AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ‘ಎಕ್ಕ’ ಜೊತೆ ‘ಜೂನಿಯರ್’ ರಿಲೀಸ್; ನಿಮ್ಮ ಆಯ್ಕೆ ಯಾವುದು?

ಹಾಡುಗಳ ಮೂಲಕ ‘ಎಕ್ಕ’ ಮತ್ತು ‘ಜೂನಿಯರ್’ ಸಿನಿಮಾಗಳು ಸದ್ದು ಮಾಡಿವೆ. ಜುಲೈ 18ರಂದು ಬಿಡುಗಡೆ ಆಗುವ ಈ ಚಿತ್ರಗಳ ಮೇಲೆ ನಿರೀಕ್ಷೆ ಇದೆ. ಎರಡೂ ಸಿನಿಮಾಗಳ ಟ್ರೇಲರ್​ಗಳು ಜನಮೆಚ್ಚುಗೆ ಗಳಿಸಿವೆ. ಈ ಚಿತ್ರಗಳ ಜೊತೆಗೆ ಬಾಲಿವುಡ್​ನ ‘ತನ್ವಿ: ದಿ ಗ್ರೇಟ್’ ಸಿನಿಮಾ ಕೂಡ ತೆರೆಕಾಣುತ್ತಿದೆ.

ಈ ವಾರ ‘ಎಕ್ಕ’ ಜೊತೆ ‘ಜೂನಿಯರ್’ ರಿಲೀಸ್; ನಿಮ್ಮ ಆಯ್ಕೆ ಯಾವುದು?
Yuva Rajkumar, Kireeti Reddy, Sreeleela
ಮದನ್​ ಕುಮಾರ್​
|

Updated on: Jul 17, 2025 | 7:05 PM

Share

ಕನ್ನಡ ಸಿನಿಮಾ ಪ್ರಿಯರಿಗೆ ಈ ವಾರ (ಜುಲೈ 18) ಎರಡು ಪ್ರಮುಖ ಆಯ್ಕೆಗಳಿವೆ. ಯುವ ರಾಜ್​ಕುಮಾರ್ (Yuva Rajkumar) ನಟನೆಯ ‘ಎಕ್ಕ’ ಸಿನಿಮಾ ತೆರೆ ಕಾಣುತ್ತಿದೆ. ಜೊತೆಗೆ ಕಿರೀಟಿ ರೆಡ್ಡಿ ನಟನೆಯ ‘ಜೂನಿಯರ್’ ಸಿನಿಮಾ (Junior Movie) ಕೂಡ ಬಿಡುಗಡೆ ಆಗುತ್ತಿದೆ. ಬೇರೆ ಬೇರೆ ಕಾರಣಗಳಿಂದಾಗಿ ಈ ಎರಡೂ ಸಿನಿಮಾಗಳು ನಿರೀಕ್ಷೆ ಮೂಡಿಸಿವೆ. ‘ಎಕ್ಕ’ (Ekka Movie) ಮತ್ತು ‘ಜೂನಿಯರ್’ ಸಿನಿಮಾಗಳ ಟ್ರೇಲರ್​ಗಳು ಗಮನ ಸೆಳೆದಿವೆ. ಈ ಎರಡು ಸಿನಿಮಾಗಳ ಪೈಕಿ ಯಾವ ಚಿತ್ರಕ್ಕೆ ಪ್ರೇಕ್ಷಕರು ಹೆಚ್ಚು ಒಲವು ತೋರಿಸುತ್ತಾರೆ ಎಂಬುದು ಶುಕ್ರವಾರ (ಜುಲೈ 18) ಗೊತ್ತಾಗಲಿದೆ.

ಯುವ ರಾಜ್​ಕುಮಾರ್ ಅವರ ಅಭಿಮಾನಿಗಳಿಗೆ ‘ಎಕ್ಕ’ ಸಿನಿಮಾ ಮೇಲೆ ದೊಡ್ಡ ನಿರೀಕ್ಷೆ ಇದೆ. ಇದು ಯುವ ರಾಜ್​ಕುಮಾರ್ ನಟನೆಯ ಎರಡನೇ ಸಿನಿಮಾ. ‘ಯುವ’ ಸಿನಿಮಾದ ಬಳಿಕ ಅವರು ‘ಎಕ್ಕ’ ಚಿತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್​ನಲ್ಲಿ ಅವರ ಮಾಸ್ ಅವತಾರ ಕಾಣಿಸಿದೆ. ಅವರಿಗೆ ಜೋಡಿಯಾಗಿ ಸಂಪದಾ ಮತ್ತು ಸಂಜನಾ ಆನಂದ್ ಅವರು ನಟಿಸಿದ್ದಾರೆ.

ರೋಹಿತ್ ಪದಕಿ ಅವರು ‘ಎಕ್ಕ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಪಿಆರ್​ಕೆ ಪ್ರೊಡಕ್ಸನ್ಸ್’, ‘ಜಯಣ್ಣ ಫಿಲ್ಮ್ಸ್’ ಮತ್ತು ‘ಕೆಆರ್ಜಿ ಸ್ಟುಡಿಯೋಸ್’ ಒಟ್ಟಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿವೆ. ಶ್ರುತಿ, ಸಾಧು ಕೋಕಿಲ, ಅತುಲ್ ಕುಲಕರ್ಣಿ, ಆದಿತ್ಯ, ಪೂರ್ಣಚಂದ್ರ ಮೈಸೂರು ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಆ ಕಾರಣದಿಂದಲೂ ಸಿನಿಮಾ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇನ್ನು, ‘ಜೂನಿಯರ್’ ಸಿನಿಮಾ ಮೂಲಕ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಅವರು ಚಿತ್ರರಂಗಕ್ಕೆ ಪ್ರವೇಶ ಪಡೆಯುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಶ್ರೀಲೀಲಾ ಅಭಿನಯಿಸಿದ್ದಾರೆ. ಜೆನಿಲಿಯಾ ದೇಶಮುಖ್, ರವಿಚಂದ್ರನ್, ಸುಧಾರಾಣಿ, ರಾವ್ ರಮೇಶ್, ಅಚ್ಯುತ್ ಕುಮಾರ್ ಅವರಂತಹ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್

ಬಿಡುಗಡೆಗೂ ಮೊದಲೇ ಹಾಡುಗಳ ಮೂಲಕ ‘ಎಕ್ಕ’ ಮತ್ತು ‘ಜೂನಿಯರ್’ ಸಿನಿಮಾಗಳು ಸದ್ದು ಮಾಡಿವೆ. ‘ಎಕ್ಕ’ ಸಿನಿಮಾದ ‘ಬ್ಯಾಂಗಲ್ ಬಂಗಾರಿ..’ ಹಾಡು ಧೂಳೆಬ್ಬಿಸಿದೆ. ಅದೇ ರೀತಿ, ‘ಜೂನಿಯರ್’ ಚಿತ್ರದ ‘ವೈರಲ್ ವೈಯ್ಯಾರಿ..’ ಹಾಡು ಕೂಡ ಸೂಪರ್ ಹಿಟ್ ಆಗಿದೆ. ದೊಡ್ಡ ಪರದೆಯಲ್ಲಿ ಈ ಹಾಡುಗಳನ್ನು ನೋಡಿ ಎಂಜಾಯ್ ಮಾಡಲು ಫ್ಯಾನ್ಸ್ ಸಜ್ಜಾಗಿದ್ದಾರೆ.

ಬಾಲಿವುಡ್​ನಲ್ಲಿ ‘ತನ್ವಿ: ದ ಗ್ರೇಟ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಅನುಪಮ್ ಖೇರ್ ಅವರು ನಿರ್ದೇಶನ ಮಾಡಿದ್ದಾರೆ. ಶುಭಾಂಗಿ ದತ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅನುಪಮ್ ಖೇರ್, ಪಲ್ಲವಿ ಜೋಶಿ, ಜಾಕಿ ಶ್ರಾಫ್, ಅರವಿಂದ್ ಸ್ವಾಮಿ ಮುಂತಾದ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಈ ಚಿತ್ರ ಕೂಡ ಜುಲೈ 18ರಂದು ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?