AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ

ಯಶ್ ಅವರು ‘ಟಾಕ್ಸಿಕ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಮುಂಬೈನಲ್ಲಿ ಅವರಿಗೆ ಅಭಿಮಾನಿಗಳು ಎದುರಾಗುತ್ತಿದ್ದಾರೆ. 'ರಾಮಾಯಣ' ಚಿತ್ರದಲ್ಲಿಯೂ ಅವರು ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ
ಯಶ್
ರಾಜೇಶ್ ದುಗ್ಗುಮನೆ
|

Updated on: Nov 26, 2024 | 9:00 AM

Share

ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ.

ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ ಯಥರ್ವ್​, ಆಯ್ರಾ ಜೊತೆ ಸುತ್ತಾಡಿದ್ದಾರೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮುಂಬೈನಲ್ಲಿರೋ ಬಾಲಿವುಡ್ ಪಾಪರಾಜಿಗಳು ಯಶ್ ಅವರು ಸುತ್ತಾಡುತ್ತಿರುವ ವಿಡಿಯೋಗಳನ್ನು ಸೆರೆಹಿಡಿದು ಹಂಚಿಕೊಂಡಿದ್ದಾರೆ.

ಯಶ್ ಅವರಿಗೆ ಕರ್ನಾಟಕ ಮಾತ್ರವಲ್ಲ ಮುಂಬೈನಲ್ಲೂ ಫ್ಯಾನ್ಸ್ ಇದ್ದಾರೆ. ಅವರು ನಡೆದು ಬರುವಾಗ ಓರ್ವ ಅಭಿಮಾನಿ ಕಾಲಿಗೆ ಬಿದ್ದಿದ್ದಾನೆ. ಆದರೆ, ಇದಕ್ಕೆ ಯಶ್ ಅವಕಾಶ ನೀಡಲಿಲ್ಲ. ಅವರು ಕಾಲಿಗೆ ಬೀಳೋದು ಬೇಡ ಎಂದು ಕೈ ಸನ್ನೆ ಮೂಲಕ ತೋರಿಸಿದ್ದಾರೆ. ಪುಟ್ಟ ಮಗುವೊಂದು ಯಶ್ ಎದುರು ನಿಂತಿತ್ತು. ಆಗ ಅವರು ಖುಷಿಯಿಂದ ಪೋಸ್ ಕೊಟ್ಟಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಈ ಚಿತ್ರದ ಶೂಟಿಂಗ್ ನಡೆದಿತ್ತು. ಆ ಬಳಿಕ ಇಡೀ ತಂಡ ಮುಂಬೈಗೆ ಶಿಫ್ಟ್ ಆಗಿದೆ. ಈ ಕಾರಣದಿಂದಲೇ ಯಶ್ ಅವರು ಕುಟುಂಬದ ಜೊತೆ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಬೆಳಿಗ್ಗೆ ಯಶ್ ಸಿನಿಮಾ ಹಾಡು; ಇದಕ್ಕಿದೆ ವಿಶೇಷ ಕಾರಣ

ಬಾಲಿವುಡ್​ನಲ್ಲಿ ಪಾಪರಾಜಿ ಸಂಸ್ಕೃತಿ ಬಹುವಾಗಿ ಬೆಳೆದಿದೆ. ಯಾವುದೇ ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಕೆಲವರು ಇದಕ್ಕೆ ಬೆಲೆ ಕೊಟ್ಟರೆ ಇನ್ನೂ ಕೆಲವರು ಇದನ್ನು ಗೌರವಿಸೋದಿಲ್ಲ. ಸದ್ಯ ಯಶ್ ಅವರು ‘ಟಾಕ್ಸಿಕ್’ ಶೂಟ್​ಗಾಗಿ ಮುಂಬೈನಲ್ಲಿದ್ದು, ಅಲ್ಲಿನ ರೀತಿ ರಿವಾಜುಗಳನ್ನು ನಿಧಾನವಾಗಿ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಅವರು ‘ರಾಮಾಯಣ’ ಸಿನಿಮಾದ ಶೂಟ್​ನಲ್ಲೂ ಭಾಗಿ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ