AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹಿಮಾಲಯ ತನಕ ಸಾಗುವ ಕನ್ನಡ ಸಿನಿಮಾ; ಇದು ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸ್ಪೆಷಲ್​

Ello Jogappa Ninna Aramane: ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸಿನಿಮಾಗಾಗಿ ನಟ ಅಂಜನ್ ನಾಗೇಂದ್ರ ಅವರು ದೇಶಾದ್ಯಂತ ಪ್ರಯಾಣ ಮಾಡಿದ್ದಾರೆ. ಅದಕ್ಕೆ ಒಂದು ಕಾರಣ ಕೂಡ ಇದೆ.

ಬೆಂಗಳೂರಿಂದ ಹಿಮಾಲಯ ತನಕ ಸಾಗುವ ಕನ್ನಡ ಸಿನಿಮಾ; ಇದು ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸ್ಪೆಷಲ್​
‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on:Jul 23, 2023 | 3:08 PM

Share

‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ (Ello Jogappa Ninna Aramane) ಶೀರ್ಷಿಕೆಯಲ್ಲಿ ಹೊಸ ಕನ್ನಡ ಸಿನಿಮಾ (Kannada Cinema) ಮೂಡಿಬರುತ್ತಿದೆ. ಹಯವದನ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಶೂಟಿಂಗ್​ ಮುಗಿಸಿದ್ದ ಈ ಸಿನಿಮಾ ತಂಡ ಒಂದು ಸಾಂಗ್​ನ ಚಿತ್ರೀಕರಣವನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ಈಗ ಅದು ಕೂಡ ಪೂರ್ಣಗೊಂಡಿದೆ. ‘ಹೌದಾ ಹುಲಿಯಾ ಹೌದೌದು..’ ಎಂಬ ಈ ಗೀತೆಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನಾಯಕ ನಟ ಅಂಜನ್ ನಾಗೇಂದ್ರ ಅವರು ಭರ್ಜರಿಯಾಗಿ ಸ್ಟೆಪ್ಸ್​ ಹಾಕಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಆರ್ಟ್​ ಡೈರೆಕ್ಟರ್​ ಹೊಸಮನೆ ಮೂರ್ತಿ ಅವರು ಹಾಕಿದ್ದ ಅದ್ದೂರಿಯಾದ ಸೆಟ್​ನಲ್ಲಿ ಮಾಸ್​ ಸಾಂಗ್​ ಚಿತ್ರೀಕರಣ ನಡೆದಿದೆ.

ಈ ಸಿನಿಮಾಗಾಗಿ ನಟ ಅಂಜನ್ ನಾಗೇಂದ್ರ ಅವರು ದೇಶಾದ್ಯಂತ ಪ್ರಯಾಣ ಮಾಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ಈ ಸಿನಿಮಾದ ಕಥೆಯಲ್ಲಿ ಒಂದು ಜರ್ನಿ ಇರಲಿದೆ. ‘ಈ ಚಿತ್ರಕ್ಕಾಗಿ ಇಡೀ ಇಂಡಿಯಾ ಸುತ್ತಿದ್ದೇನೆ. ಇದು ಒಂದು ಜರ್ನಿ ಸಿನಿಮಾ. ತಂದೆ ಮತ್ತು ಮಗನ ಬಾಂಧವ್ಯದ ಕಹಾನಿ ಇದೆ. ಬೆಂಗಳೂರಿನಿಂದ ಶುರುವಾದ ಪ್ರಯಾಣ ಹಿಮಾಲಯದವರೆಗೆ ಹೋಗುತ್ತದೆ. ಭಾವನಾತ್ಮಕವಾದ ಈ ಸಿನಿಮಾ ಯುವ ಜನರಿಗೆ ಹೆಚ್ಚು ಮನರಂಜನೆ ನೀಡುತ್ತದೆ’ ಎಂದು ಅಂಜನ್ ಹೇಳಿದ್ದಾರೆ.

ಇದನ್ನೂ ಓದಿ: Bhushan Master: ‘ಚುಟು ಚುಟು..’ ಡ್ಯಾನ್ಸ್​ ಮಾಸ್ಟರ್​ ಭೂಷಣ್​ ಈಗ ಸಿನಿಮಾ ನಿರ್ದೇಶಕ; ಕೋರ್ಸ್​ ಬೇಡ, ಫೋರ್ಸ್​ ಬೇಕು ಅಂತಾವ್ರೆ ಹುಡುಗರು

ಹಲವು ರಾಜ್ಯಗಳ ಅನೇಕ ಲೊಕೇಷನ್​ಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಆ ಬಗ್ಗೆ ನಿರ್ದೇಶಕ ಹಯವದನ ಮಾತನಾಡಿದ್ದಾರೆ. ‘ಈ ಸಿನಿಮಾ ಮೂಲ ಪಾತ್ರವು ಹೋಗಿ ಹಿಮಾಲಯವನ್ನು ತಲುಪುತ್ತದೆ. ಆ ಪ್ರಯಾಣಕ್ಕೆ ಒಂದು ಉದ್ದೇಶ ಕೂಡ ಇದೆ. ಈ ಸಿನಿಮಾ ಎಲ್ಲರಿಗೂ‌ ಕನೆಕ್ಟ್ ಆಗಲಿದೆ. ಎಲ್ಲೋ‌ ಜೋಗಪ್ಪ ನಿನ್ನ ಅರಮನೆ ಎಂಬುದು ಜನಪದ ಗೀತೆಯ ಸಾಲು. ಹಾಗೆಯೇ ‘ಜೋಗಿ’ ಸಿನಿಮಾದ ಹಾಡಿನಲ್ಲೂ ಈ ಸಾಲು ಬಳಕೆ ಆಗಿದೆ. ನಮ್ಮ ಕಥೆ ಕೂಡ ಈ ಶೀರ್ಷಿಕೆಗೆ ನ್ಯಾಯ ಸಲ್ಲಿಸುತ್ತದೆ’ ಎಂದಿದ್ದಾರೆ ನಿರ್ದೇಶಕರು.

ಇದನ್ನೂ ಓದಿ: Hostel Hudugaru Bekagiddare: ಭಿನ್ನವಾಗಿದೆ ಬಾಯ್ಸ್​ ವರ್ಸಸ್​ ವಾರ್ಡನ್​ ಸನ್ನಿವೇಶ; ನಗಿಸುವುದೇ ಹಾಸ್ಟೆಲ್​ ಹುಡುಗರ ಮುಖ್ಯ ಉದ್ದೇಶ

ಈ ಸಿನಿಮಾದಲ್ಲಿ ಅಂಜನ್ ನಾಗೇಂದ್ರ ಮತ್ತು ಹೊಸ ನಟಿ ವೆನ್ಯಾ ರೈ ಅವರು ಜೋಡಿಯಾಗಿ ನಟಿಸಿದ್ದಾರೆ. ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಈ ಚಿತ್ರಕ್ಕಿದೆ. ಪ್ರಮೋದ್ ಮರವಂತೆ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:07 pm, Sun, 23 July 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ