AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಹಾದ್ ಫಾಸಿಲ್​ಗೆ ಬರ್ತ್​​ಡೇ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್​​; ಪವನ್​ ಕುಮಾರ್ ನಿರ್ದೇಶನ?

ಫಹಾದ್ ಫಾಸಿಲ್ ಅವರು ಮಲಯಾಳಂನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ತಮಿಳು ಮೊದಲಾದ ಭಾಷೆಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಅವರು ಇದೇ ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಫಹಾದ್ ಫಾಸಿಲ್​ಗೆ ಬರ್ತ್​​ಡೇ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್​​; ಪವನ್​ ಕುಮಾರ್ ನಿರ್ದೇಶನ?
ಪವನ್-ಫಹಾದ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 08, 2022 | 6:02 PM

Share

ವಿಜಯ್ ಕಿರಗಂದೂರು (Vijay Kirgandur) ಅವರ ಒಡೆತನದ ಹೊಂಬಾಳೆ ಫಿಲ್ಮ್ಸ್​ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ‘ಕೆಜಿಎಫ್ 2’ ಬಳಿಕ ಪರಭಾಷೆಗಳ ಸ್ಟಾರ್ಸ್​​ ಜತೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕೈ ಜೋಡಿಸುತ್ತಿದ್ದಾರೆ. ಇದು ಕನ್ನಡದ ಪಾಲಿಗೆ ನಿಜಕ್ಕೂ ಹೆಮ್ಮೆ. ಈಗ ಈ ವಿಚಾರದಲ್ಲಿ ಮತ್ತೊಂದು ಅಪ್​ಡೇಟ್ ಸಿಕ್ಕಿದೆ. ಮಲಯಾಳಂ ನಟ ಫಹಾದ್ ಫಾಸಿಲ್ (Fahadh Faasil) ಜತೆ ವಿಜಯ್ ಕಿರಗಂದೂರು ಅವರು ಸಿನಿಮಾ ಮಾಡುತ್ತಿದ್ದಾರೆ. ನಟನ ಬರ್ತ್​ಡೇ ದಿನವೇ ಈ ಬಗ್ಗೆ ಘೋಷಣೆ ಆಗಿದೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಫಹಾದ್ ಫಾಸಿಲ್ ಅವರು ಮಲಯಾಳಂನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ತಮಿಳು ಮೊದಲಾದ ಭಾಷೆಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಅವರು ಇದೇ ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಯಾವ ಚಿತ್ರ, ಅವರ ಪಾತ್ರ ಏನು ಎಂಬುದು ಇನ್ನಷ್ಟೇ ಅಧಿಕೃತವಾಗಬೇಕಿದೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಬಣ್ಣ ಬಣ್ಣದ ಚರ್ಚೆಗಳು ಆಗುತ್ತಿವೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಮೂಲಗಳ ಪ್ರಕಾರ ‘ಲೂಸಿಯಾ’ ಪವನ್ ಕುಮಾರ್ ಅವರು ಫಹಾದ್ ಫಾಸಿಲ್ ಅವರ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪವನ್ ಕುಮಾರ್ ನಿರ್ದೇಶನದ ಚಿತ್ರಗಳು ಎಂದರೆ ಒಂದಷ್ಟು ಹೊಸ ವಿಚಾರಗಳು, ಸಿನಿಮಾದಲ್ಲಿ ಹೊಸತನ ಇದ್ದೇ ಇರುತ್ತದೆ. ‘ಲೂಸಿಯಾ’, ‘ಯು-ಟರ್ನ್​’ ಚಿತ್ರಗಳೇ ಇದಕ್ಕೆ ಸಾಕ್ಷಿ. ಈಗ ಅವರು ಆ್ಯಕ್ಟನ್ ಕಟ್ ಹೇಳುತ್ತಿರುವ ಹೊಸ ಸಿನಿಮಾದಲ್ಲಿ ಫಹಾದ್ ನಟಿಸುತ್ತಿದ್ದಾರೆ ಎಂಬ ವದಂತಿ ಸಾಕಷ್ಟು ಕುತೂಹಲ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು

ಪವನ್ ಕುಮಾರ್ ಅವರು ಪುನೀತ್ ರಾಜ್​ಕುಮಾರ್ ನಟನೆಯ ‘ದ್ವಿತ್ವ’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಬೇಕಿತ್ತು. ಆದರೆ, ಸಿನಿಮಾ ಆರಂಭಕ್ಕೂ ಮೊದಲೇ ಪುನೀತ್ ನಿಧನ ಹೊಂದಿದರು. ‘ದ್ವಿತ್ವ’ ಚಿತ್ರದ ಕಥೆಗೆ ಪುನೀತ್ ಬದಲು ಫಹಾದ್ ಫಾಸಿಲ್ ಸೇರಿಕೊಂಡಿದ್ದಾರೆ ಎಂಬ ಬಗ್ಗೆಯೂ ಗುಸುಗುಸು ಹುಟ್ಟಿಕೊಂಡಿದೆ. ಈ ಬಗ್ಗೆ ಅನೇಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಇದು ‘ದ್ವಿತ್ವ’ ಚಿತ್ರದ ಕಥೆಯಾ  ಅಥವಾ ಈ ಕಥೆಯೇ ಬೇರೇಯಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Published On - 5:14 pm, Mon, 8 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ