AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

ನಕಲಿ ಬ್ಯಾಂಕ್​ ಸಿಬ್ಬಂದಿ ಓರ್ವಳು ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​
ಮಹಿಳೆ ಹಾಗೂ ದರ್ಶನ್​
TV9 Web
| Edited By: |

Updated on:Jul 11, 2021 | 5:24 PM

Share

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published On - 4:41 pm, Sun, 11 July 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್