AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ee Pattanakke Enagide: ‘ಈ ಪಟ್ಟಣಕ್ಕೆ ಏನಾಗಿದೆ’? ಬೆಂಗಳೂರಲ್ಲಿ ಸೆನ್ಸಾರ್​ ಪ್ರಮಾಣಪತ್ರ ಸಿಗದೇ ಹೈದರಾಬಾದ್​ಗೆ ಹೋದ ಚಿತ್ರತಂಡ

Censor Board: ರವಿ ಸುಬ್ಬರಾವ್ ಅವರು ತಮ್ಮ ರಿಯಲ್​ ಲೈಫ್​ನಲ್ಲಿ ನೋಡಿದ ಅನೇಕ ಘಟನೆಗಳನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ‘ಈ ಪಟ್ಟಣಕ್ಕೆ ಏನಾಗಿದೆ’ ಎಂಬ ಶೀರ್ಷಿಕೆ ಡಿಫರೆಂಟ್​ ಆಗಿದೆ.

Ee Pattanakke Enagide: ‘ಈ ಪಟ್ಟಣಕ್ಕೆ ಏನಾಗಿದೆ’? ಬೆಂಗಳೂರಲ್ಲಿ ಸೆನ್ಸಾರ್​ ಪ್ರಮಾಣಪತ್ರ ಸಿಗದೇ ಹೈದರಾಬಾದ್​ಗೆ ಹೋದ ಚಿತ್ರತಂಡ
‘ಈ ಪಟ್ಟಣಕ್ಕೆ ಏನಾಗಿದೆ’ ಚಿತ್ರತಂಡ
ಮದನ್​ ಕುಮಾರ್​
|

Updated on: Jul 28, 2023 | 4:19 PM

Share

ಇತ್ತೀಚಿನ ದಿನಗಳಲ್ಲಿ ಪ್ರತಿ ಸಿನಿಮಾಗಳನ್ನೂ ಸೆನ್ಸಾರ್​ ಮಂಡಳಿಯವರು (Censor Board) ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ‘ಆದಿಪುರುಷ್​’, ‘ಆಪನ್​ಹೈಮರ್​’ ಮುಂತಾದ ಸಿನಿಮಾಗಳ ದೃಶ್ಯಗಳಿಗೆ ಆಕ್ಷೇಪ ಎದುರಾದ ಹಿನ್ನೆಲೆಯಲ್ಲಿ ದಿನದಿನಕ್ಕೂ ನಿಯಮಗಳು ಕಠಿಣವಾಗುತ್ತಿವೆ. ಹಿಂದಿಯ ‘ಒಎಂಜಿ 2’ ಸಿನಿಮಾ ಕೂಡ ಸೆನ್ಸಾರ್​ ಪ್ರಮಾಣ ಪತ್ರ (Censor Certificate) ಪಡೆಯಲು ಕಷ್ಟಪಡುತ್ತಿದೆ. ಅದೇ ರೀತಿ ಕನ್ನಡದ ‘ಈ ಪಟ್ಟಣಕ್ಕೆ ಏನಾಗಿದೆ’ (Ee Pattanakke Enagide) ಸಿನಿಮಾಗೂ ಸಹ ಪ್ರಮಾಣಪತ್ರ ಸಿಗುವುದು ಕಷ್ಟ ಆಗಿತ್ತು. ಆದರೆ ಬೆಂಗಳೂರಿನಲ್ಲಿ ಸೆನ್ಸಾರ್ ಆಗಲಿಲ್ಲ ಎಂಬ ಕಾರಣಕ್ಕೆ ಹೈದರಾಬಾದ್​ಗೆ ತೆರಳಿತ್ತು ಚಿತ್ರತಂಡ. ಆಗಸ್ಟ್​ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಈ ಪಟ್ಟಣಕ್ಕೆ ಏನಾಗಿದೆ’ ಸಿನಿಮಾಗೆ ರವಿ ಸುಬ್ಬರಾವ್ ಅವರು ನಿರ್ದೇಶನ ಮಾಡಿದ್ದಾರೆ. ಸೆನ್ಸಾರ್ ಸಮಸ್ಯೆ ಆಗುವಂಥದ್ದು ಈ ಚಿತ್ರದಲ್ಲಿ ಏನಿದೆ? ಈ ಪ್ರಶ್ನೆಗೆ ನಿರ್ದೇಶಕ ರವಿ ಸುಬ್ಬರಾವ್ ಉತ್ತರ ನೀಡಿದ್ದಾರೆ. ‘ಅನೇಕ ಸನ್ನಿವೇಶಗಳನ್ನು ನಾವು ನೈಜವಾಗಿ ಶೂಟ್​ ಮಾಡಿದ್ದೇವೆ. ಆದ್ದರಿಂದ ಕರ್ನಾಟಕದಲ್ಲಿ ನಮಗೆ ಸೆನ್ಸಾರ್ ಮಾಡಿಸಲು ಸಾಧ್ಯವಾಗಲಿಲ್ಲ. ಬಳಿಕ ನಾವು ಹೈದರಾಬಾದ್​​ನಲ್ಲಿ ಸಿನಿಮಾದ ಸೆನ್ಸಾರ್ ಮಾಡಿಸಿದೆವು. ಅಲ್ಲಿನ ಸೆನ್ಸಾರ್ ಬೋರ್ಡ್​ ಸದಸ್ಯರು ಕೆಲವು ಕಡೆಗಳಿಗೆ ಕತ್ತರಿ ಹಾಕಲು ಸೂಚಿಸಿ, ಎ ಪ್ರಮಾಣಪ್ರತ್ರ ನೀಡಿದ್ದಾರೆ’ ಎಂದಿದ್ದಾರೆ ರವಿ ಸುಬ್ಬರಾವ್.

ಇದನ್ನೂ ಓದಿ: Dharma Censor Board: ‘ಧಾರ್ಮಿಕ ಸೆನ್ಸಾರ್​ ಮಂಡಳಿ’; ಸಿನಿಮಾಗಳಲ್ಲಿ ಹಿಂದೂ ದೇವರ ಅಪಮಾನ ತಡೆಯಲು ಹೀಗೊಂದು ಪ್ರಯತ್ನ

ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ರವಿ ಸುಬ್ಬರಾವ್ ಅವರೇ ನಿಭಾಯಿಸಿದ್ದಾರೆ. ಅವರು ತಮ್ಮ ಸ್ನೇಹಿತರಾದ ರಿತೇಶ್ ಜೋಶಿ ಜೊತೆ ಸೇರಿ ಬಂಡವಾಳವನ್ನೂ ಹೂಡಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಪಾತ್ರವನ್ನು ಕೂಡ ರವಿ ಅವರೇ ನಿಭಾಯಿಸಿದ್ದಾರೆ. ಅಂದಹಾಗೆ ಈಗ ಬಿಡುಗಡೆಗೆ ಸಿದ್ಧವಾಗಿರುವುದು ಮೊದಲ ಭಾಗ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಆ ಕುರಿತು ಮಾಹಿತಿ ಹಂಚಿಕೊಂಡಿದೆ ‘ಈ ಪಟ್ಟಣಕ್ಕೆ ಏನಾಗಿದೆ ಭಾಗ 1’ ಸಿನಿಮಾ ತಂಡ.

ಇದನ್ನೂ ಓದಿ: OTT Censorship: ಒಟಿಟಿ ಸೆನ್ಸಾರ್​ಶಿಪ್​ ಬಗ್ಗೆ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್​

ರವಿ ಸುಬ್ಬರಾವ್ ಅವರು ತಮ್ಮ ರಿಯಲ್​ ಲೈಫ್​ನಲ್ಲಿ ನೋಡಿದ ಅನೇಕ ಘಟನೆಗಳನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ‘ಈ ಪಟ್ಟಣಕ್ಕೆ ಏನಾಗಿದೆ’ ಎಂಬ ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ರಾಧಿಕಾ ರಾಮ್ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅವರ ಪಾತ್ರ ತುಂಬ ಬೋಲ್ಡ್​ ಆಗಿದೆ. ಅನಿಲ್ ಸಿ.ಜೆ. ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಸೆನ್ಸಾರ್​ ಇಲ್ಲದೆ ನಾಚಿಕೆ ಆಗುವಂತಹ ಟಾಸ್ಕ್​ ನೀಡಿದ ಸನ್ನಿ ಲಿಯೋನ್​; ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​

‘ಜೂಜು ಹಾಗೂ ಬೆಟ್ಟಿಂಗ್ ಮಾಫಿಯಾ ಕುರಿತು ಕಥೆ ಹೆಣೆಯಲಾಗಿದೆ. ಈ ಮಾಫಿಯಾದ ಮೂಲಕ ನಾಯಕನು ಯುವಜನರನ್ನು ಮೋಸದ ಬಲೆಗೆ ಬೀಳಿಸುತ್ತಾನೆ. ಈ ಕಾಲದ ಹುಡುಗರು ಮನೆಯಲ್ಲಿರುವ ರೀತಿಯೇ ಬೇರೆ. ಹೊರಗಡೆ ವರ್ತಿಸುವ ರೀತಿಯೇ ಬೇರೆ. ಅದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ’ ಎಂದು ಹೇಳಿಕೊಂಡಿದೆ ‘ಈ ಪಟ್ಟಣಕ್ಕೆ ಏನಾಗಿದೆ’ ಚಿತ್ರತಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು