಟೋವನ್ನು ಈಗ ಎಡಿಟ್​ ಮಾಡಲಾಗಿದೆ. ಯಶ್​ (Yash) ಮತ್ತು ರಾಧಿಕಾ ಪಂಡಿತ್​ (Radhika Pandit) ಅವರು ರಾಮ ಮತ್ತು ಸೀತೆಯ ಪಾತ್ರ ಮಾಡಿದರೆ ಹೇಗಿರುತ್ತದೆ ಎಂಬ ಕಲ್ಪನೆಯಲ್ಲಿ ಈ ಫೋಟೊವನ್ನು ಎಡಿಟ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಎಲ್ಲ ಪಾತ್ರಗಳಿಗೂ ಸೈ ಎಂಬಂತಿರುವ ನಟ ಯಶ್​ ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ಅವರು ನಟನೆಗೆ ಕಮ್​ಬ್ಯಾಕ್​ ಮಾಡಲಿ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಬ್ಬರನ್ನು ರಾಮ-ಸೀತೆಯ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಯಶ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಬಗ್ಗೆ ಒಂದು ಗಾಸಿಪ್​ ಕೇಳಿಬಂದಿತ್ತು. ಬಾಲಿವುಡ್​ನಲ್ಲಿ ನಿರ್ದೇಶಕ ನಿತೇಶ್​ ತಿವಾರಿ ಅವರು ರಾಮಾಯಣದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುವಂತೆ ಯಶ್​ಗೆ ಆಫರ್​ ನೀಡಲಾಗಿತ್ತು ಎಂದು ಸುದ್ದಿ ಹಬ್ಬಿತ್ತು. ಆದರೆ ಆ ಪಾತ್ರವನ್ನು ಯಶ್​ ಒಪ್ಪಿಕೊಳ್ಳಲಿಲ್ಲ ಎನ್ನಲಾಗಿದೆ. ಯಶ್​ ರಾವಣನ ಪಾತ್ರ ನೀಡುವುದು ಸರಿಯಲ್ಲ ಎಂದು ಕಂಗನಾ ರಣಾವತ್​ ಅವರು ಪರೋಕ್ಷವಾಗಿ ಕಿಡಿಕಾರಿದ್ದರು.

Deepika Chikhalia: ‘ಆದಿಪುರುಷ್​’ ನೋಡದೇ ಕಾಂಟ್ರವರ್ಸಿ ಬಗ್ಗೆ ಅಭಿಪ್ರಾಯ ತಿಳಿಸಿದ ರಾಮಾಯಣ ಧಾರಾವಾಹಿಯ ಸೀತೆ ದೀಪಿಕಾ ಚಿಖ್ಲಿಯಾ

‘ಆದಿಪುರುಷ್​’ ಸಿನಿಮಾದಲ್ಲಿ ರಾಮಾಯಣದ ಪಾತ್ರಗಳು ಮೂಡಿಬಂದ ರೀತಿಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾಗಿಂತ ರಮಾನಂದ್​ ಸಾಗರ್​ ನಿರ್ದೇಶಿಸಿದ ‘ರಾಮಾಯಣ’ ಸೀರಿಯಲ್​ನ ಪಾತ್ರಗಳೇ ಚೆನ್ನಾಗಿ ಇದ್ದವು ಎಂಬುದು ಪ್ರೇಕ್ಷಕರ ಅಭಿಪ್ರಾಯ. ದೀಪಿಕಾ ಚಿಖ್ಲಿಯಾ ಅವರು ಮಾಡಿದ ಸೀತೆಯ ಪಾತ್ರವನ್ನು ಜನರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ‘ರಾಮಾಯಣದ ಕಥೆ ಇರುವುದು ಮನರಂಜನೆಗಾಗಿ ಅಲ್ಲ’ ಎಂದು ದೀಪಿಕಾ ಚಿಖ್ಲಿಯಾ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ