AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿಕಾ ಪೂಣಚ್ಚ ಜೀವನಕ್ಕೆ ಸಿಕ್ತು ಹೊಸ ಅರ್ಥ; ಅಭಿಮಾನಿಗಳ ಜತೆ ಖುಷಿ ಹಂಚಿಕೊಂಡ ನಟಿ

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಹರ್ಷಿಕಾ ಮಾಡಿದ ಸಹಾಯವನ್ನು ಅಭಿಮಾನಿಗಳು ನೆನೆದಿದ್ದು, ಮಗಳಿಗೆ ಹರ್ಷಿಕಾ ಎಂದು ಹೆಸರಿಟ್ಟಿದ್ದಾರೆ.

ಹರ್ಷಿಕಾ ಪೂಣಚ್ಚ ಜೀವನಕ್ಕೆ ಸಿಕ್ತು ಹೊಸ ಅರ್ಥ; ಅಭಿಮಾನಿಗಳ ಜತೆ ಖುಷಿ ಹಂಚಿಕೊಂಡ ನಟಿ
ಹರ್ಷಿಕಾ ಪೂಣಚ್ಚ
Follow us
ರಾಜೇಶ್ ದುಗ್ಗುಮನೆ
|

Updated on:Jun 12, 2021 | 6:43 PM

ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಕೂಡ ಇದ್ದಕ್ಕೆ ಹೊರತಾಗಿಲ್ಲ. ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಾಗಿನಿಂದಲೂ ಅವರು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಮಾಡಿದ ಕೆಲಸಕ್ಕೆ ಈಗ ಅವರಿಗೆ ಸಾರ್ಥಕ ಭಾವನೆ ಮೂಡಿದೆ.

ಭುವನ್ ಪೊನ್ನಣ್ಣ ಜತೆಗೂಡಿ ಹರ್ಷಿಕಾ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊವಿಡ್ ಸಂಕಷ್ಟದಲ್ಲಿರುವವರಿಗೆ ಬೆಡ್​, ಆಮ್ಲಜನಕದ ಸಿಲಿಂಡರ್​ ಒದಗಿಸಲು ಮುಂದೆ ಬಂದಿರುವ ಅವರು, ನಾನಾ ಊರುಗಳಿಗೆ ತೆರಳಿ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಡಗಿಗೆ ತೆರಳಿದ್ದ ಹರ್ಷಿಕಾ, ಅಲ್ಲಿ ಕೊವಿಡ್ ವಾರ್ಡ್​ನಲ್ಲಿ ರೋಗಿಗಳನ್ನು ರಂಜಿಸಿದ್ದರು. ಅವರು ಸುಮಾರು 15,000 ಕುಟುಂಬಗಳಿಗೆ ನೆರವಾಗಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಹರ್ಷಿಕಾ ಮಾಡಿದ ಸಹಾಯವನ್ನು ಅಭಿಮಾನಿಗಳು ನೆನೆದಿದ್ದು, ಮಗಳಿಗೆ ಹರ್ಷಿಕಾ ಎಂದು ಹೆಸರಿಟ್ಟಿದ್ದಾರೆ. ಈ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಬಂದಿರುವ ಮೆಸೇಜ್​ ಒಂದರ ಸ್ಕ್ರೀನ್​ಶಾಟ್​ ಹಂಚಿಕೊಂಡಿದ್ದಾರೆ ಹರ್ಷಿಕಾ. ‘ಇವತ್ತು ನನ್ನ ತಮ್ಮನ ಮಗಳಿಗೆ ನಾಮಕರಣ ಮಾಡುತ್ತಿದ್ದೇವೆ. ಹೆಣ್ಣು ಮಗುವಿಗೆ ಹರ್ಷಿಕಾ ಎಂದು ಹೆಸರಿಡುತ್ತಿದ್ದೇವೆ. ಅಂದರೆ, ಇವಳು ನಿಮ್ಮ ತರಹದಲ್ಲೇ ಜನರ ಕಷ್ಟಕ್ಕೆ ಸ್ಪಂದಿಸುವಂತವಳಾಗಬೇಕು, ನಿಮ್ಮಂತೆ ಜನ ಸೇವಕಿ ಆಗಬೇಕು. ಆಶೀರ್ವಾದ ಮಾಡಿ ಮೇಡಂ’ ಎಂದು ಸಂದೇಶದಲ್ಲಿದೆ.

ಈ ಸಂದೇಶ ನೋಡಿದ ಹರ್ಷಿಕಾಗೆ ಸಂತಸವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಹರ್ಷಿಕಾ, ‘ನನ್ನ ಜೀವನಕ್ಕೆ ಹೊಸ ಅರ್ಥ ಸಿಕ್ಕಿರುವ ಹಾಗಿದೆ. ಈ ಮುದ್ದು ಪುಟಾಣಿ ಕಂದಮ್ಮನಿಗೆ ನನ್ನ ಹೆಸರು ಇಟ್ಟಿದ್ದಾರೆ. ನಿಮ್ಮ ಪ್ರೀತಿಗೆ ನನ್ನ ಮನಸ್ಸು ತುಂಬಿದೆ . ಈ ವಿಶ್ವಾಸಕ್ಕೆ ನಾನೆಂದೂ ಚಿರಋಣಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇಷ್ಟೆಲ್ಲಾ ಸಾಧ್ಯವಾಗಿದ್ದು ಟಿವಿ9ನಿಂದ, TV9ಗೆ ಧನ್ಯವಾದ ತಿಳಿಸಿದ ನಟಿ ಹರ್ಷಿಕಾ ಪೂಣಚ್ಚ

ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

Published On - 6:34 pm, Sat, 12 June 21

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್