AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

ನಕಲಿ ಬ್ಯಾಂಕ್​ ಸಿಬ್ಬಂದಿ ಓರ್ವಳು ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು.

ವಂಚನೆ ಪ್ರಯತ್ನ ; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​
ಮಹಿಳೆ ಹಾಗೂ ದರ್ಶನ್​
TV9 Web
| Edited By: |

Updated on:Jul 11, 2021 | 5:24 PM

Share

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published On - 4:41 pm, Sun, 11 July 21

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ