AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಾರಾಟಕ್ಕಿದೆ ಬೆಂಗಳೂರಿನ ಐಕಾನಿಕ್ ಸಂಪಿಗೆ ಥಿಯೇಟರ್?

ಬೆಂಗಳೂರಿನ ಮಲ್ಲೇಶ್ವರದಲ್ಲಿ ಸಂಪಿಗೆ ಥಿಯೇಟರ್ ಇದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್ ಶೀಘ್ರವೇ ಮುಚ್ಚಲಿದೆ ಎಂದು ಸುದ್ದಿ ಹರಿದಾಡಿತ್ತು. ಇದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಸ್ವತಃ ಸಂಪಿಗೆ ಥಿಯೇಟರ್ ಮಾಲೀಕ ರಮೇಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Fact Check: ಮಾರಾಟಕ್ಕಿದೆ ಬೆಂಗಳೂರಿನ ಐಕಾನಿಕ್ ಸಂಪಿಗೆ ಥಿಯೇಟರ್?
ಸಂಪಿಗೆ ಥಿಯೇಟರ್
Follow us
ರಾಜೇಶ್ ದುಗ್ಗುಮನೆ
|

Updated on:Dec 07, 2024 | 1:16 PM

ಇತ್ತೀಚಿನ ವರ್ಷಗಳಲ್ಲಿ ಸಿಂಗಲ್ ಸ್ಕ್ರೀನ್ ಥಿಯೇಟರ್​ಗಳು ಮುಚ್ಚುತ್ತಿವೆ. ಇದಕ್ಕೆ ಕಾರಣಗಳು ಹಲವು. ಸಿನಿಮಾ ನೋಡುಗರ ಸಂಖ್ಯೆ ಕಡಿಮೆ ಆಗಿದೆ ಎಂಬುದು ಅನೇಕರ ವಾದ. ಈ ಕಾರಣದಿಂದಲೇ ಬಿಗ್ ಬಜೆಟ್ ಸಿನಿಮಾಗಳು ಮಾತ್ರ ಬಂಗಾರದ ಬೆಳೆ ತೆಗೆಯುತ್ತಿವೆ. ಕಡಿಮೆ ಬಜೆಟ್​ನ ಸಿನಿಮಾಗಳು ಯಶಸ್ಸು ಕಾಣಲು ಪರದಾಡುತ್ತಿವೆ. ಹೀಗಾಗಿ, ಬೆಂಗಳೂರಿನ ಐಕಾನಿಕ್ ಥಿಯೇಟರ್​ಗಳಿಗೆ ಬೀಗ ಬೀಳುತ್ತಿದೆ. ಆ ಜಾಗದಲ್ಲಿ ಶಾಪಿಂಗ್ ಮಾಲ್​ಗಳು, ಕಾಂಪ್ಲೆಕ್ಸ್​ಗಳು ತಲೆ ಎತ್ತುತ್ತಿವೆ. ಹೀಗಿರುವಾಗಲೇ ಬೆಂಗಳೂರಿನ ಐಕಾನಿಕ್ ಸಿಂಗಲ್ ಸ್ಕ್ರೀನ್ ಥಿಯೇಟರ್ ಮುಚ್ಚುತ್ತಿದಿಯೇ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಸಂಪಿಗೆ ಥಿಯೇಟರ್ ಇದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್ ಶೀಘ್ರವೇ ಮುಚ್ಚಲಿದೆ ಎಂದು ಸುದ್ದಿ ಹರಿದಾಡಿತ್ತು. ಇದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಸ್ವತಃ ಸಂಪಿಗೆ ಥಿಯೇಟರ್ ಮಾಲೀಕ ರಮೇಶ್ ಈ ಬಗ್ಗೆ ‘ಟಿವಿ9 ಕನ್ನಡ ಡಿಜಿಟಲ್​’ಗೆ  ಸ್ಪಷ್ಟನೆ ನೀಡಿದ್ದಾರೆ.

‘ನಾವು ಥಿಯೇಟರ್​ನ ಮಾರಾಟ ಮಾಡುತ್ತಿಲ್ಲ. ಅದು ವದಂತಿ ಅಷ್ಟೇ. ಥಿಯೇಟರ್​ನಲ್ಲಿ ಪುಷ್ಪ 2 ಚಿತ್ರದ ತಮಿಳು ಹಾಗೂ ತೆಲುಗು ವರ್ಷನ್ ಪ್ರದರ್ಶನ ಕಾಣುತ್ತಿದೆ’ ಎಂದಿದ್ದಾರೆ ರಮೇಶ್. ಈ ಚಿತ್ರಮಂದಿರ ಆರಂಭ ಆಗಿದ್ದು 1975ರಲ್ಲಿ. ಬೆಂಗಳೂರಿನ ನಗರ ಭಾಗದಲ್ಲಿ ಈ ಥಿಯೇಟರ್ ಇದ್ದು ಅದೆಷ್ಟೋ ಸಿನಿಮಾಗಳು ಇಲ್ಲಿ ಶತಕ ದಿನದ ಸಂಭ್ರಮಾಚರಣೆ ಆಚರಿಸಿಕೊಂಡಿವೆ.

ಸ್ಯಾಂಡಲ್​ವುಡ್​ನ ಹೃದಯಭಾಗ ಎನಿಸಿಕೊಂಡಿರೋ ಗಾಂಧಿ ನಗರದಲ್ಲಿ ಈ ಮೊದಲು ಹಲವು ಥಿಯೇಟರ್​ಗಳು ಇದ್ದವು. ಅವುಗಳು ಮುಚ್ಚುತ್ತಿವೆ. ಬೆಂಗಳೂರಿನ ಐಕಾನಿಕ್ ಥಿಯೇಟರ್ ಎನಿಸಿಕೊಂಡಿದ್ದ ಕಾವೇರಿ ಚಿತ್ರಮಂದಿರ ಕೂಡ ಇತ್ತೀಚೆಗೆ ಬಾಗಿಲು ಹಾಕಿದೆ.

ಇದನ್ನೂ ಓದಿ:  ಕಾವೇರಿ ಥಿಯೇಟರ್​ ನೆಲಸಮ; ಏಕಪರದೆ ಚಿತ್ರಮಂದಿರಗಳ ಅಂತ್ಯದಿಂದ ಪ್ರೇಕ್ಷಕರ ಜೇಬಿಗೆ ಕತ್ತರಿ

ಸಿಂಗಲ್​ಸ್ಕ್ರೀನ್​ ಮುಚ್ಚಲು ಕಾರಣ?

ಏಕಪರದೆ ಚಿತ್ರಮಂದಿರಗಳಿಗೆ ಈಗ ಕಾಲ ಇಲ್ಲ ಎಂಬಂತೆ ಆಗಿದೆ. ಬಹುತೇಕ ಚಿತ್ರಮಂದಿರ 700, 800 ಅಥವಾ 1000 ಸೀಟ್​ಗಳನ್ನು ಹೊಂದಿರುತ್ತವೆ. ಆದರೆ ಈಗಿರೋ ಪರಿಸ್ಥಿತಿಯಲ್ಲಿ ಅವು ಹೌಸ್​ಫುಲ್ ಆಗೋದು ಕಷ್ಟ. ಈಗ ಆ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:13 pm, Sat, 7 December 24

ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್