AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್​ ಅಂಗಳಕ್ಕೆ ಎಂಟ್ರಿ ಕೊಟ್ಟ ‘ಕರಿಮಣಿ ಮಾಲಿಕ ನೀನಲ್ಲ’ ಹಾಡಿನ ಸೃಷ್ಟಿಕರ್ತ ಗುರುಕಿರಣ್​

ಸೋಶಿಯಲ್​ ಮೀಡಿಯಾದಲ್ಲಿ ‘ಕರಿಮಣಿ ಮಾಲಿಕ ನೀನಲ್ಲ..’ ಎಂಬ ಸಾಲು ಸಿಕ್ಕಾಪಟ್ಟೆ ವೈರಲ್​ ಆಗಿದೆ. ‘ಉಪೇಂದ್ರ’ ಚಿತ್ರದ ‘ಏನಿಲ್ಲ ಏನಿಲ್ಲ..’ ಹಾಡಿನ ನಡುವೆ ಬರುವ ಈ ಸಾಲುಗಳನ್ನು ಸಂಗೀತ ನಿರ್ದೇಶಕ ಗುರುಕಿರಣ್​ ಅವರು ಈಗ ಗುನುಗಿದ್ದಾರೆ. 25 ವರ್ಷಗಳ ಹಿಂದಿನ ಹಾಡಿಗೆ ಜನರು ಈಗ ತೋರಿಸುತ್ತಿರುವ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

ವೈರಲ್​ ಅಂಗಳಕ್ಕೆ ಎಂಟ್ರಿ ಕೊಟ್ಟ ‘ಕರಿಮಣಿ ಮಾಲಿಕ ನೀನಲ್ಲ’ ಹಾಡಿನ ಸೃಷ್ಟಿಕರ್ತ ಗುರುಕಿರಣ್​
ಗುರುಕಿರಣ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Feb 06, 2024 | 6:28 AM

ಕನ್ನಡ ಚಿತ್ರರಂಗಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್​ (Guru Kiran) ಅವರು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ನಟನಾಗಿ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಂಡ ಅವರು, ಬಳಿಕ ಸಂಗೀತ ನಿರ್ದೇಶಕನಾಗಿಯೇ ಫೇಮಸ್​ ಆದರು. ಅವರು ನೀಡಿದ ಹಾಡುಗಳು ಇಂದಿಗೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ. ಅದಕ್ಕೆ ಸಾಕ್ಷಿ ಎಂಬಂತೆ ‘ಏನಿಲ್ಲ.. ಏನಿಲ್ಲ..’ (Enilla Enilla) ಹಾಡು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. 1999ರಲ್ಲಿ ತೆರೆಕಂಡ ‘ಉಪೇಂದ್ರ’ ಸಿನಿಮಾದಲ್ಲಿನ ಈ ಹಾಡು ತುಂಬ ಮಧುರವಾಗಿದೆ. ಅನೇಕರು ಇದಕ್ಕೆ ರೀಲ್ಸ್​ ಮಾಡುತ್ತಿದ್ದಾರೆ. ಈಗ ಸ್ವತಃ ಗುರುಕಿರಣ್​ ಕೂಡ ಈ ವೈರಲ್​ ಅಂಗಳಕ್ಕೆ ಎಂಟ್ರಿ ನೀಡಿದ್ದಾರೆ. ತಮ್ಮದೇ ಹಾಡನ್ನು ಮತ್ತೊಮ್ಮೆ ಹಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಕ್ರೇಜ್​ ಹೆಚ್ಚಿಸಿದ್ದಾರೆ. ‘ಕರಿಮಣಿ ಮಾಲಿಕ ನೀನಲ್ಲ..’ (Karimani Malika Ninalla) ಎಂಬ ಸಾಲಿಗೆ ಅವರು ತಮ್ಮ ಕಂಠದ ಸ್ಪರ್ಶ ನೀಡಿದ್ದಾರೆ.

‘ಏನಿಲ್ಲ ಏನಿಲ್ಲ..’ ಹಾಡಿನಲ್ಲಿ ಬರುವ ಸಾಲುಗಳಿಗೆ ಎರಡೆರಡು ಅರ್ಥಗಳಿವೆ ಎಂಬುದು ವಿಶೇಷ. ಅದೇ ಕಾರಣಕ್ಕಾಗಿ ಹೊಸ ತಲೆಮಾರಿನ ಕೇಳುಗರು ಕೂಡ ಈ ಗೀತೆಯನ್ನು ಈಗ ಇಷ್ಟಪಡುತ್ತಿದ್ದಾರೆ. ಉಪೇಂದ್ರ ಮತ್ತು ಪ್ರೇಮಾ ಅವರು ಜೋಡಿಯಾಗಿ ಕಾಣಿಸಿಕೊಂಡ ಈ ಹಾಡಿಗೆ ಕಾಡುವ ಗುಣ ಇದೆ. ಸದ್ಯಕ್ಕಂತೂ ಎಲ್ಲೆಲ್ಲೂ ‘ಕರಿಮಣಿ ಮಾಲಿಕ ನೀನಲ್ಲ..’ ಎಂಬ ಸಾಲನ್ನು ಜನರು ಗುನುಗುತ್ತಿದ್ದಾರೆ. 25 ವರ್ಷಗಳ ಹಿಂದೆ ಉಪೇಂದ್ರ ಬರೆದ ಸಾಹಿತ್ಯವನ್ನು ಕೇಳಿ ಹೊಸ ತಲೆಮಾರಿನ ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಇದೇ ಹಾಡಿನ ರಿಮಿಕ್ಸ್​ ವರ್ಷನ್​ ಕೂಡ ಈಗ ಸಖತ್​ ಸೌಂಡು ಮಾಡುತ್ತಿದೆ.

ಇದನ್ನೂ ಓದಿ: ‘ಕರಿಮಣಿ ಮಾಲಿಕ ನೀನಲ್ಲ..’ ಹಾಡು ಹುಟ್ಟಿದ ಸಂದರ್ಭದಲ್ಲಿ ಹರಡಿತ್ತು ಒಂದು ಗಾಸಿಪ್​

‘ಉಪೇಂದ್ರ’ ಸಿನಿಮಾದಲ್ಲಿ ‘ಏನಿಲ್ಲ.. ಏನಿಲ್ಲ..’ ಗೀತೆಯನ್ನು ಹಾಡಿದ ಮೂಲ ಗಾಯಕಿ ಪ್ರತಿಮಾ ರಾವ್​. ಈಗ ಗುರುಕಿರಣ್​ ಅವರು ಈ ಗೀತೆಯ ಒಂದು ಸಾಲನ್ನು ಹಾಡಿದ್ದಾರೆ. ಅದನ್ನು ತಮ್ಮದೇ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘25 ವರ್ಷಗಳ ಹಿಂದೆ ಸಂಗೀತ ಸಂಯೋಜಿಸಿದ ಹಾಡು. ಈಗಲೂ ಅಷ್ಟೇ ಪ್ರೀತಿ ಇದೆ’ ಎಂದು ಗುರುಕಿರಣ್​ ಅವರು ಕ್ಯಾಪ್ಷನ್​ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ, ಅನುಶ್ರೀ ಮುಂತಾದ ಸೆಲೆಬ್ರಿಟಿಗಳು ಕಮೆಂಟ್​ ಮಾಡಿದ್ದಾರೆ.

ಗುರುಕಿರಣ್​ ಸೋಶಿಯಲ್​ ಮೀಡಿಯಾ ಪೋಸ್ಟ್​:

ಗುರುಕಿರಣ್​ ಮತ್ತು ಉಪೇಂದ್ರ ಅವರ ಕಾಂಬಿನೇಷನ್​ನಲ್ಲಿ ಬಂದ ಹಾಡುಗಳು ಆ ಕಾಲದಲ್ಲಿ ಹೊಸ ಟ್ರೆಂಡ್​ ಸೃಷ್ಟಿ ಮಾಡಿದ್ದವು. ‘ಎ’, ‘ಉಪೇಂದ್ರ’ ಸಿನಿಮಾಗಳ ಆಡಿಯೋ ಹಕ್ಕುಗಳು ದಾಖಲೆಯ ಮೊತ್ತಕ್ಕೆ ಮಾರಾಟ ಆಗಿದ್ದವು. ‘ಸುಮ್​ ಸುಮ್ನೇ ನಗ್ತಾಳೆ..’, ‘ಮಸ್ತು ಮಸ್ತು ಹುಡುಗಿ ಬಂದ್ಲು..’, ‘ಮಾರಿಕಣ್ಣು ಹೋರಿಮ್ಯಾಗೆ..’, ‘ಟು ತೌಸೆಂಡ್​ ಎಡಿ ಲೇಡಿಯೇ..’ ಮುಂತಾದ ಹಾಡುಗಳು ಎಂದಿಗೂ ಹಳೆಯದಾಗುವುದೇ ಇಲ್ಲ. ಅಷ್ಟರಮಟ್ಟಿಗೆ ಅವು ಈಗಲೂ ತಮ್ಮ ಸ್ಥಾನ ಭದ್ರಪಡಿಸಿಕೊಂಡಿವೆ.

‘ಉಪೇಂದ್ರ’ ಸಿನಿಮಾದ ‘ಏನಿಲ್ಲ.. ಏನಿಲ್ಲ..’ ಹಾಡು:

‘ಅಪ್ಪು’, ‘ಕರಿಯ’, ‘ಜೋಗಿ’, ‘ಪಲ್ಲಕ್ಕಿ’, ‘ಆಪ್ತಮಿತ್ರ’, ‘ಆಪ್ತರಕ್ಷಕ’ ಸೇರಿದಂತೆ ಹಲವಾರು ಮ್ಯೂಸಿಕಲ್​ ಹಿಟ್​ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ ಖ್ಯಾತಿ ಗುರುಕಿರಣ್​ ಅವರಿಗೆ ಸಲ್ಲುತ್ತದೆ. ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ಗಾಯಕನಾಗಿಯೂ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ತಮ್ಮ ವಿಶೇಷ ಕಂಠದ ಮೂಲಕ ಜನರನ್ನು ರಂಜಿಸಿದ್ದಾರೆ. ಅನೇಕ ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:53 pm, Mon, 5 February 24

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ