AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ನಟಿಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ; ದೇಶ ಬಿಟ್ಟು ಹೋಗುವಂತಿಲ್ಲ ಜಾಕ್ವೆಲಿನ್​ ಫರ್ನಾಂಡಿಸ್​

Jacqueline Fernandez | Lookout Notice: ತಮ್ಮ ಮೇಲೆ ಹೇರಿರುವ ಈ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಜಾರಿ ನಿರ್ದೇಶನಾಲಯ ತಳ್ಳಿ ಹಾಕಿದೆ.

‘ವಿಕ್ರಾಂತ್​ ರೋಣ’ ನಟಿಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ; ದೇಶ ಬಿಟ್ಟು ಹೋಗುವಂತಿಲ್ಲ ಜಾಕ್ವೆಲಿನ್​ ಫರ್ನಾಂಡಿಸ್​
ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Dec 22, 2021 | 10:05 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ( Jacqueline Fernandez) ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟು ದಿನ ಆರಾಮಾಗಿ ದೇಶ-ವಿದೇಶ ಸುತ್ತಿಕೊಂಡಿದ್ದ ಅವರು ಈಗ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳ ಕಣ್ಗಾವಲಿನಲ್ಲಿ ಇದ್ದಾರೆ. ಇಡಿ ಅಧಿಕಾರಿಗಳ ಅನುಮತಿ ಇಲ್ಲದೇ ಅವರು ಭಾರತ ಬಿಟ್ಟು ತೆರಳುವಂತಿಲ್ಲ. ಇದರಿಂದ ಜಾಕ್ವೆಲಿನ್​ ಫರ್ನಾಂಡಿಸ್​ಗೆ ತೊಂದರೆ ಆಗಿದೆ. ಕಿಚ್ಚ ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದಲ್ಲಿ ಜಾಕ್ವೆಲಿನ್​ ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. ಆ ಚಿತ್ರದ ಬಗ್ಗೆ ಸಿನಿಪ್ರಿಯರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದು ಜಾಕ್ವೆಲಿನ್​ ನಟನೆಯ ಮೊದಲ ಕನ್ನಡ ಸಿನಿಮಾ. ಆ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ವಿವಾದದ ಮೂಲಕ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಬಹುಕೋಟಿ ವಂಚನೆ ಆರೋಪಿ ಸುಕೇಶ್​ ಚಂದ್ರಶೇಖರ್​ (Sukesh Chandrashekhar) ಜತೆಗಿನ ಸಹವಾಸವೇ ಈಗ ಜಾಕ್ವೆಲಿನ್​ಗೆ ಮುಳುವಾಗಿದೆ.

ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚಿಸಿದ ಆರೋಪವನ್ನು ಸುಕೇಶ್​ ಚಂದ್ರಶೇಖರ್​ ಎದುರಿಸುತ್ತಿದ್ದಾರೆ. ಅವರ ಜತೆ ಸಂಪರ್ಕ ಹೊಂದಿದ್ದ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೂ ಸಂಕಷ್ಟ ಸುತ್ತಿಕೊಂಡಿದೆ. ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ತೀವ್ರವಾಗಿದೆ. ಈ ಸಂದರ್ಭದಲ್ಲಿ ಭಾರತವನ್ನು ಬಿಟ್ಟು ಬೇರೆಡೆಗೆ ತೆರಳದಂತೆ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಇಡಿ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ತಮ್ಮ ಮೇಲೆ ಹೇರಿರುವ ಈ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಜಾಕ್ವೆಲಿನ್​ ಅವರು ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಜಾರಿ ನಿರ್ದೇಶನಾಲಯ ತಳ್ಳಿ ಹಾಕಿದೆ. ಇದರಿಂದ ಜಾಕ್ವೆಲಿನ್​ಗೆ ಪೇಚಾಟ ಶುರುವಾಗಿದೆ. ನಟನೆ ಮಾತ್ರವಲ್ಲದೇ ಮಾಡೆಲಿಂಗ್​ನಲ್ಲೂ ಅವರು ಸಕ್ರಿಯರಾಗಿದ್ದಾರೆ. ಅನೇಕ ಬ್ರ್ಯಾಂಡ್​ಗಳ ಜತೆ ಈ ಮೊದಲೇ ಒಪ್ಪಂದ ಮಾಡಿಕೊಂಡಿದ್ದಾರೆ. ಆ ಕೆಲಸಗಳ ಸಲುವಾಗಿ ಅವರು ವಿದೇಶಕ್ಕೆ ತೆರಳುವುದು ಅನಿವಾರ್ಯ ಆಗಿದೆ. ಹಾಗಿದ್ದರೂ ಕೂಡ ಜಾರಿ ನಿರ್ದೇಶನಾಲಯದಿಂದ ಅವರಿಗೆ ಅನುಮತಿ ಸಿಗುತ್ತಿಲ್ಲ. ಇದರಿಂದಾಗಿ ಅವರ ಆದಾಯಕ್ಕೆ ಪೆಟ್ಟು ಬಿದ್ದರೂ ಅಚ್ಚರಿ ಏನಿಲ್ಲ.

ಡಿ.5ರಂದು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೇಶ ಬಿಟ್ಟು ಪರಾರಿ ಆಗಲು ಪ್ರಯತ್ನಿಸಿದ್ದರು. ಮುಂಬೈ ಏರ್​ಪೋರ್ಟ್​ನಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದರು. ಸುಕೇಶ್​ ಚಂದ್ರಶೇಖರ್​ ಅವರಿಂದ ದುಬಾರಿ ಬೆಲೆ ಬಾಳುವ ಗಿಫ್ಟ್​ಗಳನ್ನು ಪಡೆದಿದ್ದ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಈಗ ಪೇಚಿಗೆ ಸಿಲುಕುವಂತಾಗಿದೆ. ಸುಕೇಶ್​ ಚಂದ್ರಶೇಖರ್​ ಜತೆ ಆಪ್ತವಾಗಿ ಕ್ಲಿಕ್ಕಿಸಿಕೊಂಡ ಸೆಲ್ಫಿಗಳು ಕೂಡ ರಂಗುರಂಗಿನ ಕಥೆ ಹೇಳುತ್ತಿವೆ.

ಇದನ್ನೂ ಓದಿ:

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

ಜಾಕ್ವೆಲಿನ್​​ಗಾಗಿ ಬರೋಬ್ಬರಿ ₹ 500 ಕೋಟಿ ಬಜೆಟ್​ನ ಸೂಪರ್​ಹೀರೋ​ ಚಿತ್ರ ನಿರ್ಮಿಸುವುದಾಗಿ ಭರವಸೆ ನೀಡಿದ್ದ ವಂಚಕ ಸುಕೇಶ್

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​