AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಫ್ಯಾಮಿಲಿ ಪ್ಯಾಕ್​’ ನಿರ್ದೇಶಕನಿಗೆ ಸ್ಟಾರ್​ ನಿರ್ಮಾಪಕರ ಬುಲಾವ್​​; ತೆಲುಗಿನಿಂದ ಬಂತು ಆಫರ್

ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ‘ಫ್ಯಾಮಿಲಿ ಪ್ಯಾಕ್​’ ಚಿತ್ರದಲ್ಲಿ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಸಿಹಿ-ಕಹಿ ಚಂದ್ರು, ರಂಗಾಯಣ ರಘು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ತಮಿಳಿನ ರಜನಿಕಾಂತ್ ಅವರ ಪಿಆರ್​ಒ ಆಗಿರುವ ರಿಯಾಜ್ ಕೆ. ಅಹ್ಮದ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.

 ‘ಫ್ಯಾಮಿಲಿ ಪ್ಯಾಕ್​’ ನಿರ್ದೇಶಕನಿಗೆ ಸ್ಟಾರ್​ ನಿರ್ಮಾಪಕರ ಬುಲಾವ್​​; ತೆಲುಗಿನಿಂದ ಬಂತು ಆಫರ್
ಅರ್ಜುನ್​ ಕುಮಾರ್-ಪುನೀತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 25, 2022 | 1:55 PM

ಫೆಬ್ರವರಿ 16ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ (Amazon Prime Video) ‘ಫ್ಯಾಮಿಲಿ ಪ್ಯಾಕ್​’ (Family Pack) ರಿಲೀಸ್​ ಆಗಿತ್ತು. ಈ ಸಿನಿಮಾವನ್ನು ಪುನೀತ್​ ರಾಜ್​ಕುಮಾರ್ (Puneeth Rajkumar) ಒಡೆತನದ ‘ಪಿಆರ್​ಕೆ ಸ್ಟುಡಿಯೋಸ್​’ ನಿರ್ಮಾಣ ಮಾಡಿದೆ. ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಮಿಡಿ ಕಥಾ ಹಂದರವುಳ್ಳ ಈ ಸಿನಿಮಾ ಎಲ್ಲರನ್ನೂ ನಗಿಸಿತ್ತು. ದಕ್ಷಿಣ ಭಾರತದ ಹಲವು ದಿಗ್ಗಜರಿಂದಲೂ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು. ಈ ಚಿತ್ರವನ್ನು ನಿರ್ದೇಶನ ಮಾಡಿದ ಅರ್ಜುನ್​ ಕುಮಾರ್​ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ಟಾಲಿವುಡ್​ನಿಂದ ಅವರಿಗೆ ಬುಲಾವ್​ ಬಂದಿದೆ.

ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ‘ಫ್ಯಾಮಿಲಿ ಪ್ಯಾಕ್​’ ಚಿತ್ರದಲ್ಲಿ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಸಿಹಿ-ಕಹಿ ಚಂದ್ರು, ರಂಗಾಯಣ ರಘು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ತಮಿಳಿನ ರಜನಿಕಾಂತ್ ಅವರ ಪಿಆರ್​ಒ ಆಗಿರುವ ರಿಯಾಜ್ ಕೆ. ಅಹ್ಮದ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ‘ಬಾಹುಬಲಿ’ ಮತ್ತು ‘ಆರ್​ಆರ್​ಆರ್’ ಸಿನಿಮಾ ತಂಡದ ಜತೆ ಗುರುತಿಸಿಕೊಂಡಿರುವ ವಂಶಿ ಕಾಕಾ ಕೂಡ ಅರ್ಜುನ್​ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿ ತಜ್ಞ ರಮೇಶ್ ಬಾಲ ಅವರಿಂದಲೂ ‘ಫ್ಯಾಮಿಲಿ ಪ್ಯಾಕ್​’ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.  ಈ ಕಾರಣಕ್ಕೆ ಪರಭಾಷಿಕರು ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಅಲ್ಲು ಅರ್ಜುನ್ ಒಡೆತನದ ‘ಆಹಾ’ ಓಟಿಟಿ ಮೀಡಿಯಾದ ಕಂಟೆಂಟ್​ ಮುಖ್ಯಸ್ಥೆ ಪ್ರಣೀತಾ ಅವರು ‘ಫ್ಯಾಮಿಲಿ ಪ್ಯಾಕ್​’ ಸಿನಿಮಾ ನೋಡಿದ್ದಾರೆ. ಅಲ್ಲದೆ, ಅರ್ಜುನ್​ ಅವರಿಗೆ ಹೈದರಾಬಾದ್​ಗೆ ಆಹ್ವಾನ ನೀಡಿದ್ದಾರೆ. ವಿಜಯ್ ದೇವರಕೊಂಡ ಅವರ ಪಿಆರ್​ಒ ಆಗಿರುವ ಸುರೇಶ್ ಕೊಂಡ, ತೆಲುಗಿನಲ್ಲಿಯೂ ಈ ಸಿನಿಮಾ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ‘ಫ್ಯಾಮಿಲಿ ಪ್ಯಾಕ್’ ಚಿತ್ರದಿಂದ ನಿರ್ದೇಶಕ ಅರ್ಜುನ್ ಕುಮಾರ್ ಅವರನ್ನು ಬೇರೆ ಬೇರೆ ಇಂಡಸ್ಟ್ರಿಯವರೂ ಗುರುತಿಸುತ್ತಿದ್ದಾರೆ.

ಈ ಬಗ್ಗೆ ನಿರ್ದೇಶಕರು ಹೇಳುವುದೇ ಬೇರೆ. ‘ಮಾತುಕತೆಗಳು ನಡೆಯುತ್ತಿವೆ. ಆದರೆ, ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ. ಈಗಲೇ ಅದೆಲ್ಲವನ್ನೂ ನಾನು ರಿವೀಲ್ ಮಾಡುವುದಿಲ್ಲ. ‘ಪಿಆರ್​ಕೆ’ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ ‘ಫ್ಯಾಮಿಲಿ ಪ್ಯಾಕ್’ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಅದೇ ಖುಷಿಯ ವಿಚಾರ ಎಂಬುದು ಅರ್ಜುನ್​ ಮಾತು.

 ಫ್ಯಾಮಿಲಿ ಪ್ಯಾಕ್​ ಸಿನಿಮಾದ ಒಂದೆಳೆ ಏನು?

ಅಭಿ (ಲಿಖಿತ್​ ಶೆಟ್ಟಿ) ಚಿಕ್ಕ ವಯಸ್ಸಿನಲ್ಲಿರುವಾಗಲೇ ಆತನ ತಂದೆ-ತಾಯಿ (ಅಚ್ಯುತ್​ ಕುಮಾರ್​-ಪದ್ಮಜಾ ರಾವ್​) ಬೇರೆ ಆಗುತ್ತಾರೆ. ಅಭಿ ಬೆಳೆದು ದೊಡ್ಡವನಾಗುವವರೆಗೆ ಆತನ ತಂದೆಗೆ ಮೂರನೇ ಮದುವೆ ಆಗಿರುತ್ತದೆ. ಆದರೆ, ಅಭಿಗೆ ಮಾತ್ರ ಪ್ರೀತಿಯ ಆಸರೆ ಸಿಕ್ಕಿರುವುದಿಲ್ಲ. ಆರು ತಿಂಗಳು ತಂದೆಯ ಮನೆಯಲ್ಲಿರುವ ಅಭಿ ಮತ್ತಾರು ತಿಂಗಳು ಅಮ್ಮನ ಮನೆಯಲ್ಲಿ ವಾಸಿಸುತ್ತಿರುತ್ತಾನೆ. ಈ ಕಾಂಟ್ರ್ಯಾಕ್ಟ್​ನಿಂದ ಬೇಸತ್ತಿರುವ ಅಭಿಗೆ ಭೂಮಿಕಾ (ಅಮೃತಾ) ಮೇಲೆ ಲವ್​ ಆಗಿರುತ್ತದೆ. ಆದರೆ, ಆಕೆ ಈತನ ಕಡೆಗೂ ತಿರುಗಿ ನೋಡಿರುವುದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್​ ಆಗೋಕೆ ಆಕೆ ಏನು ಮಾಡೋಕೂ ರೆಡಿ. ಹೀಗಿರುವಾಗಲೇ ಅಭಿ ಆತ್ಮಹತ್ಯೆಯ ನಿರ್ಧಾರಕ್ಕೆ ಬರುತ್ತಾನೆ. ಆಗ ಬಂದು ಕಾಪಾಡೋದು ಮಂಜುನಾಥ್​ (ರಂಗಾಯಣ ರಘು). ಅಷ್ಟಕ್ಕೂ ಈ ಮಂಜುನಾಥ್​ ಯಾರು? ಅವನು ಅಭಿಯನ್ನು ಏಕೆ ಕಾಪಾಡುತ್ತಾನೆ? ಈ ಎಲ್ಲಾ ಪ್ರಶ್ನೆಗೆ ನೀವು ಸಿನಿಮಾದಲ್ಲಿ ಉತ್ತರ ಹುಡುಕಬೇಕು.

ಒದನ್ನೂ ಓದಿ: ಪುನೀತ್​ ರಾಜ್​ಕುಮಾರ್ ಕುರಿತು ಬಯೋಗ್ರಫಿ; ಈ ಪುಸ್ತಕದಲ್ಲಿ ಏನೆಲ್ಲ ಮಾಹಿತಿ ಇರಲಿದೆ?

Family Pack Movie Review: ‘ಫ್ಯಾಮಿಲಿ ಪ್ಯಾಕ್’ ತುಂಬ ಮನರಂಜನೆ, ಸ್ವಲ್ಪ ಎಮೋಷನ್ಸ್, ಒಂದಷ್ಟು ಫ್ಯಾಂಟಸಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ