AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

ಥಿಯೇಟರ್​ನಲ್ಲಿ ಶೇ. 100 ಪ್ರೇಕ್ಷಕರಿಗೆ ಅವಕಾಶ ನೀಡುವ ವಿಚಾರಕ್ಕೆ ಸ್ಯಾಂಡಲ್​ವುಡ್ ನಲ್ಲಿಗ ಒಗ್ಗಟ್ಟಿನ ಮಂತ್ರ ಕೇಳಿಬಂದಿದೆ. ಬೆಳಗಿನಿಂದ ಹಲವಾರು ಮಂದಿ ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು
ಶಿವರಾಜ್ ಕುಮಾರ್
Follow us
TV9 Web
| Updated By: ganapathi bhat

Updated on:Apr 06, 2022 | 8:22 PM

ಬೆಂಗಳೂರು: ಥಿಯೇಟರ್​ ಭರ್ತಿಯಾಗುವಷ್ಟು ಪ್ರೇಕ್ಷಕರಿಗೆ ಪ್ರವೇಶ ಅವಕಾಶ ಸಿಗಬೇಕು ಎಂಬ ಕೂಗು ಜೋರಾಗುತ್ತಿದೆ. ಸ್ಯಾಂಡಲ್​ವುಡ್​ನ ನಟ, ನಟಿ, ತಂತ್ರಜ್ಞರು, ನಿರ್ಮಾಪಕರು ಸಿನಿಮಾ ಹಾಲ್ ಭರ್ತಿಗೊಳಿಸಲು ಅನುಮತಿ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ನಿರ್ಮಾಪಕ ಪುಷ್ಕರ ಮಲ್ಲಿಕಾರ್ಜುನಯ್ಯ, ಸಿಂಪಲ್ ಸುನಿ, ಧ್ರುವ ಸರ್ಜಾ ಮುಂತಾದವರು ಟ್ವೀಟ್ ಮಾಡಿದ್ದಾರೆ.

ಇದೀಗ #KFIDemandsFullOccupancy ಟ್ವಿಟರ್ ಆಂದೋಲನಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ನಮಗೆ ಚಿತ್ರಮಂದಿರಗಳಲ್ಲಿ ಶೇ 100 ಸೀಟು ಭರ್ತಿಗೆ ಅವಕಾಶಬೇಕು ಎಂದು ವಿಡಿಯೊ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಥಿಯೇಟರ್​ನಲ್ಲಿ ಶೇ. 100 ಪ್ರೇಕ್ಷಕರಿಗೆ ಅವಕಾಶ ನೀಡುವ ವಿಚಾರಕ್ಕೆ ಸ್ಯಾಂಡಲ್​ವುಡ್ ನಲ್ಲಿಗ ಒಗ್ಗಟ್ಟಿನ ಮಂತ್ರ ಕೇಳಿಬಂದಿದೆ. ಬೆಳಗಿನಿಂದ ಹಲವಾರು ಮಂದಿ ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೇ 50 ಆಕ್ಯೂಪೆನ್ಸಿ ಇದ್ದಾಗ ಆರ್ಥಿಕವಾಗಿ ನಷ್ಟ ಆಗ್ತಿತ್ತು. ಒಂದು ವರ್ಷ ನಷ್ಟದ ನೋವು ಅನುಭವಿಸಿದ್ದೇವೆ. ನಿನ್ನೆ ಸಂಜೆ ಮತ್ತೆ ಶೇ 50 ಜನರಿಗೆ ಮಾತ್ರ ಅವಕಾಶ ಎಂದು ಮಾಹಿತಿ ಸಿಕ್ಕಿದಾಗ ತುಂಬಾ ಬೇಸರ ಆಯಿತು ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ, ಈಗ ಮನವಿ ಪತ್ರ ಕೊಟ್ಟಿದ್ದೇವೆ. ಹಾಗಾಗಿ ಇಂದು ಸಂಜೆಯೇ ಒಳ್ಳೆ ಸುದ್ದಿ ಸಿಗುವ ಭರವಸೆ ಇದೆ ಎಂದು ತಿಳಿಸಿದ್ದಾರೆ.

ಚಿತ್ರಮಂದಿರಕ್ಕೆ ಶೇ. 50 ನಿರ್ಬಂಧ ಏಕೆ? Housefull ಪ್ರದರ್ಶನಕ್ಕೆ ಅವಕಾಶ ನೀಡಿ: ಸಿನಿ ದಿಗ್ಗಜರಿಂದ ಆಗ್ರಹ

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

Published On - 3:45 pm, Wed, 3 February 21

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ