AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಸಿನಿಮಾ ಕಲೆಕ್ಷನ್ ಎಷ್ಟು?

ರಾಣಾ ಮತ್ತು ಪ್ರಿಯಾಂಕಾ ಆಚಾರ್ ಅಭಿನಯದ ‘ಏಳುಮಲೆ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. 10 ದಿನಗಳಲ್ಲಿ ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಪುನೀತ್ ರಂಗಸ್ವಾಮಿ ನಿರ್ದೇಶನದ ಈ ಥ್ರಿಲ್ಲರ್ ಚಿತ್ರ ನೈಜ ಘಟನೆಯನ್ನು ಆಧರಿಸಿದೆ. ತರುಣ್ ಸುಧೀರ್ ನಿರ್ಮಾಣದ ಈ ಚಿತ್ರದ ಯಶಸ್ಸು ಉತ್ತಮ ಲಾಭ ತಂದುಕೊಟ್ಟಿದೆ.

‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಸಿನಿಮಾ ಕಲೆಕ್ಷನ್ ಎಷ್ಟು?
ಏಳು ಮಲೆ
ರಾಜೇಶ್ ದುಗ್ಗುಮನೆ
|

Updated on: Sep 16, 2025 | 6:48 AM

Share

‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಯಶಸ್ಸಿನ ನಂತರದಲ್ಲಿ ‘ಏಳುಮಲೆ’ ಸಿನಿಮಾ (Elu Male Movie) ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಣಾ ನಟನೆಯ ಈ ಚಿತ್ರ ಥ್ರಿಲ್ಲರ್ ಅಂಶಗಳನ್ನು ಹೊಂದಿದೆ. ನೈಜ ಘಟನೆ ಆಧಾರಿತ ಸಿನಿಮಾ ಇದು ಅನ್ನೋದು ವಿಶೇಷ. ಈ ಸಿನಿಮಾ ರಿಲೀಸ್ ಆಗಿ 10 ದಿನಗಳು ಕಳೆದಿದ್ದು, ಉತ್ತಮ ಗಳಿಕೆ ಮಾಡಿದೆ. ಹಾಗಾದರೆ ಈ ಚಿತ್ರ ಮಾಡಿದ ಒಟ್ಟಾರೆ ಕಲೆಕ್ಷನ್ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ತರುಣ್ ಸುಧೀರ್ ಅವರು ನಿರ್ದೇಶಕನಾಗಿ ಜನಪ್ರಿಯತೆ ಪಡೆದವರು. ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಒಳ್ಳೊಳ್ಳೆಯ ಚಿತ್ರಗಳನ್ನು ಅವರು ಪ್ರೇಕ್ಷಕರ ಮುಂದಿಡೋ ಪ್ರಯತ್ನ ಮಾಡುತ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡೋದು ಅವರ ಮುಖ್ಯ ಉದ್ದೇಶ. ಈಗ ‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್​ಗೆ ಅವಕಾಶ ನೀಡಿದ್ದಾರೆ. ಇವರ ಜೊತೆ ಹಿರಿಯ ಕಲಾವಿದರಾದ ಜಗಪತಿ ಬಾಬು, ಕಿಶೋರ್ ಕುಮಾರ್, ಟಿಎಸ್ ನಾಗಾಭರಣ ನಟಿಸಿದ್ದಾರೆ. ಪುನಿತ್ ರಂಗಸ್ವಾಮಿ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

‘ಏಳುಮಲೆ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸುಮಾರು ಮೂರುವರೆ ಕೋಟಿ ರೂಪಾಯಿಯಷ್ಟು ಗಳಿಕೆ ಮಾಡಿದೆ. ಈ ಚಿತ್ರ ನಿತ್ಯವೂ ಲಕ್ಷಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಭಾನುವಾರ (ಸೆಪ್ಟೆಂಬರ್ 14) 40 ಲಕ್ಷ ರೂಪಾಯಿ ಹಣವನ್ನು ಚಿತ್ರ ಬಾಚಿಕೊಂಡಿದೆ ಎಂದು ಬಾಕ್ಸ್ ಆಫೀಸ್ ಟ್ರ್ಯಾಕರ್ sacnilk ವರದಿ ಮಾಡಿದೆ. ಸೋಮವಾರ ಸಿನಿಮಾದ ಗಳಿಕೆ 11 ಲಕ್ಷ ರೂಪಾಯಿ. ಇನ್ನೂ ಕೆಲವು ದಿನಗಳು ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ

ಇದನ್ನೂ ಓದಿ:  ಲವ್ ಸ್ಟೋರಿ, ಥ್ರಿಲ್ ಬಯಸುವ ಪ್ರೇಕ್ಷಕರಿಗೆ ಉತ್ತಮ ಆಯ್ಕೆ ‘ಏಳುಮಲೆ’

ಈ ಚಿತ್ರದ ಬಜೆಟ್ ಎಷ್ಟು ಎಂಬುದನ್ನು ತರುಣ್ ಸುಧೀರ್ ಅವರು ಬಿಟ್ಟುಕೊಟ್ಟಿಲ್ಲ. ಈಗ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಅದೇ ರೀತಿ ಒಟಿಟಿ ಹಾಗೂ ಟಿವಿ ಹಕ್ಕುಗಳ ಮಾರಾಟದಿಂದ ನಿರ್ಮಾಪಕರಿಗೆ ಒಂದಷ್ಟು ಹಣ ಬರಲಿದೆ. ಈ ಚಿತ್ರದಿಂದ ತರುಣ್ ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ