AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

ನಕಲಿ ಬ್ಯಾಂಕ್​ ಸಿಬ್ಬಂದಿ ಓರ್ವಳು ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​
ಮಹಿಳೆ ಹಾಗೂ ದರ್ಶನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 11, 2021 | 5:24 PM

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published On - 4:41 pm, Sun, 11 July 21

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್