AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Challenging Star ದರ್ಶನ್​: ತೆಲುಗಿನಲ್ಲಿ ಭರ್ಜರಿ ಓಟ ಆರಂಭಿಸಿದ ರಾಬರ್ಟ್​ ಸಿನಿಮಾ ಟೀಸರ್

Challenging Star Darshan ರಾಬರ್ಟ್​ ಸಿನಿಮಾದ ಟೀಸರ್ ಬಿಡುಗಡೆಯಾದ 40 ನಿಮಿಷಗಳಲ್ಲೇ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

Challenging Star ದರ್ಶನ್​: ತೆಲುಗಿನಲ್ಲಿ ಭರ್ಜರಿ ಓಟ ಆರಂಭಿಸಿದ ರಾಬರ್ಟ್​ ಸಿನಿಮಾ ಟೀಸರ್
ರಾಬರ್ಟ್​ ಸಿನಿಮಾ ಟೀಸರ್​ನ ಒಂದು ದೃಶ್ಯ
Skanda
| Edited By: |

Updated on: Feb 03, 2021 | 5:20 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್​’ ಸಿನಿಮಾದ ಟೀಸರ್ ತೆಲುಗಿನಲ್ಲಿ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್​ನಲ್ಲಿ ತೆರೆಕಂಡಿರುವ ಟೀಸರ್ ಬಿಡುಗಡೆಯಾದ 40 ನಿಮಿಷಗಳಲ್ಲೇ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ರಾಬರ್ಟ್​ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳ ಸಂತಸ ಮುಗಿಲುಮುಟ್ಟಿದ್ದು, ಡಿ ಬಾಸ್​ಗೆ ಜಯವಾಗಲಿ ಎಂದು ಸಾಲುಸಾಲು ಕಮೆಂಟ್​ ಮಾಡುತ್ತಿದ್ದಾರೆ. ಇನ್ನು ಕೆಲವರು ಯಾರ ಸಹಾಯವೂ ಇಲ್ಲದೇ ಸ್ವತಂತ್ರವಾಗಿ ಬೆಳೆದು ಇದೀಗ ತೆಲುಗು ಚಿತ್ರರಂಗವನ್ನೂ ಆಳಲು ಹೊರಟಿರುವ ಚಾಲೆಂಜಿಂಗ್ ಸ್ಟಾರ್​ ಉನ್ನತ ಮಟ್ಟಕ್ಕೇರಲಿ ಎಂದು ಹಾರೈಸಿದ್ದಾರೆ.

ದರ್ಶನ್​ ಮತ್ತು ವಿನೋದ್​ ಪ್ರಭಾಕರ್​ ಇಬ್ಬರೂ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ತರುಣ್​ ಕಿಶೋರ್ ಸುಧೀರ್ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಉಮಾಪತಿ ಶ್ರೀನಿವಾಸ ಗೌಡ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಚಿತ್ರದ ಬಗ್ಗೆ ಈಗಾಗಲೇ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಮಾರ್ಚ್​ 11ರಂದು ತೆರೆಕಾಣಲಿರುವ ಪ್ರಯುಕ್ತ #RoberrtStormMarch11 ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಮಹಾಶಿವರಾತ್ರಿಯ ದಿನವೇ ತೆರೆಕಾಣಲಿರುವ ರಾಬರ್ಟ್​ ಚಿತ್ರವನ್ನು ನೋಡಲು ಸಿನಿ ರಸಿಕರು ಕಾತರರಾಗಿದ್ದಾರೆ. ದರ್ಶನ್ ಅಭಿಮಾನಿಗಳಂತೂ ಅನೇಕ ದಿನಗಳ ನಂತರ ತಮ್ಮ ನೆಚ್ಚಿನ ಹೀರೊವನ್ನು ಚಿತ್ರಮಂದಿರಗಳಲ್ಲಿ ಕಾಣಲು ಉತ್ಸುಕರಾಗಿ ತುದಿಗಾಲಲ್ಲಿ ನಿಂತಿದ್ದು, ತೆಲುಗಿನಲ್ಲಿ 200ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ರಾಬರ್ಟ ತೆರೆ ಕಾಣಲಿದೆ. ಸದ್ಯ ತೆಲುಗಿನಲ್ಲಿ ಬಿಡುಗಡೆಗೊಂಡಿರುವ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ಸೌಂಡ್ ಮಾಡುತ್ತಿದೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ