AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ನಿಜಕ್ಕೂ ರಶ್ಮಿಕಾ ಮಂದಣ್ಣನಾ? ವೈರಲ್ ವಿಡಿಯೋ ಬಗ್ಗೆ ಇಲ್ಲಿದೆ ಮಾಹಿತಿ  

ಫಿಟ್ ಡ್ರೆಸ್ ಹಾಕಿ ರಶ್ಮಿಕಾ ಮಂದಣ್ಣ ಅವರು ಲಿಫ್ಟ್ ಏರುತ್ತಿರುವುದು ವೈರಲ್ ವಿಡಿಯೋದಲ್ಲಿದೆ. ರಶ್ಮಿಕಾ ಮಂದಣ್ಣ ಅವರಿಗೆ ಅನೇಕರು ಡ್ರೆಸ್ ಬಗ್ಗೆ ಪಾಠ ಹೇಳಿದ್ದರು. ಯಾವ ರೀತಿಯ ಡ್ರೆಸ್ ಹಾಕಬೇಕು ಎಂಬುದು ತಿಳಿಯುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು.

ಇವರು ನಿಜಕ್ಕೂ ರಶ್ಮಿಕಾ ಮಂದಣ್ಣನಾ? ವೈರಲ್ ವಿಡಿಯೋ ಬಗ್ಗೆ ಇಲ್ಲಿದೆ ಮಾಹಿತಿ  
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Nov 06, 2023 | 10:10 AM

ತಂತ್ರಜ್ಞಾನ ಮುಂದುವರಿದಿದೆ. ಇದರಿಂದ ಜನರಿಗೆ ಸಾಕಷ್ಟು ಲಾಭಗಳು ಆಗಿವೆ. ಅದೇ ರೀತಿ ಕೆಲವು ತೊಂದರೆಗಳು ಕೂಡ ಆಗುತ್ತಿವೆ. ಆರ್ಟಿಫೀಷಿಯಲ್ ಇಂಟಲಿಜೆನ್ಸ್ (ಎಐ) ಬಳಕೆ ಮಾಡಿಕೊಂಡು ಯಾರ ಮುಖವನ್ನು ಯಾರಿಗೆ ಬೇಕಿದ್ದರೂ ಅಂಟಿಸಬಹುದು. ಈಗ ಎಐ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಿರುಚಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ರಶ್ಮಿಕಾ ಮಂದಣ್ಣ (Rashmika Mandanna) ಎಂದು ಅನೇಕರು ತಪ್ಪಾಗಿ ಭಾವಿಸಿದ್ದಾರೆ. ಈ ವಿಡಿಯೋದ ಅಸಲಿತನ ಇಲ್ಲಿದೆ.

ಫಿಟ್ ಡ್ರೆಸ್ ಹಾಕಿ ರಶ್ಮಿಕಾ ಮಂದಣ್ಣ ಅವರು ಲಿಫ್ಟ್ ಏರುತ್ತಿರುವುದು ವೈರಲ್ ವಿಡಿಯೋದಲ್ಲಿದೆ. ರಶ್ಮಿಕಾ ಮಂದಣ್ಣ ಅವರಿಗೆ ಅನೇಕರು ಡ್ರೆಸ್ ಬಗ್ಗೆ ಪಾಠ ಹೇಳಿದ್ದರು. ಯಾವ ರೀತಿಯ ಡ್ರೆಸ್ ಹಾಕಬೇಕು ಎಂಬುದು ತಿಳಿಯುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಆದರೆ, ಅಸಲಿಗೆ ಇದು ರಶ್ಮಿಕಾ ಮಂದಣ್ಣನೇ ಅಲ್ಲ. ಯಾರೋ ಎಡಿಟ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಇದರ ಫ್ಯಾಕ್ಟ್ ಚೆಕ್ ಮಾಡಲಾಗಿದೆ. ಇದು ಅಸಲಿಗೆ ಜರಾ ಪಟೇಲ್ ಎಂಬುವವರ ವಿಡಿಯೋ. ಆಂಗ್ಲೋ ಇಂಡಿಯನ್ ಹುಡುಗಿ ಆಗಿರುವ ಇವರು ಅಕ್ಟೋಬರ್ 9ರಂದು ಲಿಫ್ಟ್ ಏರುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದರು. ಜರಾ ಅವರ ಮುಖಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಹಾಕಲಾಗಿದೆ. ಇದು ರಶ್ಮಿಕಾ ಮಂದಣ್ಣ ಎಂದೇ ಎಲ್ಲರಿಗೂ ಭಾಸವಾಗಿದೆ.

ಇದನ್ನೂ ಓದಿ: ವಿನಯ್ ಅಲ್ಲ, ಸಂಗೀತಾ ಬಿಗ್ ಬಾಸ್​ನಲ್ಲಿ ಅತಿ ಹೆಚ್ಚು ಹೇಟ್ ಮಾಡುವ ಸ್ಪರ್ಧಿ ಇವರೇ

ಈ ಕುರಿತು ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ವಿಡಿಯೋಗೆ ಸಂಬಂಧಿಸಿದ ಟ್ವೀಟ್​ನ ರೀಟ್ವೀಟ್ ಮಾಡಿರುವ ಅಮಿತಾಭ್ ಬಚ್ಚನ್ ಅವರು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸರು ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ