AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಾರಾಟಕ್ಕಿದೆ ಬೆಂಗಳೂರಿನ ಐಕಾನಿಕ್ ಸಂಪಿಗೆ ಥಿಯೇಟರ್?

ಬೆಂಗಳೂರಿನ ಮಲ್ಲೇಶ್ವರದಲ್ಲಿ ಸಂಪಿಗೆ ಥಿಯೇಟರ್ ಇದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್ ಶೀಘ್ರವೇ ಮುಚ್ಚಲಿದೆ ಎಂದು ಸುದ್ದಿ ಹರಿದಾಡಿತ್ತು. ಇದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಸ್ವತಃ ಸಂಪಿಗೆ ಥಿಯೇಟರ್ ಮಾಲೀಕ ರಮೇಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Fact Check: ಮಾರಾಟಕ್ಕಿದೆ ಬೆಂಗಳೂರಿನ ಐಕಾನಿಕ್ ಸಂಪಿಗೆ ಥಿಯೇಟರ್?
ಸಂಪಿಗೆ ಥಿಯೇಟರ್
ರಾಜೇಶ್ ದುಗ್ಗುಮನೆ
|

Updated on:Dec 07, 2024 | 1:16 PM

Share

ಇತ್ತೀಚಿನ ವರ್ಷಗಳಲ್ಲಿ ಸಿಂಗಲ್ ಸ್ಕ್ರೀನ್ ಥಿಯೇಟರ್​ಗಳು ಮುಚ್ಚುತ್ತಿವೆ. ಇದಕ್ಕೆ ಕಾರಣಗಳು ಹಲವು. ಸಿನಿಮಾ ನೋಡುಗರ ಸಂಖ್ಯೆ ಕಡಿಮೆ ಆಗಿದೆ ಎಂಬುದು ಅನೇಕರ ವಾದ. ಈ ಕಾರಣದಿಂದಲೇ ಬಿಗ್ ಬಜೆಟ್ ಸಿನಿಮಾಗಳು ಮಾತ್ರ ಬಂಗಾರದ ಬೆಳೆ ತೆಗೆಯುತ್ತಿವೆ. ಕಡಿಮೆ ಬಜೆಟ್​ನ ಸಿನಿಮಾಗಳು ಯಶಸ್ಸು ಕಾಣಲು ಪರದಾಡುತ್ತಿವೆ. ಹೀಗಾಗಿ, ಬೆಂಗಳೂರಿನ ಐಕಾನಿಕ್ ಥಿಯೇಟರ್​ಗಳಿಗೆ ಬೀಗ ಬೀಳುತ್ತಿದೆ. ಆ ಜಾಗದಲ್ಲಿ ಶಾಪಿಂಗ್ ಮಾಲ್​ಗಳು, ಕಾಂಪ್ಲೆಕ್ಸ್​ಗಳು ತಲೆ ಎತ್ತುತ್ತಿವೆ. ಹೀಗಿರುವಾಗಲೇ ಬೆಂಗಳೂರಿನ ಐಕಾನಿಕ್ ಸಿಂಗಲ್ ಸ್ಕ್ರೀನ್ ಥಿಯೇಟರ್ ಮುಚ್ಚುತ್ತಿದಿಯೇ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಸಂಪಿಗೆ ಥಿಯೇಟರ್ ಇದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್ ಶೀಘ್ರವೇ ಮುಚ್ಚಲಿದೆ ಎಂದು ಸುದ್ದಿ ಹರಿದಾಡಿತ್ತು. ಇದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಸ್ವತಃ ಸಂಪಿಗೆ ಥಿಯೇಟರ್ ಮಾಲೀಕ ರಮೇಶ್ ಈ ಬಗ್ಗೆ ‘ಟಿವಿ9 ಕನ್ನಡ ಡಿಜಿಟಲ್​’ಗೆ  ಸ್ಪಷ್ಟನೆ ನೀಡಿದ್ದಾರೆ.

‘ನಾವು ಥಿಯೇಟರ್​ನ ಮಾರಾಟ ಮಾಡುತ್ತಿಲ್ಲ. ಅದು ವದಂತಿ ಅಷ್ಟೇ. ಥಿಯೇಟರ್​ನಲ್ಲಿ ಪುಷ್ಪ 2 ಚಿತ್ರದ ತಮಿಳು ಹಾಗೂ ತೆಲುಗು ವರ್ಷನ್ ಪ್ರದರ್ಶನ ಕಾಣುತ್ತಿದೆ’ ಎಂದಿದ್ದಾರೆ ರಮೇಶ್. ಈ ಚಿತ್ರಮಂದಿರ ಆರಂಭ ಆಗಿದ್ದು 1975ರಲ್ಲಿ. ಬೆಂಗಳೂರಿನ ನಗರ ಭಾಗದಲ್ಲಿ ಈ ಥಿಯೇಟರ್ ಇದ್ದು ಅದೆಷ್ಟೋ ಸಿನಿಮಾಗಳು ಇಲ್ಲಿ ಶತಕ ದಿನದ ಸಂಭ್ರಮಾಚರಣೆ ಆಚರಿಸಿಕೊಂಡಿವೆ.

ಸ್ಯಾಂಡಲ್​ವುಡ್​ನ ಹೃದಯಭಾಗ ಎನಿಸಿಕೊಂಡಿರೋ ಗಾಂಧಿ ನಗರದಲ್ಲಿ ಈ ಮೊದಲು ಹಲವು ಥಿಯೇಟರ್​ಗಳು ಇದ್ದವು. ಅವುಗಳು ಮುಚ್ಚುತ್ತಿವೆ. ಬೆಂಗಳೂರಿನ ಐಕಾನಿಕ್ ಥಿಯೇಟರ್ ಎನಿಸಿಕೊಂಡಿದ್ದ ಕಾವೇರಿ ಚಿತ್ರಮಂದಿರ ಕೂಡ ಇತ್ತೀಚೆಗೆ ಬಾಗಿಲು ಹಾಕಿದೆ.

ಇದನ್ನೂ ಓದಿ:  ಕಾವೇರಿ ಥಿಯೇಟರ್​ ನೆಲಸಮ; ಏಕಪರದೆ ಚಿತ್ರಮಂದಿರಗಳ ಅಂತ್ಯದಿಂದ ಪ್ರೇಕ್ಷಕರ ಜೇಬಿಗೆ ಕತ್ತರಿ

ಸಿಂಗಲ್​ಸ್ಕ್ರೀನ್​ ಮುಚ್ಚಲು ಕಾರಣ?

ಏಕಪರದೆ ಚಿತ್ರಮಂದಿರಗಳಿಗೆ ಈಗ ಕಾಲ ಇಲ್ಲ ಎಂಬಂತೆ ಆಗಿದೆ. ಬಹುತೇಕ ಚಿತ್ರಮಂದಿರ 700, 800 ಅಥವಾ 1000 ಸೀಟ್​ಗಳನ್ನು ಹೊಂದಿರುತ್ತವೆ. ಆದರೆ ಈಗಿರೋ ಪರಿಸ್ಥಿತಿಯಲ್ಲಿ ಅವು ಹೌಸ್​ಫುಲ್ ಆಗೋದು ಕಷ್ಟ. ಈಗ ಆ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:13 pm, Sat, 7 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ