AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

Sanchari Vijay: ನಟ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ಮೊದಲಾದ ಖ್ಯಾತನಾಮರು ನೇತ್ರದಾನ ಮಾಡಿರುವುದು ಅಭಿಮಾನಿಗಳಿಗೆ ಹಾಗೂ ಜನಸಾಮಾನ್ಯರಿಗೆ ಮಾದರಿಯಾಗಿದೆ. ಇದರ ಪರಿಣಾಮ ನೇತ್ರದಾನ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ
ಸಂಚಾರಿ ವಿಜಯ್, ಪುನೀತ್ ರಾಜಕುಮಾರ್
TV9 Web
| Edited By: |

Updated on:Nov 06, 2021 | 3:05 PM

Share

ಬೆಂಗಳೂರು: ರಾಜ್ಯದಲ್ಲಿ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ನೇತ್ರದಾನ ಮಾಡಿದ ನಂತರ ಜನರಲ್ಲಿ ಈ ಕುರಿತು ಜಾಗೃತಿ ಹೆಚ್ಚಾಗಿದೆ. ಪರಿಣಾಮವಾಗಿ, ನೇತ್ರದಾನಕ್ಕೆ ಮುಂದಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತಂತೆ ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ಹೇಳಿಕೆ ನೀಡಿದ್ದಾರೆ. ‘‘ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಸಂಚಾರಿ ವಿಜಯ್, ಪುನಿತ್ ನಿಧನದ ಬಳಿಕ ಹೆಚ್ಚಾಗಿದೆ. ನೇತ್ರದಾನ ಮಾಡಲು ಯುವಕರು ಮುಂದೆ ಬರುತ್ತಿದ್ದಾರೆ. ಇದರೊಂದಿಗೆ ನಾವು ಕೂಡ ಪಾಕ್ಷಿಕ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಪರಿಣಾಮವಾಗಿ ನೇತ್ರದಾನ ಮಾಡುವವರ ಸಂಖ್ಯೆ ಶೇ.20-30ರಷ್ಟು ಹೆಚ್ಚಳವಾಗಿದೆ’’ ಎಂದು ಅವರು ತಿಳಿಸಿದ್ದಾರೆ.

ನಟ ಪುನೀತ್ ರಾಜಕುಮಾರ್ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಪುನೀತ್ ಕಣ್ಣುಗಳಿಂದ ಒಟ್ಟು ನಾಲ್ಕು ಮಂದಿಗೆ ದೃಷ್ಟಿ ಬಂದಿತ್ತು. ಡಾ.ರಾಜಕುಮಾರ್ ಕೂಡ ನೇತ್ರದಾನ ಮಾಡಿ, ಇಬ್ಬರಿಗೆ ದೃಷ್ಟಿ ಒದಗಿಸಿದ್ದರು. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಪುನೀತ್ ನೇತ್ರಗಳಿಂದ ನಾಲ್ವರಿಗೆ ದೃಷ್ಟಿ ಒದಗಿಸಲಾಗಿತ್ತು. ಇದು ಅಭಿಮಾನಿಗಳಿಗೆ ಹಾಗೂ ಜನರಿಗೆ ಬಹುದೊಡ್ಡ ಮಟ್ಟದಲ್ಲಿ ಪ್ರೇರಣೆ ನೀಡಿದ್ದು, ಸ್ವಯಂಪ್ರೇರಿತವಾಗಿ ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ.

ದಾವಣಗೆರೆ: ನೇತ್ರದಾನಕ್ಕೆ ವಾಗ್ದಾನ ಮಾಡಿದ 30 ಜನ ಪುನೀತ್ ಅಭಿಮಾನಿಗಳು ದಾವಣಗೆರೆ: ನಟ ಪುನೀತ್ ರಾಜ್‍ಕುಮಾರ್​​ಗೆ ವಿಶಿಷ್ಟ ರೀತಿಯ ಗೌರವ ಅರ್ಪಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ‌ ನಾಳೆ ಪುನೀತ್ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಅಭಿಮಾನಿಗಳಿಂದ ನೇತ್ರದಾನಕ್ಕೆ ವಾಗ್ದಾನ ಮಾಡಲಾಗುತ್ತದೆ. ಚಟ್ಟೋಬನಹಳ್ಳಿ‌ ತಾಂಡಾದ ಸೇವಾಲಾಲ್ ಸಂಘದಿಂದ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ 30 ಜನ ಪುನೀತ್ ಅಭಿಮಾನಿಗಳು ನೇತ್ರದಾನಕ್ಕೆ ವಾಗ್ದಾನ ಮಾಡಲಿದ್ದಾರೆ.

ಇದನ್ನೂ ಓದಿ:

‘ಸಮಾಜ ಸೇವೆ ಮಾಡಿದ ಅಪ್ಪು​ ಯಾವ ದೇವರಿಗೂ ಕಮ್ಮಿ ಇಲ್ಲ’; ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳ ಮಾತು

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 2:59 pm, Sat, 6 November 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ