AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು

Ek Love Ya: ‘ಏಕ್​ ಲವ್​ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ನಮನ ಸಲ್ಲಿಸಲಾಯ್ತು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು
ಸಾ.ರಾ. ಗೋವಿಂದು, ಏಕ್ ಲವ್ ಯಾ ಪೋಸ್ಟರ್​
TV9 Web
| Edited By: |

Updated on: Nov 13, 2021 | 12:02 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಬಗ್ಗೆ ಜನರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಅಪ್ಪು ಮಾಡಿದ ಸಾಮಾಜಿಕ ಕೆಲಸಗಳಿಂದಾಗಿ ಅವರನ್ನು ದೇವರ ರೀತಿ ನೋಡುವವರು ಹಲವರಿದ್ದಾರೆ. ಪುನೀತ್​ ನಿಧನದ ಬಳಿಕ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ನೋವುಂಟಾಗಿದೆ. ಹೀಗಿರುವಾಗ ಅಪ್ಪು ಫೋಟೋ ಮುಂದೆ ಶಾಂಪೇನ್ (Champagne)​ ಓಪನ್​ ಮಾಡುವ ಮೂಲಕ ‘ಏಕ್​ ಲವ್​ ಯಾ’ ಚಿತ್ರತಂಡ ವಿವಾದ ಮಾಡಿಕೊಂಡಿದೆ. ‘ಜೋಗಿ’ ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ (Ek Love Ya) ಸಿನಿಮಾ ತಂಡದವರು ಮಾಡಿರುವ ಈ ಕೆಲಸಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು (Sa Ra Govindu) ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪುಗೆ ಅವಮಾನ ಆಗುವಂತೆ ನಡೆದುಕೊಂಡಿರುವ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ. 

‘ಏಕ್​ ಲವ್​ ಯಾ’ ಸಿನಿಮಾದಲ್ಲಿ ನಟಿ ರಕ್ಷಿತಾ ಪ್ರೇಮ್​ ಸಹೋದರ ರಾಣಾ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶುಕ್ರವಾರ (ನ.12) ಸಂಜೆ ಈ ಚಿತ್ರದ ಒಂದು  ಹಾಡನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋಗೆ ಚಿತ್ರತಂಡದವರು ನಮನ ಸಲ್ಲಿಸಿದರು. ಅದೇ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ.

‘ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು ಹೇಳಿ. ಸಾರ್ವಜನಿಕರಿಗೆ ಇದರಿಂದ ಆಕ್ರೋಶ ಬರುತ್ತೋ ಇಲ್ಲವೋ? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ಇಂದು ನಮ್ಮಿಂದ ದೂರವಾಗಿರಬಹುದು. ಆದರೆ ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವುದರಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ.

‘ಏಕ್​ ಲವ್​ ಯಾ’ ಚಿತ್ರತಂಡದವರು ಪುನೀತ್​ ಅಭಿಮಾನಿಗಳಲ್ಲಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಸಾ.ರಾ. ಗೋವಿಂದು ಆಗ್ರಹಿಸಿದ್ದಾರೆ. ಈ ಸಿನಿಮಾದ ಒಂದು ಹಾಡಿನ ರಿಲೀಸ್​ ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್​, ಗಾಯಕಿ ಮಂಗ್ಲಿ, ರಚಿತಾ ರಾಮ್​, ಅರ್ಜುನ್​ ಜನ್ಯ, ಅಕುಲ್​ ಬಾಲಾಜಿ, ರಾಣಾ, ನಿಶ್ವಿಕಾ ನಾಯ್ಡು, ಮೇಘನಾ ಗಾಂವ್ಕರ್​ ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ