AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಪಾರ್ಟಿ, ಬ್ಯಾಚುಲರ್​ ಪಾರ್ಟಿ ಆಯ್ತು.. ಈಗ ‘ಎಣ್ಣೆ ಪಾರ್ಟಿ’; ಸೆಟ್ಟೇರಿತು ಹೊಸಬರ ಕಾಮಿಡಿ ಸಿನಿಮಾ

ಈ ಸಿನಿಮಾಗೆ ಭರತ್ ಎಲ್. ಹಾಗೂ ಧನಂಜಯ್‌ ನಾಗರಾಜು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಹೊಸ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಮಾಡಲಾಗಿದೆ. ಪ್ರದೀಪ್ ಕುಮಾರ್ ಕೆ. ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬರಲಿದೆ. ಚಿತ್ರತಂಡ ಮತ್ತು ಸಿನಿಮಾದ ಥೀಮ್​ ಬಗ್ಗೆ ಇಲ್ಲಿದೆ ಮಾಹಿತಿ..

ಕಿರಿಕ್​ ಪಾರ್ಟಿ, ಬ್ಯಾಚುಲರ್​ ಪಾರ್ಟಿ ಆಯ್ತು.. ಈಗ ‘ಎಣ್ಣೆ ಪಾರ್ಟಿ’; ಸೆಟ್ಟೇರಿತು ಹೊಸಬರ ಕಾಮಿಡಿ ಸಿನಿಮಾ
‘ಎಣ್ಣೆ ಪಾರ್ಟಿ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Jun 18, 2024 | 10:28 PM

Share

ಗಾಂಧಿನಗರಕ್ಕೆ ಬರುವ ಪ್ರತಿ ಹೊಸಬರ ತಂಡ ಕೂಡ ಏನಾದರೂ ಡಿಫರೆಂಟ್​ ಆಗಿ ಮಾಡಬೇಕು ಎಂಬ ಉದ್ದೇಶ ಇಟ್ಟುಕೊಂಡಿರುತ್ತದೆ. ಈಗ ಹೊಸ ಕಲಾವಿದರು ಮತ್ತು ತಂತ್ರಜ್ಞರ ತಂಡವೊಂದು ಕುಡಿತದ ಕುರಿತಾದ ಸಿನಿಮಾ (Kannada Movie) ಮಾಡಿದೆ. ಈ ಮೊದಲು ‘ದ್ವಂದ್ವ’ ಸಿನಿಮಾ ಮಾಡಿದ್ದ ತಂಡದವರು ಈಗ ‘ಎಣ್ಣೆ ಪಾರ್ಟಿ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಆರಂಭಿಸಿದ್ದಾರೆ. ಕನ್ನಡದಲ್ಲಿ ಈಗಾಗಲೇ ‘ಕಿರಿಕ್​ ಪಾರ್ಟಿ’, ‘ಬ್ಯಾಚುಲರ್​ ಪಾರ್ಟಿ’ ಶೀರ್ಷಿಕೆಯಲ್ಲಿ ಸಿನಿಮಾಗಳು ಬಂದಿವೆ. ಈಗ ‘ಎಣ್ಣೆ ಪಾರ್ಟಿ’ ಸಿನಿಮಾ (Enne Party Movie) ಸೆಟ್ಟೇರಿದೆ. ಬೆಂಗಳೂರಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಅದ್ದೂರಿ ಮುಹೂರ್ತ ಸಮಾರಂಭ ಮಾಡಲಾಯಿತು. ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

‘ಕಾಮನ್ ಮ್ಯಾನ್ ಪ್ರೊಡಕ್ಷನ್’ ಬ್ಯಾನರ್​ ಮೂಲಕ ಪ್ರದೀಪ್ ಕುಮಾರ್ ಕೆ. ಅವರು ‘ಎಣ್ಣೆ ಪಾರ್ಟಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದಿನ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡ ಧನಂಜಯ್‌ ನಾಗರಾಜು ಅವರ ಕೆಲಸವನ್ನು ಮೆಚ್ಚಿದ ನಿರ್ದೇಶಕ ಭರತ್ ಎಲ್. ಅವರು ಈ ಬಾರಿ ತಮ್ಮ ಜೊತೆ ಆ್ಯಕ್ಷನ್-ಕಟ್ ಹೇಳಲು ಧನಂಜಯ್‌ ನಾಗರಾಜು ಅವರನ್ನು ಸೇರಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರು ನಟಿಸಿದ್ದಾರೆ.

ಹೊಸ ಕಲಾವಿದರಾದ ಸಂತೋಷ್, ಶೋಭನ್, ಪ್ರೀತಿ, ವರುಣ್, ಮಂಜುಳಾ, ಮಂಜು ಸುವರ್ಣ, ಅಪ್ಪು ರಾಜ್, ರಾಮು ಕೊನ್ನಾರ್, ರಶ್ಮಿ, ಗ್ರೀಷ್ಮಾ, ದಿವ್ಯಾ, ವೈಶಾಖ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಶೀರ್ಷಿಕೆ ಮತ್ತು ಥೀಮ್​ಗೆ ತಕ್ಕಂತೆ 4 ಎಣ್ಣೆ ಸಾಂಗ್​ ಇರಲಿವೆ. ಇವುಗಳಿಗೆ ಆಕಾಶ್ ಪರ್ವ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ಅಕ್ಷತಾ ಪಾಂಡವಪುರ ನಟನೆಯ ಹೊಸ ಸಿನಿಮಾ ‘ಕೌಮುದಿ’; ಸರಳವಾಗಿ ನಡೆಯಿತು ಮುಹೂರ್ತ

ಬೆಂಗಳೂರು ಸುತ್ತಮುತ್ತ 2 ಹಂತದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್‌ಕಾಂತ್ ಕೆ. ಛಾಯಾಗ್ರಹಣ ಮಾಡಲಿದ್ದಾರೆ. ಸಿನಿಮಾದ ಥೀಮ್​ ಏನು ಎಂಬುದನ್ನು ನಿರ್ದೇಶಕರು ವಿವರಿಸಿದ್ದಾರೆ. ‘ಪ್ರೀತಿ ಎಂಬುದು ವಿಶ್ವದಾದ್ಯಂತ ಇದೆ. ಹಾಗೆಯೇ ಎಣ್ಣೆ ಕೂಡ ಯೂನಿವರ್ಸಲ್. 4 ಯುವ ಜೋಡಿಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಶ್ರೀಮಂತರು, ಬಡವರು ಎಲ್ಲರೂ ಕುಡಿಯುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ವಿಶ್ಲೇಷಣೆ ಮಾಡಲ್ಲ. ಕುಡಿತ ಮಿತಿ ಮೀರಿದರೆ ಏನಾಗುತ್ತದೆ ಎಂಬುದನ್ನು ಹಾಸ್ಯ ಮತ್ತು ಥ್ರಿಲ್ಲರ್ ಶೈಲಿಯಲ್ಲಿ ಮನರಂಜನಾತ್ಮಕವಾಗಿ ತೋರಿಸುವ ಪ್ರಯತ್ನ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ