AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು

Ek Love Ya: ‘ಏಕ್​ ಲವ್​ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ನಮನ ಸಲ್ಲಿಸಲಾಯ್ತು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು
ಸಾ.ರಾ. ಗೋವಿಂದು, ಏಕ್ ಲವ್ ಯಾ ಪೋಸ್ಟರ್​
TV9 Web
| Edited By: |

Updated on: Nov 13, 2021 | 12:02 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಬಗ್ಗೆ ಜನರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಅಪ್ಪು ಮಾಡಿದ ಸಾಮಾಜಿಕ ಕೆಲಸಗಳಿಂದಾಗಿ ಅವರನ್ನು ದೇವರ ರೀತಿ ನೋಡುವವರು ಹಲವರಿದ್ದಾರೆ. ಪುನೀತ್​ ನಿಧನದ ಬಳಿಕ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ನೋವುಂಟಾಗಿದೆ. ಹೀಗಿರುವಾಗ ಅಪ್ಪು ಫೋಟೋ ಮುಂದೆ ಶಾಂಪೇನ್ (Champagne)​ ಓಪನ್​ ಮಾಡುವ ಮೂಲಕ ‘ಏಕ್​ ಲವ್​ ಯಾ’ ಚಿತ್ರತಂಡ ವಿವಾದ ಮಾಡಿಕೊಂಡಿದೆ. ‘ಜೋಗಿ’ ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ (Ek Love Ya) ಸಿನಿಮಾ ತಂಡದವರು ಮಾಡಿರುವ ಈ ಕೆಲಸಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು (Sa Ra Govindu) ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪುಗೆ ಅವಮಾನ ಆಗುವಂತೆ ನಡೆದುಕೊಂಡಿರುವ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ. 

‘ಏಕ್​ ಲವ್​ ಯಾ’ ಸಿನಿಮಾದಲ್ಲಿ ನಟಿ ರಕ್ಷಿತಾ ಪ್ರೇಮ್​ ಸಹೋದರ ರಾಣಾ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶುಕ್ರವಾರ (ನ.12) ಸಂಜೆ ಈ ಚಿತ್ರದ ಒಂದು  ಹಾಡನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ಚಿತ್ರತಂಡದವರು ನಮನ ಸಲ್ಲಿಸಿದರು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

‘ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು ಹೇಳಿ. ಸಾರ್ವಜನಿಕರಿಗೆ ಇದರಿಂದ ಆಕ್ರೋಶ ಬರುತ್ತೋ ಇಲ್ಲವೋ? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ಇಂದು ನಮ್ಮಿಂದ ದೂರವಾಗಿರಬಹುದು. ಆದರೆ ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವುದರಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ.

‘ಏಕ್​ ಲವ್​ ಯಾ’ ಚಿತ್ರತಂಡದವರು ಪುನೀತ್​ ಅಭಿಮಾನಿಗಳಲ್ಲಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಸಾ.ರಾ. ಗೋವಿಂದು ಆಗ್ರಹಿಸಿದ್ದಾರೆ. ಈ ಸಿನಿಮಾದ ಒಂದು ಹಾಡಿನ ರಿಲೀಸ್​ ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್​, ಗಾಯಕಿ ಮಂಗ್ಲಿ, ರಚಿತಾ ರಾಮ್​, ಅರ್ಜುನ್​ ಜನ್ಯ, ಅಕುಲ್​ ಬಾಲಾಜಿ, ರಾಣಾ, ನಿಶ್ವಿಕಾ ನಾಯ್ಡು, ಮೇಘನಾ ಗಾಂವ್ಕರ್​ ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು