AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

ನಕಲಿ ಬ್ಯಾಂಕ್​ ಸಿಬ್ಬಂದಿ ಓರ್ವಳು ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​
ಮಹಿಳೆ ಹಾಗೂ ದರ್ಶನ್​
TV9 Web
| Edited By: |

Updated on:Jul 11, 2021 | 5:24 PM

Share

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published On - 4:41 pm, Sun, 11 July 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ