AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

Sanchari Vijay: ನಟ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ಮೊದಲಾದ ಖ್ಯಾತನಾಮರು ನೇತ್ರದಾನ ಮಾಡಿರುವುದು ಅಭಿಮಾನಿಗಳಿಗೆ ಹಾಗೂ ಜನಸಾಮಾನ್ಯರಿಗೆ ಮಾದರಿಯಾಗಿದೆ. ಇದರ ಪರಿಣಾಮ ನೇತ್ರದಾನ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ
ಸಂಚಾರಿ ವಿಜಯ್, ಪುನೀತ್ ರಾಜಕುಮಾರ್
TV9 Web
| Edited By: |

Updated on:Nov 06, 2021 | 3:05 PM

Share

ಬೆಂಗಳೂರು: ರಾಜ್ಯದಲ್ಲಿ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ನೇತ್ರದಾನ ಮಾಡಿದ ನಂತರ ಜನರಲ್ಲಿ ಈ ಕುರಿತು ಜಾಗೃತಿ ಹೆಚ್ಚಾಗಿದೆ. ಪರಿಣಾಮವಾಗಿ, ನೇತ್ರದಾನಕ್ಕೆ ಮುಂದಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತಂತೆ ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ಹೇಳಿಕೆ ನೀಡಿದ್ದಾರೆ. ‘‘ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಸಂಚಾರಿ ವಿಜಯ್, ಪುನಿತ್ ನಿಧನದ ಬಳಿಕ ಹೆಚ್ಚಾಗಿದೆ. ನೇತ್ರದಾನ ಮಾಡಲು ಯುವಕರು ಮುಂದೆ ಬರುತ್ತಿದ್ದಾರೆ. ಇದರೊಂದಿಗೆ ನಾವು ಕೂಡ ಪಾಕ್ಷಿಕ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಪರಿಣಾಮವಾಗಿ ನೇತ್ರದಾನ ಮಾಡುವವರ ಸಂಖ್ಯೆ ಶೇ.20-30ರಷ್ಟು ಹೆಚ್ಚಳವಾಗಿದೆ’’ ಎಂದು ಅವರು ತಿಳಿಸಿದ್ದಾರೆ.

ನಟ ಪುನೀತ್ ರಾಜಕುಮಾರ್ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಪುನೀತ್ ಕಣ್ಣುಗಳಿಂದ ಒಟ್ಟು ನಾಲ್ಕು ಮಂದಿಗೆ ದೃಷ್ಟಿ ಬಂದಿತ್ತು. ಡಾ.ರಾಜಕುಮಾರ್ ಕೂಡ ನೇತ್ರದಾನ ಮಾಡಿ, ಇಬ್ಬರಿಗೆ ದೃಷ್ಟಿ ಒದಗಿಸಿದ್ದರು. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಪುನೀತ್ ನೇತ್ರಗಳಿಂದ ನಾಲ್ವರಿಗೆ ದೃಷ್ಟಿ ಒದಗಿಸಲಾಗಿತ್ತು. ಇದು ಅಭಿಮಾನಿಗಳಿಗೆ ಹಾಗೂ ಜನರಿಗೆ ಬಹುದೊಡ್ಡ ಮಟ್ಟದಲ್ಲಿ ಪ್ರೇರಣೆ ನೀಡಿದ್ದು, ಸ್ವಯಂಪ್ರೇರಿತವಾಗಿ ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ.

ದಾವಣಗೆರೆ: ನೇತ್ರದಾನಕ್ಕೆ ವಾಗ್ದಾನ ಮಾಡಿದ 30 ಜನ ಪುನೀತ್ ಅಭಿಮಾನಿಗಳು ದಾವಣಗೆರೆ: ನಟ ಪುನೀತ್ ರಾಜ್‍ಕುಮಾರ್​​ಗೆ ವಿಶಿಷ್ಟ ರೀತಿಯ ಗೌರವ ಅರ್ಪಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ‌ ನಾಳೆ ಪುನೀತ್ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಅಭಿಮಾನಿಗಳಿಂದ ನೇತ್ರದಾನಕ್ಕೆ ವಾಗ್ದಾನ ಮಾಡಲಾಗುತ್ತದೆ. ಚಟ್ಟೋಬನಹಳ್ಳಿ‌ ತಾಂಡಾದ ಸೇವಾಲಾಲ್ ಸಂಘದಿಂದ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ 30 ಜನ ಪುನೀತ್ ಅಭಿಮಾನಿಗಳು ನೇತ್ರದಾನಕ್ಕೆ ವಾಗ್ದಾನ ಮಾಡಲಿದ್ದಾರೆ.

ಇದನ್ನೂ ಓದಿ:

‘ಸಮಾಜ ಸೇವೆ ಮಾಡಿದ ಅಪ್ಪು​ ಯಾವ ದೇವರಿಗೂ ಕಮ್ಮಿ ಇಲ್ಲ’; ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳ ಮಾತು

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 2:59 pm, Sat, 6 November 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ