AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಅರವಿಂದ್​ ಜತೆ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ನಟಿಸಲಿರುವ ಖ್ಯಾತ ನಟ ನಾಸರ್​

Ramesh Aravind | Shivaji Surathkal 2: ಬಹಳ ವರ್ಷಗಳಿಂದಲೂ ರಮೇಶ್​ ಅರವಿಂದ್​ ಮತ್ತು ನಾಸರ್​ ನಡುವೆ ಒಡನಾಟ ಇದೆ. ಆದರೆ ಜೊತೆಯಲ್ಲಿ ನಟಿಸಲು ಕಾಲ ಕೂಡಿಬಂದಿರುವುದು ಇದೇ ಮೊದಲು.

ರಮೇಶ್​ ಅರವಿಂದ್​ ಜತೆ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ನಟಿಸಲಿರುವ ಖ್ಯಾತ ನಟ ನಾಸರ್​
ರಮೇಶ್​ ಅರವಿಂದ್​, ನಾಸರ್​
TV9 Web
| Edited By: |

Updated on: Jan 03, 2022 | 9:58 AM

Share

ನಟ ರಮೇಶ್​ ಅರವಿಂದ್​ (Ramesh Aravind) ಅವರು ‘ಶಿವಾಜಿ ಸುರತ್ಕಲ್​’ (Shivaji Surathkal) ಸಿನಿಮಾ ಮೂಲಕ ಮೋಡಿ ಮಾಡಿದರು. 2020ರ ಫೆಬ್ರವರಿಯಲ್ಲಿ ತೆರೆಕಂಡ ಆ ಸಿನಿಮಾ ಸೂಪರ್​ ಹಿಟ್​ ಆಯಿತು. ನಂತರ ಒಟಿಟಿ ಪ್ಲಾಟ್​ಫಾರ್ಮ್​ನಲ್ಲೂ ಪ್ರಸಾರವಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತು. ಆಕಾಶ್​ ಶ್ರೀವಸ್ತ (Akash Srivatsa) ನಿರ್ದೇಶನದ ಈ ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದಾಗಿ ಈಗ ಸೀಕ್ವೆಲ್​ ಕೂಡ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್​ 2’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಈಗ ಈ ಚಿತ್ರತಂಡಕ್ಕೆ ಖ್ಯಾತ ಬಹುಭಾಷಾ ನಟ ನಾಸರ್​ (Nassar) ಅವರು ಸೇರ್ಪಡೆ ಆಗಿದ್ದಾರೆ. ಚಿತ್ರದಲ್ಲಿ ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಆ ಬಗ್ಗೆ ‘ಶಿವಾಜಿ ಸುರತ್ಕಲ್​ 2’ (Shivaji Surathkal 2) ತಂಡ ಮಾಹಿತಿ ಹಂಚಿಕೊಂಡಿದೆ. ಈ ಸಿನಿಮಾವನ್ನು ಅನೂಪ್​ ಗೌಡ ಮತ್ತು ರೇಖಾ ಕೆ.ಎನ್​. ನಿರ್ಮಾಣ ಮಾಡುತ್ತಿದ್ದಾರೆ.

1985ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವವರು ನಾಸರ್​. ತೆಲುಗು, ತಮಿಳು, ಕನ್ನಡ, ಮಲಯಾಳಂ, ಇಂಗ್ಲಿಷ್​ ಸೇರಿ ಅವರು 600ಕ್ಕೂ ಅಧಿಕ ಸಿನಿಮಾಗಳಲ್ಲಿ​ ನಟಿಸಿದ್ದಾರೆ. ಸಾವಿರಾರು ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ರಮೇಶ್​ ಅರವಿಂದ್ ಜತೆ ನಟಿಸುತ್ತಿರುವುದು ವಿಶೇಷ.

ಪತ್ತೆದಾರ ಶಿವಾಜಿ ಸುರತ್ಕಲ್​ ಪಾತ್ರವನ್ನು ರಮೇಶ್​ ಅರವಿಂದ್​ ಮಾಡುತ್ತಿದ್ದಾರೆ. ಅವರ ತಂದೆಯ ಪಾತ್ರದಲ್ಲಿ ನಾಸರ್​ ಕಾಣಿಸಿಕೊಳ್ಳಲಿದ್ದಾರೆ. ವಿಜೇಂದ್ರ ಸುರತ್ಕಲ್​ ಎಂಬ ಈ ಪಾತ್ರವು ಕಥೆಯಲ್ಲಿ ಹೈಲೈಟ್​ ಆಗಲಿದೆ. ಬಹಳ ವರ್ಷಗಳಿಂದಲೂ ರಮೇಶ್​ ಅರವಿಂದ್​ ಮತ್ತು ನಾಸರ್​ ಸ್ನೇಹಿತರಾಗಿದ್ದಾರೆ. ಆದರೆ ಜೊತೆಯಲ್ಲಿ ನಟಿಸಲು ಕಾಲ ಕೂಡಿಬಂದಿರುವುದು ಇದೇ ಮೊದಲು. ನಾಸರ್​ ಆಗಮನದಿಂದಾಗಿ ‘ಶಿವಾಜಿ ಸುರತ್ಕಲ್​ 2’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಮಾದರಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

2021ರ ಡಿ.13ರಿಂದಲೇ ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ರಮೇಶ್​ ಅರವಿಂದ್​​ ಜೊತೆ ರಾಧಿಕಾ ನಾರಾಯಣ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ, ವಿನಾಯಕ್ ಜೋಷಿ ಮುಂತಾದವರು ನಟಿಸುತ್ತಿದ್ದಾರೆ. ಗುರುಪ್ರಸಾದ್ ಎಮ್.ಜಿ. ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. 2022ರ ಜನವರಿಯ ಕೊನೆಯಲ್ಲಿ ಈ ಸಿನಿಮಾದ ಬಹುಪಾಲು ಚಿತ್ರೀಕರಣ ಮುಗಿಯಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

2022ರ ಪೂರ್ತಿ ರಮೇಶ್​ ಅರವಿಂದ್​ ವಿಶೇಷ ಮಾತುಗಳು; ಹೊಸ ಪ್ರಯತ್ನಕ್ಕೆ ಕೈ ಹಾಕಿದ ಎವರ್​ಗ್ರೀನ್​ ನಟ

ಹೇಗಿತ್ತು ‘ಶಿವಾಜಿ ಸುರತ್ಕಲ್​ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ