AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹಿಮಾಲಯ ತನಕ ಸಾಗುವ ಕನ್ನಡ ಸಿನಿಮಾ; ಇದು ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸ್ಪೆಷಲ್​

Ello Jogappa Ninna Aramane: ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸಿನಿಮಾಗಾಗಿ ನಟ ಅಂಜನ್ ನಾಗೇಂದ್ರ ಅವರು ದೇಶಾದ್ಯಂತ ಪ್ರಯಾಣ ಮಾಡಿದ್ದಾರೆ. ಅದಕ್ಕೆ ಒಂದು ಕಾರಣ ಕೂಡ ಇದೆ.

ಬೆಂಗಳೂರಿಂದ ಹಿಮಾಲಯ ತನಕ ಸಾಗುವ ಕನ್ನಡ ಸಿನಿಮಾ; ಇದು ‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸ್ಪೆಷಲ್​
‘ಎಲ್ಲೋ‌ ಜೋಗಪ್ಪ ನಿನ್ನ ಅರಮನೆ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on:Jul 23, 2023 | 3:08 PM

Share

‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ (Ello Jogappa Ninna Aramane) ಶೀರ್ಷಿಕೆಯಲ್ಲಿ ಹೊಸ ಕನ್ನಡ ಸಿನಿಮಾ (Kannada Cinema) ಮೂಡಿಬರುತ್ತಿದೆ. ಹಯವದನ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಶೂಟಿಂಗ್​ ಮುಗಿಸಿದ್ದ ಈ ಸಿನಿಮಾ ತಂಡ ಒಂದು ಸಾಂಗ್​ನ ಚಿತ್ರೀಕರಣವನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ಈಗ ಅದು ಕೂಡ ಪೂರ್ಣಗೊಂಡಿದೆ. ‘ಹೌದಾ ಹುಲಿಯಾ ಹೌದೌದು..’ ಎಂಬ ಈ ಗೀತೆಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನಾಯಕ ನಟ ಅಂಜನ್ ನಾಗೇಂದ್ರ ಅವರು ಭರ್ಜರಿಯಾಗಿ ಸ್ಟೆಪ್ಸ್​ ಹಾಕಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಆರ್ಟ್​ ಡೈರೆಕ್ಟರ್​ ಹೊಸಮನೆ ಮೂರ್ತಿ ಅವರು ಹಾಕಿದ್ದ ಅದ್ದೂರಿಯಾದ ಸೆಟ್​ನಲ್ಲಿ ಮಾಸ್​ ಸಾಂಗ್​ ಚಿತ್ರೀಕರಣ ನಡೆದಿದೆ.

ಈ ಸಿನಿಮಾಗಾಗಿ ನಟ ಅಂಜನ್ ನಾಗೇಂದ್ರ ಅವರು ದೇಶಾದ್ಯಂತ ಪ್ರಯಾಣ ಮಾಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ಈ ಸಿನಿಮಾದ ಕಥೆಯಲ್ಲಿ ಒಂದು ಜರ್ನಿ ಇರಲಿದೆ. ‘ಈ ಚಿತ್ರಕ್ಕಾಗಿ ಇಡೀ ಇಂಡಿಯಾ ಸುತ್ತಿದ್ದೇನೆ. ಇದು ಒಂದು ಜರ್ನಿ ಸಿನಿಮಾ. ತಂದೆ ಮತ್ತು ಮಗನ ಬಾಂಧವ್ಯದ ಕಹಾನಿ ಇದೆ. ಬೆಂಗಳೂರಿನಿಂದ ಶುರುವಾದ ಪ್ರಯಾಣ ಹಿಮಾಲಯದವರೆಗೆ ಹೋಗುತ್ತದೆ. ಭಾವನಾತ್ಮಕವಾದ ಈ ಸಿನಿಮಾ ಯುವ ಜನರಿಗೆ ಹೆಚ್ಚು ಮನರಂಜನೆ ನೀಡುತ್ತದೆ’ ಎಂದು ಅಂಜನ್ ಹೇಳಿದ್ದಾರೆ.

ಇದನ್ನೂ ಓದಿ: Bhushan Master: ‘ಚುಟು ಚುಟು..’ ಡ್ಯಾನ್ಸ್​ ಮಾಸ್ಟರ್​ ಭೂಷಣ್​ ಈಗ ಸಿನಿಮಾ ನಿರ್ದೇಶಕ; ಕೋರ್ಸ್​ ಬೇಡ, ಫೋರ್ಸ್​ ಬೇಕು ಅಂತಾವ್ರೆ ಹುಡುಗರು

ಹಲವು ರಾಜ್ಯಗಳ ಅನೇಕ ಲೊಕೇಷನ್​ಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಆ ಬಗ್ಗೆ ನಿರ್ದೇಶಕ ಹಯವದನ ಮಾತನಾಡಿದ್ದಾರೆ. ‘ಈ ಸಿನಿಮಾ ಮೂಲ ಪಾತ್ರವು ಹೋಗಿ ಹಿಮಾಲಯವನ್ನು ತಲುಪುತ್ತದೆ. ಆ ಪ್ರಯಾಣಕ್ಕೆ ಒಂದು ಉದ್ದೇಶ ಕೂಡ ಇದೆ. ಈ ಸಿನಿಮಾ ಎಲ್ಲರಿಗೂ‌ ಕನೆಕ್ಟ್ ಆಗಲಿದೆ. ಎಲ್ಲೋ‌ ಜೋಗಪ್ಪ ನಿನ್ನ ಅರಮನೆ ಎಂಬುದು ಜನಪದ ಗೀತೆಯ ಸಾಲು. ಹಾಗೆಯೇ ‘ಜೋಗಿ’ ಸಿನಿಮಾದ ಹಾಡಿನಲ್ಲೂ ಈ ಸಾಲು ಬಳಕೆ ಆಗಿದೆ. ನಮ್ಮ ಕಥೆ ಕೂಡ ಈ ಶೀರ್ಷಿಕೆಗೆ ನ್ಯಾಯ ಸಲ್ಲಿಸುತ್ತದೆ’ ಎಂದಿದ್ದಾರೆ ನಿರ್ದೇಶಕರು.

ಇದನ್ನೂ ಓದಿ: Hostel Hudugaru Bekagiddare: ಭಿನ್ನವಾಗಿದೆ ಬಾಯ್ಸ್​ ವರ್ಸಸ್​ ವಾರ್ಡನ್​ ಸನ್ನಿವೇಶ; ನಗಿಸುವುದೇ ಹಾಸ್ಟೆಲ್​ ಹುಡುಗರ ಮುಖ್ಯ ಉದ್ದೇಶ

ಈ ಸಿನಿಮಾದಲ್ಲಿ ಅಂಜನ್ ನಾಗೇಂದ್ರ ಮತ್ತು ಹೊಸ ನಟಿ ವೆನ್ಯಾ ರೈ ಅವರು ಜೋಡಿಯಾಗಿ ನಟಿಸಿದ್ದಾರೆ. ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಈ ಚಿತ್ರಕ್ಕಿದೆ. ಪ್ರಮೋದ್ ಮರವಂತೆ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:07 pm, Sun, 23 July 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು