AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶರೀರ ಯಾಕೆ ಹಿಂಗೆ…ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್

Ravi Bopanna Movie Song: ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ.

ಈ ಶರೀರ ಯಾಕೆ ಹಿಂಗೆ...ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್
Ravi Bopanna
TV9 Web
| Edited By: |

Updated on: Aug 06, 2022 | 6:04 PM

Share

ಸ್ಯಾಂಡಲ್​ವುಡ್ (Sandalwood)​ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅಭಿನಯದ ರವಿ ಬೋಪಣ್ಣ (Ravi Bopanna) ಚಿತ್ರದ ಹಾಡಿನ ಝಲಕ್ ಬಿಡುಗಡೆಯಾಗಿದೆ. ಈ ಶರೀರ ಯಾಕೆ ಹಿಂಗೆ…ಎಂಬ ಸಾಹಿತ್ಯ ಹೊಂದಿರುವ ಈ ಗೀತೆಯ ಹೆಣ್ಣಿನ ಮೈಮಾಟವನ್ನು ವರ್ಣಿಸುವ ಪ್ರಯತ್ನ ಮಾಡಿದ್ದಾರೆ ಕ್ರೇಜಿ ಸ್ಟಾರ್​.

ಈ ಹಾಡಿನಲ್ಲಿ ಮೈ ಚಳಿ ಬಿಟ್ಟು ಕಾವ್ಯ ಶೆಟ್ಟಿ ಕಾಣಿಸಿಕೊಂಡಿದ್ದು, ನಟಿಯ ಮಾದಕತೆಗೆ ಪಡ್ಡೆ ಹುಡುಗರು ಫಿದಾ ಆಗುವುದಂತು ಗ್ಯಾರೆಂಟಿ ಎನ್ನಬಹುದು. ಈಗಾಗಲೇ ಟ್ರೇಲರ್ ಮೂಲಕ ಭಾರೀ ಕುತೂಹಲ ಮೂಡಿಸಿರುವ ರವಿ ಬೋಪಣ್ಣ ಚಿತ್ರವು ಇದೇ ತಿಂಗಳು 12 ರಂದು ತೆರೆಕಾಣಲಿದೆ. ಈ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಕೂಡ ಎಂಟ್ರಿ ಕೊಡಲಿದ್ದಾರೆ. ಮಾಣಿಕ್ಯ ಮತ್ತು ಹೆಬ್ಬುಲಿಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಜೊತೆಯಾಗಿ ಮಿಂಚಿದ್ದ ಕಿಚ್ಚ-ಕ್ರೇಜಿ ಜೋಡಿ ರವಿ ಬೋಪಣ್ಣ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಇಲ್ಲಿ ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ. ರವಿಚಂದ್ರನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರವು ದೇಹಾಂಗಗಳ​ ಮಾಫಿಯಾ ಜಾಲದ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ. ಈ ಸಿನಿಮಾವು ಮಲಯಾಳಂನಲ್ಲಿ ಸೂಪರ್ ಡೂಪರ್ ಆಗಿದ್ದ ‘ಜೋಸೆಫ್’ ಚಿತ್ರದ ರಿಮೇಕ್ ಎಂಬುದು ವಿಶೇಷ.

ಈ ಹಿಂದೆ ಮಲಯಾಳಂನಲ್ಲಿ ಸೂಪರ್ ಹಿಟ್​ ಆಗಿದ್ದ ದೃಶ್ಯಂ ಚಿತ್ರದ ರಿಮೇಕ್​ನಲ್ಲಿ ರವಿಚಂದ್ರನ್ ನಟಿಸಿದ್ದರು. ಆ ಸಿನಿಮಾ ಸ್ಯಾಂಡ್​ವುಡ್ ಬಾಕ್ಸಾಫೀಸ್​ನಲ್ಲೂ ಸೌಂಡ್ ಮಾಡಿತ್ತು. ಇದೀಗ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯೊಂದಿಗೆ ಕ್ರೇಜಿಸ್ಟಾರ್ ಪ್ರೇಕ್ಷಕರ ಮುಂದೆ ಬರಲು ಹಣಿಯಾಗಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಅಲ್ಲದೆ, ರಚಿತಾ ರಾಮ್, ಜೈ ಜಗದೀಶ್, ರಮ್ಯಾ ಕೃಷ್ಣನ್, ರವಿಶಂಕರ್ ಗೌಡ ಸೇರಿದಂತೆ ಹಲವು ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ