AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣರನ್ನು ನೋಡಲು ಟ್ರೈನ್, ಗೂಡ್ಸ್ ಹತ್ತಿ ಕೊಡಗಿಗೆ ಬಂದ ಅಭಿಮಾನಿ.. ಆದ್ರೆ ಪೊಲೀಸರ ಕೈಗೆ ಸಿಕ್ಕಿ ವಾಪಸ್ ಆದ

Rashmika Mandanna: ಆಕಾಶ್ ತ್ರಿಪಾಟಿ ಎಂಬ ಅಭಿಮಾನಿ ತೆಲಂಗಾಣದಿಂದ ನಟಿ ರಶ್ಮಿಕಾಳ ಮನೆ ಹುಡುಕಾಡುತ್ತ ಬಂದಿದ್ದಾನೆ. ರಶ್ಮಿಕಾ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಗ್ಗುಲದಲ್ಲಿರುತ್ತಾರೆಂದು ತಿಳಿದು ಹೈದರಾಬಾದ್ನಿಂದ ಮೈಸೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಗೂಡ್ಸ್ ಆಟೋದಲ್ಲಿ ಕೊಡಗಿನ ವಿರಾಜಪೇಟೆಗೆ ಬಂದಿದ್ದಾನೆ.

ರಶ್ಮಿಕಾ ಮಂದಣ್ಣರನ್ನು ನೋಡಲು ಟ್ರೈನ್, ಗೂಡ್ಸ್ ಹತ್ತಿ ಕೊಡಗಿಗೆ ಬಂದ ಅಭಿಮಾನಿ.. ಆದ್ರೆ ಪೊಲೀಸರ ಕೈಗೆ ಸಿಕ್ಕಿ ವಾಪಸ್ ಆದ
ರಶ್ಮಿಕಾ ಮಂದಣ್ಣ
TV9 Web
| Updated By: ಆಯೇಷಾ ಬಾನು|

Updated on:Jun 23, 2021 | 12:49 PM

Share

ಮಡಿಕೇರಿ: ಕರುನಾಡ ಕ್ರಶ್, ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣರನ್ನು ನೋಡಲು ಅಭಿಮಾನಿಯೊಬ್ಬ ತೆಲಂಗಾಣದಿಂದ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮಕ್ಕೆ ಹುಡುಕಿಕೊಂಡು ಬಂದಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ತಮ್ಮ ಮೆಚ್ಚಿನ ನಟ-ನಟಿಯರನ್ನು ಭೇಟಿ ಮಾಡಬೇಕು ಎಂಬುವುದು ಅದೆಷ್ಟೋ ಅಭಿಮಾನಿಗಳ ಕನಸಾಗಿರುತ್ತೆ. ಸಿನಿಮಾ ತಾರೆಯರ ಮೇಲಿನ ಅಭಿಮಾನ ಹೆಚ್ಚಾಗಿ ಅಭಿಮಾನಿಗಳು ಹುಚ್ಚುಚ್ಚಾಗಿ ವರ್ತಿಸುವ ಘಟನೆಗಳನ್ನು ನಾವು ನೋಡಿದ್ದೇವೆ. ಆದರೆ ಇಲ್ಲಿ ನಡೆದಿದ್ದು ಬೇರೆ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟಿಯನ್ನು ನೋಡಲು ಮಡಿಕೇರಿಗೆ ಬಂದು ಪೊಲೀಸರ ಕೈಗೆ ಸಿಕ್ಕಿ ಬುದ್ದಿವಾದ ಹೇಳಿಸಿಕೊಂಡಿದ್ದಾನೆ.

ಆಕಾಶ್ ತ್ರಿಪಾಟಿ ಎಂಬ ಅಭಿಮಾನಿ ತೆಲಂಗಾಣದಿಂದ ನಟಿ ರಶ್ಮಿಕಾಳ ಮನೆ ಹುಡುಕಾಡುತ್ತ ಬಂದಿದ್ದಾನೆ. ರಶ್ಮಿಕಾ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಗ್ಗುಲದಲ್ಲಿರುತ್ತಾರೆಂದು ತಿಳಿದು ಹೈದರಾಬಾದ್ನಿಂದ ಮೈಸೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಗೂಡ್ಸ್ ಆಟೋದಲ್ಲಿ ಕೊಡಗಿನ ವಿರಾಜಪೇಟೆಗೆ ಬಂದಿದ್ದಾನೆ. ಅಲ್ಲಿ ಆಕಾಶ್ ಸಿಕ್ಕ ಸಿಕ್ಕವರಿಗೆ ರಶ್ಮಿಕಾರ ಮನೆ ಎಲ್ಲಿ ಎಂದು ಕೇಳುತ್ತ ಅಲೆದಾಡಿದ್ದಾನೆ. ಈತನ ವರ್ತನೆ ಕಂಡು ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಆಕಾಶ್ನನ್ನು ವಿರಾಜಪೇಟೆ ಪೊಲೀಸರು ವಶಕ್ಕೆ ಪಡೆದ್ರು. ವಿಚಾರಣೆ ವೇಳೆ ರಶ್ಮಿಕಾ ನೋಡಲು ಬಂದಿರುವುದಾಗಿ ಆಕಾಶ್ ಹೇಳಿದ್ದಾನೆ.

ಸದ್ಯ ಆಕಾಶ್‌ಗೆ ಬುದ್ಧಿವಾದ ಹೇಳಿ ಪೊಲೀಸರು ಆತನನ್ನು ವಾಪಸ್ ತೆಲಂಗಾಣಕ್ಕೆ ಹೋಗುವಂತೆ ತಿಳಿಸಿದ್ದಾರೆ. ಅದರಂತೆಯೇ ಆಕಾಶ್ ಕೂಡ ತೆಲಂಗಾಣಕ್ಕೆ ಮರಳಿದ್ದಾನೆ. ಪ್ರಸ್ತುತ ರಶ್ಮಿಕಾ ಮಂದಣ್ಣ ತಮ್ಮ ಹಿಂದಿ ಸಿನಿಮಾದ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದು ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಇದನ್ನೂ ಓದಿ: ವಿಜಯ್​ ದೇವರಕೊಂಡ ಜೊತೆ ಸೇರಿಕೊಂಡು ಸೈಲೆಂಟಾಗಿ ಮತ್ತೊಂದು ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

Published On - 10:57 am, Wed, 23 June 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ