AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ee Pattanakke Enagide: ‘ಈ ಪಟ್ಟಣಕ್ಕೆ ಏನಾಗಿದೆ’? ಬೆಂಗಳೂರಲ್ಲಿ ಸೆನ್ಸಾರ್​ ಪ್ರಮಾಣಪತ್ರ ಸಿಗದೇ ಹೈದರಾಬಾದ್​ಗೆ ಹೋದ ಚಿತ್ರತಂಡ

Censor Board: ರವಿ ಸುಬ್ಬರಾವ್ ಅವರು ತಮ್ಮ ರಿಯಲ್​ ಲೈಫ್​ನಲ್ಲಿ ನೋಡಿದ ಅನೇಕ ಘಟನೆಗಳನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ‘ಈ ಪಟ್ಟಣಕ್ಕೆ ಏನಾಗಿದೆ’ ಎಂಬ ಶೀರ್ಷಿಕೆ ಡಿಫರೆಂಟ್​ ಆಗಿದೆ.

Ee Pattanakke Enagide: ‘ಈ ಪಟ್ಟಣಕ್ಕೆ ಏನಾಗಿದೆ’? ಬೆಂಗಳೂರಲ್ಲಿ ಸೆನ್ಸಾರ್​ ಪ್ರಮಾಣಪತ್ರ ಸಿಗದೇ ಹೈದರಾಬಾದ್​ಗೆ ಹೋದ ಚಿತ್ರತಂಡ
‘ಈ ಪಟ್ಟಣಕ್ಕೆ ಏನಾಗಿದೆ’ ಚಿತ್ರತಂಡ
ಮದನ್​ ಕುಮಾರ್​
|

Updated on: Jul 28, 2023 | 4:19 PM

Share

ಇತ್ತೀಚಿನ ದಿನಗಳಲ್ಲಿ ಪ್ರತಿ ಸಿನಿಮಾಗಳನ್ನೂ ಸೆನ್ಸಾರ್​ ಮಂಡಳಿಯವರು (Censor Board) ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ‘ಆದಿಪುರುಷ್​’, ‘ಆಪನ್​ಹೈಮರ್​’ ಮುಂತಾದ ಸಿನಿಮಾಗಳ ದೃಶ್ಯಗಳಿಗೆ ಆಕ್ಷೇಪ ಎದುರಾದ ಹಿನ್ನೆಲೆಯಲ್ಲಿ ದಿನದಿನಕ್ಕೂ ನಿಯಮಗಳು ಕಠಿಣವಾಗುತ್ತಿವೆ. ಹಿಂದಿಯ ‘ಒಎಂಜಿ 2’ ಸಿನಿಮಾ ಕೂಡ ಸೆನ್ಸಾರ್​ ಪ್ರಮಾಣ ಪತ್ರ (Censor Certificate) ಪಡೆಯಲು ಕಷ್ಟಪಡುತ್ತಿದೆ. ಅದೇ ರೀತಿ ಕನ್ನಡದ ‘ಈ ಪಟ್ಟಣಕ್ಕೆ ಏನಾಗಿದೆ’ (Ee Pattanakke Enagide) ಸಿನಿಮಾಗೂ ಸಹ ಪ್ರಮಾಣಪತ್ರ ಸಿಗುವುದು ಕಷ್ಟ ಆಗಿತ್ತು. ಆದರೆ ಬೆಂಗಳೂರಿನಲ್ಲಿ ಸೆನ್ಸಾರ್ ಆಗಲಿಲ್ಲ ಎಂಬ ಕಾರಣಕ್ಕೆ ಹೈದರಾಬಾದ್​ಗೆ ತೆರಳಿತ್ತು ಚಿತ್ರತಂಡ. ಆಗಸ್ಟ್​ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಈ ಪಟ್ಟಣಕ್ಕೆ ಏನಾಗಿದೆ’ ಸಿನಿಮಾಗೆ ರವಿ ಸುಬ್ಬರಾವ್ ಅವರು ನಿರ್ದೇಶನ ಮಾಡಿದ್ದಾರೆ. ಸೆನ್ಸಾರ್ ಸಮಸ್ಯೆ ಆಗುವಂಥದ್ದು ಈ ಚಿತ್ರದಲ್ಲಿ ಏನಿದೆ? ಈ ಪ್ರಶ್ನೆಗೆ ನಿರ್ದೇಶಕ ರವಿ ಸುಬ್ಬರಾವ್ ಉತ್ತರ ನೀಡಿದ್ದಾರೆ. ‘ಅನೇಕ ಸನ್ನಿವೇಶಗಳನ್ನು ನಾವು ನೈಜವಾಗಿ ಶೂಟ್​ ಮಾಡಿದ್ದೇವೆ. ಆದ್ದರಿಂದ ಕರ್ನಾಟಕದಲ್ಲಿ ನಮಗೆ ಸೆನ್ಸಾರ್ ಮಾಡಿಸಲು ಸಾಧ್ಯವಾಗಲಿಲ್ಲ. ಬಳಿಕ ನಾವು ಹೈದರಾಬಾದ್​​ನಲ್ಲಿ ಸಿನಿಮಾದ ಸೆನ್ಸಾರ್ ಮಾಡಿಸಿದೆವು. ಅಲ್ಲಿನ ಸೆನ್ಸಾರ್ ಬೋರ್ಡ್​ ಸದಸ್ಯರು ಕೆಲವು ಕಡೆಗಳಿಗೆ ಕತ್ತರಿ ಹಾಕಲು ಸೂಚಿಸಿ, ಎ ಪ್ರಮಾಣಪ್ರತ್ರ ನೀಡಿದ್ದಾರೆ’ ಎಂದಿದ್ದಾರೆ ರವಿ ಸುಬ್ಬರಾವ್.

ಇದನ್ನೂ ಓದಿ: Dharma Censor Board: ‘ಧಾರ್ಮಿಕ ಸೆನ್ಸಾರ್​ ಮಂಡಳಿ’; ಸಿನಿಮಾಗಳಲ್ಲಿ ಹಿಂದೂ ದೇವರ ಅಪಮಾನ ತಡೆಯಲು ಹೀಗೊಂದು ಪ್ರಯತ್ನ

ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ರವಿ ಸುಬ್ಬರಾವ್ ಅವರೇ ನಿಭಾಯಿಸಿದ್ದಾರೆ. ಅವರು ತಮ್ಮ ಸ್ನೇಹಿತರಾದ ರಿತೇಶ್ ಜೋಶಿ ಜೊತೆ ಸೇರಿ ಬಂಡವಾಳವನ್ನೂ ಹೂಡಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಪಾತ್ರವನ್ನು ಕೂಡ ರವಿ ಅವರೇ ನಿಭಾಯಿಸಿದ್ದಾರೆ. ಅಂದಹಾಗೆ ಈಗ ಬಿಡುಗಡೆಗೆ ಸಿದ್ಧವಾಗಿರುವುದು ಮೊದಲ ಭಾಗ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಆ ಕುರಿತು ಮಾಹಿತಿ ಹಂಚಿಕೊಂಡಿದೆ ‘ಈ ಪಟ್ಟಣಕ್ಕೆ ಏನಾಗಿದೆ ಭಾಗ 1’ ಸಿನಿಮಾ ತಂಡ.

ಇದನ್ನೂ ಓದಿ: OTT Censorship: ಒಟಿಟಿ ಸೆನ್ಸಾರ್​ಶಿಪ್​ ಬಗ್ಗೆ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್​

ರವಿ ಸುಬ್ಬರಾವ್ ಅವರು ತಮ್ಮ ರಿಯಲ್​ ಲೈಫ್​ನಲ್ಲಿ ನೋಡಿದ ಅನೇಕ ಘಟನೆಗಳನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ‘ಈ ಪಟ್ಟಣಕ್ಕೆ ಏನಾಗಿದೆ’ ಎಂಬ ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ರಾಧಿಕಾ ರಾಮ್ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅವರ ಪಾತ್ರ ತುಂಬ ಬೋಲ್ಡ್​ ಆಗಿದೆ. ಅನಿಲ್ ಸಿ.ಜೆ. ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಸೆನ್ಸಾರ್​ ಇಲ್ಲದೆ ನಾಚಿಕೆ ಆಗುವಂತಹ ಟಾಸ್ಕ್​ ನೀಡಿದ ಸನ್ನಿ ಲಿಯೋನ್​; ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​

‘ಜೂಜು ಹಾಗೂ ಬೆಟ್ಟಿಂಗ್ ಮಾಫಿಯಾ ಕುರಿತು ಕಥೆ ಹೆಣೆಯಲಾಗಿದೆ. ಈ ಮಾಫಿಯಾದ ಮೂಲಕ ನಾಯಕನು ಯುವಜನರನ್ನು ಮೋಸದ ಬಲೆಗೆ ಬೀಳಿಸುತ್ತಾನೆ. ಈ ಕಾಲದ ಹುಡುಗರು ಮನೆಯಲ್ಲಿರುವ ರೀತಿಯೇ ಬೇರೆ. ಹೊರಗಡೆ ವರ್ತಿಸುವ ರೀತಿಯೇ ಬೇರೆ. ಅದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ’ ಎಂದು ಹೇಳಿಕೊಂಡಿದೆ ‘ಈ ಪಟ್ಟಣಕ್ಕೆ ಏನಾಗಿದೆ’ ಚಿತ್ರತಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್