AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು

Ek Love Ya: ‘ಏಕ್​ ಲವ್​ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ನಮನ ಸಲ್ಲಿಸಲಾಯ್ತು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು
ಸಾ.ರಾ. ಗೋವಿಂದು, ಏಕ್ ಲವ್ ಯಾ ಪೋಸ್ಟರ್​
TV9 Web
| Edited By: |

Updated on: Nov 13, 2021 | 12:02 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಬಗ್ಗೆ ಜನರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಅಪ್ಪು ಮಾಡಿದ ಸಾಮಾಜಿಕ ಕೆಲಸಗಳಿಂದಾಗಿ ಅವರನ್ನು ದೇವರ ರೀತಿ ನೋಡುವವರು ಹಲವರಿದ್ದಾರೆ. ಪುನೀತ್​ ನಿಧನದ ಬಳಿಕ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ನೋವುಂಟಾಗಿದೆ. ಹೀಗಿರುವಾಗ ಅಪ್ಪು ಫೋಟೋ ಮುಂದೆ ಶಾಂಪೇನ್ (Champagne)​ ಓಪನ್​ ಮಾಡುವ ಮೂಲಕ ‘ಏಕ್​ ಲವ್​ ಯಾ’ ಚಿತ್ರತಂಡ ವಿವಾದ ಮಾಡಿಕೊಂಡಿದೆ. ‘ಜೋಗಿ’ ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ (Ek Love Ya) ಸಿನಿಮಾ ತಂಡದವರು ಮಾಡಿರುವ ಈ ಕೆಲಸಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು (Sa Ra Govindu) ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪುಗೆ ಅವಮಾನ ಆಗುವಂತೆ ನಡೆದುಕೊಂಡಿರುವ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ. 

‘ಏಕ್​ ಲವ್​ ಯಾ’ ಸಿನಿಮಾದಲ್ಲಿ ನಟಿ ರಕ್ಷಿತಾ ಪ್ರೇಮ್​ ಸಹೋದರ ರಾಣಾ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶುಕ್ರವಾರ (ನ.12) ಸಂಜೆ ಈ ಚಿತ್ರದ ಒಂದು  ಹಾಡನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ಚಿತ್ರತಂಡದವರು ನಮನ ಸಲ್ಲಿಸಿದರು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

‘ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು ಹೇಳಿ. ಸಾರ್ವಜನಿಕರಿಗೆ ಇದರಿಂದ ಆಕ್ರೋಶ ಬರುತ್ತೋ ಇಲ್ಲವೋ? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ಇಂದು ನಮ್ಮಿಂದ ದೂರವಾಗಿರಬಹುದು. ಆದರೆ ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವುದರಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ.

‘ಏಕ್​ ಲವ್​ ಯಾ’ ಚಿತ್ರತಂಡದವರು ಪುನೀತ್​ ಅಭಿಮಾನಿಗಳಲ್ಲಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಸಾ.ರಾ. ಗೋವಿಂದು ಆಗ್ರಹಿಸಿದ್ದಾರೆ. ಈ ಸಿನಿಮಾದ ಒಂದು ಹಾಡಿನ ರಿಲೀಸ್​ ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್​, ಗಾಯಕಿ ಮಂಗ್ಲಿ, ರಚಿತಾ ರಾಮ್​, ಅರ್ಜುನ್​ ಜನ್ಯ, ಅಕುಲ್​ ಬಾಲಾಜಿ, ರಾಣಾ, ನಿಶ್ವಿಕಾ ನಾಯ್ಡು, ಮೇಘನಾ ಗಾಂವ್ಕರ್​ ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು