AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

ನಕಲಿ ಬ್ಯಾಂಕ್​ ಸಿಬ್ಬಂದಿ ಓರ್ವಳು ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​
ಮಹಿಳೆ ಹಾಗೂ ದರ್ಶನ್​
TV9 Web
| Edited By: |

Updated on:Jul 11, 2021 | 5:24 PM

Share

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published On - 4:41 pm, Sun, 11 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು