AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೂ ಸಿಗಬಹುದು 600 ರೂಪಾಯಿ ನೋಟು; ಏನಿದರ ಅಸಲಿಯತ್ತು?

ನ್ಯೂಸ್​ ಪೇಪರ್​ ಒಳಗೆ 600 ರೂಪಾಯಿ ನೋಟನ್ನು ಇಟ್ಟು ಜನರಿಗೆ ತಲುಪಿಸಲಾಗುತ್ತಿದೆ. ಜನಜಂಗುಳಿ ಇರುವ ಜಾಗಗಳಲ್ಲೂ ಕೂಡ ಈ ನೋಟನ್ನು ಇಡಲಾಗುತ್ತಿದೆ. ಆ ಮೂಲಕ ಜನರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಒಮ್ಮೆಲೇ ನೋಡಿದರೆ ರಿಯಲ್​ ದುಡ್ಡಿನ ರೀತಿ ಕಾಣುವ ಈ ನೋಟಿನ ಇನ್ನೊಂದು ಬದಿಯಲ್ಲಿ ಅಸಲಿ ವಿಚಾರ ಅಡಗಿದೆ.

ನಿಮಗೂ ಸಿಗಬಹುದು 600 ರೂಪಾಯಿ ನೋಟು; ಏನಿದರ ಅಸಲಿಯತ್ತು?
ವೈರಲ್​ ಆದ 600 ರೂಪಾಯಿ ನೋಟು
ಮದನ್​ ಕುಮಾರ್​
|

Updated on: Apr 30, 2024 | 7:08 PM

Share

ಸುಮ್ಮನೆ ನಡೆದುಕೊಂಡು ಹೋಗುವಾಗ ದಾರಿಯಲ್ಲಿ ದುಡ್ಡು ಸಿಗಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಕೆಲವೊಮ್ಮೆ ಅದು ನಿಜವಾಗುತ್ತದೆ ಕೂಡ. ಈಗ ಕೆಲವರಿಗೆ ಗರಿ ಗರಿ ನೋಟು ಸಿಗುತ್ತಿದೆ. ಆದರೆ ಅದು 500 ರೂಪಾಯಿ ನೋಟು ಅಲ್ಲ. ಬದಲಿಗೆ 600 ರೂಪಾಯಿ ನೋಟು! ದೂರದಿಂದ ನೋಡಿದರೆ ಪಕ್ಕಾ 500 ರೂಪಾಯಿಯ ನೋಟಿನಂತೆ ಕಾಣುವ ಇದು ಸಂಪೂರ್ಣ ನಕಲಿ! ತಿರುಗಿಸಿ ನೋಡಿದರೆ ಅದರ ಅಸಲಿಯತ್ತು ಏನು ಎಂಬುದು ಗೊತ್ತಾಗುತ್ತದೆ. ಹೌದು, ಇದು ‘ಫ್ಯಾಮಿಲಿ ಡ್ರಾಮಾ’ (Family Drama) ಸಿನಿಮಾದ ಪ್ರಮೋಷನ್​ ಪ್ಲ್ಯಾನ್​.

ಹೊಸಬರ ತಂಡವೊಂದು ‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಮಾಡಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಟ್ರೇಲರ್​ ಬಿಡುಗಡೆಯ ವಿಚಾರವನ್ನು ಹೆಚ್ಚು ಜನರಿಗೆ ತಲುಪಿಸಬೇಕು ಹಾಗೂ ಸಿನಿಪ್ರಿಯರು ಟ್ರೇಲರ್​ ನೋಡುವಂತೆ ಆಗಬೇಕು ಎಂಬ ಉದ್ದೇಶದಿಂದ ಈ 600 ರೂಪಾಯಿ ನೋಟಿನ ಪ್ಲ್ಯಾನ್​ ಮಾಡಲಾಗಿದೆ. ಈ ನೋಟಿನ ಇನ್ನೊಂದು ಬದಿಯಲ್ಲಿ ದೊಡ್ಡದಾಗಿ ‘ಫ್ಯಾಮಿಲಿ ಡ್ರಾಮಾ ಟ್ರೇಲರ್’​ ಎಂದು ಬರೆಯಲಾಗಿದೆ. ಪಕ್ಕದಲ್ಲಿ ಕ್ಯೂಆರ್​ ಕೋಡ್​ ನೀಡಲಾಗಿದೆ. ಅದನ್ನು ಸ್ಕ್ಯಾನ್​ ಮಾಡಿದರೆ ‘ಫ್ಯಾಮಿಲಿ ಡ್ರಾಮಾ’ ಸಿನಿಮಾದ ಟ್ರೇಲರ್​ ವೀಕ್ಷಿಸಬಹುದು.

Family Drama

600 ರೂಪಾಯಿ ನೋಟಿನ ಇನ್ನೊಂದು ಬದಿ

ಆರ್ಕಷ್​ ಎಚ್​.ಪಿ. ಅವರು ‘ಫ್ಯಾಮಿಲಿ ಡ್ರಾಮಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು, ದಬ್ಬುಗುಡಿ ಮುರಳಿಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಸಿಂಧೂ ಶ್ರೀನಿವಾಸ ಮೂರ್ತಿ, ಮಹದೇವ್​​ ಹಡಪದ್​, ಅಭಯ್​, ಪೂರ್ಣಚಂದ್ರ ಮೈಸೂರು ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡದವರು ಹೊಸ ತಂತ್ರ ರೂಪಿಸಿದ್ದಾರೆ.

ಇದನ್ನೂ ಓದಿ: ಸದ್ದು ಮಾಡುತ್ತಿದೆ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​; ಭರವಸೆ ಮೂಡಿಸಿದ ಹೊಸ ಸಿನಿಮಾ ತಂಡ

ನ್ಯೂಸ್​ ಪೇಪರ್​ ಜೊತೆಗೆ ಇಟ್ಟು 600 ರೂಪಾಯಿ ನೋಟನ್ನು ಜನರಿಗೆ ತಲುಪಿಸಲಾಗಿದೆ. ಜನ ಜಂಗುಳಿ ಇರುವ ಪ್ರದೇಶಗಳಲ್ಲೂ ಸಹ ಈ ನೋಟನ್ನು ಇಡಲಾಗಿದೆ. ಆ ಮೂಲಕ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಸಿನಿಮಾ ಮಾಡುವುದು ಎಷ್ಟು ಮುಖ್ಯವೋ ಸೂಕ್ತವಾಗಿ ಪ್ರಚಾರ ಮಾಡುವುದು ಕೂಡ ಅಷ್ಟೇ ಮುಖ್ಯ. ಜನರಿಗೆ ಸಿನಿಮಾ ಬಗ್ಗೆ ತಿಳಿಸಿಕೊಡಲು ‘ಫ್ಯಾಮಿಲಿ ಡ್ರಾಮಾ’ ತಂಡದವರು ಈ ರೀತಿಯ ಪ್ರಯತ್ನ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​, ಪೋಸ್ಟರ್​ ಗಮನ ಸೆಳೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!