Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ನಿಜಕ್ಕೂ ರಶ್ಮಿಕಾ ಮಂದಣ್ಣನಾ? ವೈರಲ್ ವಿಡಿಯೋ ಬಗ್ಗೆ ಇಲ್ಲಿದೆ ಮಾಹಿತಿ  

ಫಿಟ್ ಡ್ರೆಸ್ ಹಾಕಿ ರಶ್ಮಿಕಾ ಮಂದಣ್ಣ ಅವರು ಲಿಫ್ಟ್ ಏರುತ್ತಿರುವುದು ವೈರಲ್ ವಿಡಿಯೋದಲ್ಲಿದೆ. ರಶ್ಮಿಕಾ ಮಂದಣ್ಣ ಅವರಿಗೆ ಅನೇಕರು ಡ್ರೆಸ್ ಬಗ್ಗೆ ಪಾಠ ಹೇಳಿದ್ದರು. ಯಾವ ರೀತಿಯ ಡ್ರೆಸ್ ಹಾಕಬೇಕು ಎಂಬುದು ತಿಳಿಯುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು.

ಇವರು ನಿಜಕ್ಕೂ ರಶ್ಮಿಕಾ ಮಂದಣ್ಣನಾ? ವೈರಲ್ ವಿಡಿಯೋ ಬಗ್ಗೆ ಇಲ್ಲಿದೆ ಮಾಹಿತಿ  
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Nov 06, 2023 | 10:10 AM

ತಂತ್ರಜ್ಞಾನ ಮುಂದುವರಿದಿದೆ. ಇದರಿಂದ ಜನರಿಗೆ ಸಾಕಷ್ಟು ಲಾಭಗಳು ಆಗಿವೆ. ಅದೇ ರೀತಿ ಕೆಲವು ತೊಂದರೆಗಳು ಕೂಡ ಆಗುತ್ತಿವೆ. ಆರ್ಟಿಫೀಷಿಯಲ್ ಇಂಟಲಿಜೆನ್ಸ್ (ಎಐ) ಬಳಕೆ ಮಾಡಿಕೊಂಡು ಯಾರ ಮುಖವನ್ನು ಯಾರಿಗೆ ಬೇಕಿದ್ದರೂ ಅಂಟಿಸಬಹುದು. ಈಗ ಎಐ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಿರುಚಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ರಶ್ಮಿಕಾ ಮಂದಣ್ಣ (Rashmika Mandanna) ಎಂದು ಅನೇಕರು ತಪ್ಪಾಗಿ ಭಾವಿಸಿದ್ದಾರೆ. ಈ ವಿಡಿಯೋದ ಅಸಲಿತನ ಇಲ್ಲಿದೆ.

ಫಿಟ್ ಡ್ರೆಸ್ ಹಾಕಿ ರಶ್ಮಿಕಾ ಮಂದಣ್ಣ ಅವರು ಲಿಫ್ಟ್ ಏರುತ್ತಿರುವುದು ವೈರಲ್ ವಿಡಿಯೋದಲ್ಲಿದೆ. ರಶ್ಮಿಕಾ ಮಂದಣ್ಣ ಅವರಿಗೆ ಅನೇಕರು ಡ್ರೆಸ್ ಬಗ್ಗೆ ಪಾಠ ಹೇಳಿದ್ದರು. ಯಾವ ರೀತಿಯ ಡ್ರೆಸ್ ಹಾಕಬೇಕು ಎಂಬುದು ತಿಳಿಯುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಆದರೆ, ಅಸಲಿಗೆ ಇದು ರಶ್ಮಿಕಾ ಮಂದಣ್ಣನೇ ಅಲ್ಲ. ಯಾರೋ ಎಡಿಟ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಇದರ ಫ್ಯಾಕ್ಟ್ ಚೆಕ್ ಮಾಡಲಾಗಿದೆ. ಇದು ಅಸಲಿಗೆ ಜರಾ ಪಟೇಲ್ ಎಂಬುವವರ ವಿಡಿಯೋ. ಆಂಗ್ಲೋ ಇಂಡಿಯನ್ ಹುಡುಗಿ ಆಗಿರುವ ಇವರು ಅಕ್ಟೋಬರ್ 9ರಂದು ಲಿಫ್ಟ್ ಏರುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದರು. ಜರಾ ಅವರ ಮುಖಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಹಾಕಲಾಗಿದೆ. ಇದು ರಶ್ಮಿಕಾ ಮಂದಣ್ಣ ಎಂದೇ ಎಲ್ಲರಿಗೂ ಭಾಸವಾಗಿದೆ.

ಇದನ್ನೂ ಓದಿ: ವಿನಯ್ ಅಲ್ಲ, ಸಂಗೀತಾ ಬಿಗ್ ಬಾಸ್​ನಲ್ಲಿ ಅತಿ ಹೆಚ್ಚು ಹೇಟ್ ಮಾಡುವ ಸ್ಪರ್ಧಿ ಇವರೇ

ಈ ಕುರಿತು ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ವಿಡಿಯೋಗೆ ಸಂಬಂಧಿಸಿದ ಟ್ವೀಟ್​ನ ರೀಟ್ವೀಟ್ ಮಾಡಿರುವ ಅಮಿತಾಭ್ ಬಚ್ಚನ್ ಅವರು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸರು ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು