AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿಕಾ ಪೂಣಚ್ಚ ಜೀವನಕ್ಕೆ ಸಿಕ್ತು ಹೊಸ ಅರ್ಥ; ಅಭಿಮಾನಿಗಳ ಜತೆ ಖುಷಿ ಹಂಚಿಕೊಂಡ ನಟಿ

ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಕೂಡ ಇದ್ದಕ್ಕೆ ಹೊರತಾಗಿಲ್ಲ. ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಾಗಿನಿಂದಲೂ ಅವರು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಮಾಡಿದ ಕೆಲಸಕ್ಕೆ ಈಗ ಅವರಿಗೆ ಸಾರ್ಥಕ ಭಾವನೆ ಮೂಡಿದೆ.

ಹರ್ಷಿಕಾ ಪೂಣಚ್ಚ ಜೀವನಕ್ಕೆ ಸಿಕ್ತು ಹೊಸ ಅರ್ಥ; ಅಭಿಮಾನಿಗಳ ಜತೆ ಖುಷಿ ಹಂಚಿಕೊಂಡ ನಟಿ
ಹರ್ಷಿಕಾ ಪೂಣಚ್ಚ
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2026 | 6:52 AM

Share

ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಕೂಡ ಇದ್ದಕ್ಕೆ ಹೊರತಾಗಿಲ್ಲ. ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಾಗಿನಿಂದಲೂ ಅವರು ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಮಾಡಿದ ಕೆಲಸಕ್ಕೆ ಈಗ ಅವರಿಗೆ ಸಾರ್ಥಕ ಭಾವನೆ ಮೂಡಿದೆ.

ಭುವನ್ ಪೊನ್ನಣ್ಣ ಜತೆಗೂಡಿ ಹರ್ಷಿಕಾ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊವಿಡ್ ಸಂಕಷ್ಟದಲ್ಲಿರುವವರಿಗೆ ಬೆಡ್​, ಆಮ್ಲಜನಕದ ಸಿಲಿಂಡರ್​ ಒದಗಿಸಲು ಮುಂದೆ ಬಂದಿರುವ ಅವರು, ನಾನಾ ಊರುಗಳಿಗೆ ತೆರಳಿ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಡಗಿಗೆ ತೆರಳಿದ್ದ ಹರ್ಷಿಕಾ, ಅಲ್ಲಿ ಕೊವಿಡ್ ವಾರ್ಡ್​ನಲ್ಲಿ ರೋಗಿಗಳನ್ನು ರಂಜಿಸಿದ್ದರು. ಅವರು ಸುಮಾರು 15,000 ಕುಟುಂಬಗಳಿಗೆ ನೆರವಾಗಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಹರ್ಷಿಕಾ ಮಾಡಿದ ಸಹಾಯವನ್ನು ಅಭಿಮಾನಿಗಳು ನೆನೆದಿದ್ದು, ಮಗಳಿಗೆ ಹರ್ಷಿಕಾ ಎಂದು ಹೆಸರಿಟ್ಟಿದ್ದಾರೆ. ಈ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಬಂದಿರುವ ಮೆಸೇಜ್​ ಒಂದರ ಸ್ಕ್ರೀನ್​ಶಾಟ್​ ಹಂಚಿಕೊಂಡಿದ್ದಾರೆ ಹರ್ಷಿಕಾ. ‘ಇವತ್ತು ನನ್ನ ತಮ್ಮನ ಮಗಳಿಗೆ ನಾಮಕರಣ ಮಾಡುತ್ತಿದ್ದೇವೆ. ಹೆಣ್ಣು ಮಗುವಿಗೆ ಹರ್ಷಿಕಾ ಎಂದು ಹೆಸರಿಡುತ್ತಿದ್ದೇವೆ. ಅಂದರೆ, ಇವಳು ನಿಮ್ಮ ತರಹದಲ್ಲೇ ಜನರ ಕಷ್ಟಕ್ಕೆ ಸ್ಪಂದಿಸುವಂತವಳಾಗಬೇಕು, ನಿಮ್ಮಂತೆ ಜನ ಸೇವಕಿ ಆಗಬೇಕು. ಆಶೀರ್ವಾದ ಮಾಡಿ ಮೇಡಂ’ ಎಂದು ಸಂದೇಶದಲ್ಲಿದೆ.

ಈ ಸಂದೇಶ ನೋಡಿದ ಹರ್ಷಿಕಾಗೆ ಸಂತಸವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಹರ್ಷಿಕಾ, ‘ನನ್ನ ಜೀವನಕ್ಕೆ ಹೊಸ ಅರ್ಥ ಸಿಕ್ಕಿರುವ ಹಾಗಿದೆ. ಈ ಮುದ್ದು ಪುಟಾಣಿ ಕಂದಮ್ಮನಿಗೆ ನನ್ನ ಹೆಸರು ಇಟ್ಟಿದ್ದಾರೆ. ನಿಮ್ಮ ಪ್ರೀತಿಗೆ ನನ್ನ ಮನಸ್ಸು ತುಂಬಿದೆ . ಈ ವಿಶ್ವಾಸಕ್ಕೆ ನಾನೆಂದೂ ಚಿರಋಣಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರ ಹಾಡು ಹೇಳಿ ಕನ್ನಡಿಗರ ಮನ ಗೆದ್ದ ಬಾಲಿವುಡ್​ ನಟ ಗೋವಿಂದ! ಹರ್ಷಿಕಾ ಜತೆಗಿನ ವಿಡಿಯೋ ವೈರಲ್​

Published On - 6:34 pm, Sat, 12 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು