AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

Sanchari Vijay: ನಟ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ಮೊದಲಾದ ಖ್ಯಾತನಾಮರು ನೇತ್ರದಾನ ಮಾಡಿರುವುದು ಅಭಿಮಾನಿಗಳಿಗೆ ಹಾಗೂ ಜನಸಾಮಾನ್ಯರಿಗೆ ಮಾದರಿಯಾಗಿದೆ. ಇದರ ಪರಿಣಾಮ ನೇತ್ರದಾನ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ
ಸಂಚಾರಿ ವಿಜಯ್, ಪುನೀತ್ ರಾಜಕುಮಾರ್
Follow us
TV9 Web
| Updated By: shivaprasad.hs

Updated on:Nov 06, 2021 | 3:05 PM

ಬೆಂಗಳೂರು: ರಾಜ್ಯದಲ್ಲಿ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ನೇತ್ರದಾನ ಮಾಡಿದ ನಂತರ ಜನರಲ್ಲಿ ಈ ಕುರಿತು ಜಾಗೃತಿ ಹೆಚ್ಚಾಗಿದೆ. ಪರಿಣಾಮವಾಗಿ, ನೇತ್ರದಾನಕ್ಕೆ ಮುಂದಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತಂತೆ ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ಹೇಳಿಕೆ ನೀಡಿದ್ದಾರೆ. ‘‘ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಸಂಚಾರಿ ವಿಜಯ್, ಪುನಿತ್ ನಿಧನದ ಬಳಿಕ ಹೆಚ್ಚಾಗಿದೆ. ನೇತ್ರದಾನ ಮಾಡಲು ಯುವಕರು ಮುಂದೆ ಬರುತ್ತಿದ್ದಾರೆ. ಇದರೊಂದಿಗೆ ನಾವು ಕೂಡ ಪಾಕ್ಷಿಕ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಪರಿಣಾಮವಾಗಿ ನೇತ್ರದಾನ ಮಾಡುವವರ ಸಂಖ್ಯೆ ಶೇ.20-30ರಷ್ಟು ಹೆಚ್ಚಳವಾಗಿದೆ’’ ಎಂದು ಅವರು ತಿಳಿಸಿದ್ದಾರೆ.

ನಟ ಪುನೀತ್ ರಾಜಕುಮಾರ್ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಪುನೀತ್ ಕಣ್ಣುಗಳಿಂದ ಒಟ್ಟು ನಾಲ್ಕು ಮಂದಿಗೆ ದೃಷ್ಟಿ ಬಂದಿತ್ತು. ಡಾ.ರಾಜಕುಮಾರ್ ಕೂಡ ನೇತ್ರದಾನ ಮಾಡಿ, ಇಬ್ಬರಿಗೆ ದೃಷ್ಟಿ ಒದಗಿಸಿದ್ದರು. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಪುನೀತ್ ನೇತ್ರಗಳಿಂದ ನಾಲ್ವರಿಗೆ ದೃಷ್ಟಿ ಒದಗಿಸಲಾಗಿತ್ತು. ಇದು ಅಭಿಮಾನಿಗಳಿಗೆ ಹಾಗೂ ಜನರಿಗೆ ಬಹುದೊಡ್ಡ ಮಟ್ಟದಲ್ಲಿ ಪ್ರೇರಣೆ ನೀಡಿದ್ದು, ಸ್ವಯಂಪ್ರೇರಿತವಾಗಿ ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ.

ದಾವಣಗೆರೆ: ನೇತ್ರದಾನಕ್ಕೆ ವಾಗ್ದಾನ ಮಾಡಿದ 30 ಜನ ಪುನೀತ್ ಅಭಿಮಾನಿಗಳು ದಾವಣಗೆರೆ: ನಟ ಪುನೀತ್ ರಾಜ್‍ಕುಮಾರ್​​ಗೆ ವಿಶಿಷ್ಟ ರೀತಿಯ ಗೌರವ ಅರ್ಪಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ‌ ನಾಳೆ ಪುನೀತ್ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಅಭಿಮಾನಿಗಳಿಂದ ನೇತ್ರದಾನಕ್ಕೆ ವಾಗ್ದಾನ ಮಾಡಲಾಗುತ್ತದೆ. ಚಟ್ಟೋಬನಹಳ್ಳಿ‌ ತಾಂಡಾದ ಸೇವಾಲಾಲ್ ಸಂಘದಿಂದ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ 30 ಜನ ಪುನೀತ್ ಅಭಿಮಾನಿಗಳು ನೇತ್ರದಾನಕ್ಕೆ ವಾಗ್ದಾನ ಮಾಡಲಿದ್ದಾರೆ.

ಇದನ್ನೂ ಓದಿ:

‘ಸಮಾಜ ಸೇವೆ ಮಾಡಿದ ಅಪ್ಪು​ ಯಾವ ದೇವರಿಗೂ ಕಮ್ಮಿ ಇಲ್ಲ’; ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳ ಮಾತು

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 2:59 pm, Sat, 6 November 21

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್