AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ ಹೌಸ್​ಫುಲ್​ ಆಗಿದ್ದಕ್ಕೆ ಎಕ್ಸ್​ಟ್ರಾ ಚೇರ್ ಹಾಕಿ ‘ಕೆಜಿಎಫ್​ 2’ ನೋಡಿದ ತಮಿಳು ಮಂದಿ

ರಾಕಿ ನರಾಚಿಯ ಕಿಂಗ್ ಆಗಿ ಮೆರೆಯೋ ಕಥೆಯನ್ನು ಪ್ರಶಾಂತ್ ನೀಲ್ ಹೇಳಿದ್ದಾರೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ತಮಿಳುನಾಡಿನ ಮಂದಿ ಕೂಡ ಚಿತ್ರವನ್ನು ಹೆಚ್ಚೆಚ್ಚು ಇಷ್ಟಪಡುತ್ತಿದ್ದಾರೆ.

ಥಿಯೇಟರ್​ ಹೌಸ್​ಫುಲ್​ ಆಗಿದ್ದಕ್ಕೆ ಎಕ್ಸ್​ಟ್ರಾ ಚೇರ್ ಹಾಕಿ ‘ಕೆಜಿಎಫ್​ 2’ ನೋಡಿದ ತಮಿಳು ಮಂದಿ
TV9 Web
| Edited By: |

Updated on: Apr 15, 2022 | 9:51 PM

Share

ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಸಿನಿಮಾ (KGF Chapter 2) ಅಬ್ಬರ ಜೋರಾಗುತ್ತಿದೆ. ‘ಬೀಸ್ಟ್’ ಚಿತ್ರದ (Beast Movie) ಎದುರು ಈ ಸಿನಿಮಾ ತಲೆ ಎತ್ತಿ ನಿಲ್ಲುತ್ತಿದೆ. ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ತಮಿಳು ಮಂದಿ ಮುಗಿಬೀಳುತ್ತಿದ್ದಾರೆ. ಸಿನಿಮಾ ರಿಲೀಸ್ ಆದ ದಿನ ಬೀಸ್ಟ್ ಬದಲು ಕೆಜಿಎಫ್​ ನೋಡಿ, ಕೆಜಿಎಫ್ ಚಿತ್ರವೇ ನಿಜವಾದ ಬೀಸ್ಟ್’ ಎಂದು ತಮಿಳು ಪ್ರೇಕ್ಷಕರು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ತಮಿಳುನಾಡಿನಲ್ಲಿ ನಡೆದ ಘಟನೆಯೊಂದು ಚಿತ್ರದ ಮೇಲಿನ ಕ್ರೇಜ್ ಎಷ್ಟು ಅನ್ನೋದನ್ನು ತೋರಿಸಿದೆ.

ಆ್ಯಕ್ಷನ್​ ಸಿನಿಮಾಗಳನ್ನು ಹಲವರು ಇಷ್ಟಪಡುತ್ತಾರೆ. ಅವರಿಗಾಗಿಯೇ ಹೇಳಿ ಮಾಡಿಸಿದಂತಿದೆ ‘ಕೆಜಿಎಫ್ 2’ ಸಿನಿಮಾ. ಯಶ್ ಅವರು ರಗಡ್ ರಾಕಿ ಆಗಿ ಮಿಂಚಿದರೆ, ಸಂಜಯ್ ದತ್ ಹಾಗೂ ರವೀನಾ ಟಂಡನ್ ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ರಾಕಿ ನರಾಚಿಯ ಕಿಂಗ್ ಆಗಿ ಮೆರೆಯೋ ಕಥೆಯನ್ನು ಪ್ರಶಾಂತ್ ನೀಲ್ ಹೇಳಿದ್ದಾರೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ತಮಿಳುನಾಡಿನ ಮಂದಿ ಕೂಡ ಚಿತ್ರವನ್ನು ಹೆಚ್ಚೆಚ್ಚು ಇಷ್ಟಪಡುತ್ತಿದ್ದಾರೆ.

ತಮಿಳುನಾಡಿನ ಹಲವು ಥಿಯೇಟರ್​ಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ. ಕೆಲವು ಕಡೆಗಳಲ್ಲಿ ಪ್ರೇಕ್ಷಕರು ಸಿನಿಮಾ ನೋಡಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಚಿತ್ರಮಂದಿರ ಫುಲ್ ಆದ ಕಾರಣಕ್ಕೆ ಖಾಲಿ ಇರುವ ಜಾಗದಲ್ಲಿ ಹೆಚ್ಚುವರಿ ಚೇರ್​ಗಳನ್ನು ಹಾಕಿ ಸಿನಿಮಾ ತೋರಿಸಲಾಗಿದೆ ಎಂದು ಬಾಲಿವುಡ್​ ಹಂಗಾಮ ವರದಿ ಮಾಡಿದೆ. ಇನ್ನೂ ಕೆಲವು ಕಡೆಗಳಲ್ಲಿ ಫ್ಯಾನ್ಸ್ ಥಿಯೇಟರ್​ನ ನೆಲದ ಮೇಲೆ ಕೂತು ಸಿನಿಮಾ ನೋಡಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ನಿಂತು ‘ಕೆಜಿಎಫ್ 2’ ವೀಕ್ಷಣೆ ಮಾಡಿದ್ದಾರೆ.

ಯಶ್ಅ ಬ್ಬರಕ್ಕೆ ಅಲ್ಲಿನ ಬಾಕ್ಸ್ ಆಫೀಸ್ ಉಡೀಸ್ ಆಗಿದೆ. ಈ ಚಿತ್ರ ಮೊದಲ ದಿನ ಹಿಂದಿಯಲ್ಲಿ 53.95 ಕೋಟಿ ರೂಪಾಯಿ ಗಳಿಕೆ ಮಾಡಿದೆ! ಈ ಮೂಲಕ ಬಾಲಿವುಡ್​ನಲ್ಲೇ ಸಿದ್ಧಗೊಂಡ ‘ವಾರ್​’ (51.60) ಹಾಗೂ ‘ಥಗ್ಸ್ ಆಫ್​ ಹಿಂದೂಸ್ತಾನ್​’ (50.75) ಚಿತ್ರಗಳ ಮೊದಲ ದಿನದ ಕಲೆಕ್ಷನ್​ಅನ್ನು ಹಿಂದಿಕ್ಕಿದೆ. ಹಿಂದಿಯಲ್ಲಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಖ್ಯಾತಿ ‘ಕೆಜಿಎಫ್​ 2’ಗೆ ಸಿಕ್ಕಿದೆ.

ನಟ ಯಶ್ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್ ಅವರು ಬಾಲಿವುಡ್​ ಅಂಗಳದಲ್ಲಿ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಿದ್ದರು. ದೆಹಲಿ, ಮುಂಬೈ ಮೊದಲಾದ ಕಡೆಗಳಲ್ಲಿ ತೆರಳಿ ನಿರಂತರವಾಗಿ ಪ್ರಮೋಷನ್ ಮಾಡಿದ್ದರು. ಇದು ಫಲ ನೀಡಿದೆ. ಉತ್ತರ ಭಾರತದಲ್ಲಿ ಮುಂಜಾನೆಯಿಂದಲೇ ಸಿನಿಮಾ ಪ್ರದರ್ಶನ ಕಂಡಿದ್ದು, ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಹೀಗಾಗಿ, ಬಾಕ್ಸ್ ಆಫೀಸ್​ ಗಳಿಕೆ ಹೆಚ್ಚಿದೆ.

ಇದನ್ನೂ ಓದಿ: ಬಾಲಿವುಡ್ ಒಂದರಲ್ಲೇ 300 ಕೋಟಿ ರೂಪಾಯಿ ಬಾಚಲಿದೆ ‘ಕೆಜಿಎಫ್​ 2’? ಹೌದೆನ್ನುತ್ತಿದ್ದಾರೆ ಪಂಡಿತರು

 ಅಮೆರಿಕದಲ್ಲಿ ಶೂಟ್ ಆಗಲಿದೆ ‘ಕೆಜಿಎಫ್ ಚಾಪ್ಟರ್ 3’?; ಇಲ್ಲಿದೆ ಹಲವು ಅಚ್ಚರಿಯ ವಿಚಾರಗಳು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!