AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​

Radhika Pandit: ‘ಕೆಜಿಎಫ್ 2’ ಸಿನಿಮಾ ತೆರೆಗೆ ಬರುತ್ತಿದ್ದಂತೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿತು. ಅವರು ಯಾವ ಪ್ರಾಜೆಕ್ಟ್​ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದ್ದೇ ಇತ್ತು. ಆದರೆ, ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ.

‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​
ಯಶ್- ರಾಧಿಕಾ ಪಂಡಿತ್
Follow us
ರಾಜೇಶ್ ದುಗ್ಗುಮನೆ
|

Updated on:Apr 01, 2023 | 7:47 AM

ಇನ್ನು ಎರಡು ವಾರ ಕಳೆದರೆ ನಟ ಯಶ್ ನಟನೆಯ ‘ಕೆಜಿಎಫ್ 2’ (KGF 2) ಸಿನಿಮಾ ತೆರೆಗೆ ಬಂದು ಬರೋಬ್ಬರಿ ಒಂದು ವರ್ಷ ಆಗಲಿದೆ. ಈ ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಒಂದು ವರ್ಷ ಕಳೆದರೂ ಈವರೆಗೆ ಯಶ್ 19ನೇ ಸಿನಿಮಾ ಯಾವುದು ಎನ್ನುವ ಬಗ್ಗೆ ಘೋಷಣೆ ಆಗಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಈ ಕಾರಣಕ್ಕೆ ರಾಧಿಕಾ ಪಂಡಿತ್ (Radhika Pandit) ಅವರ ಹಿಂದೆ ಬಿದ್ದಿದ್ದಾರೆ. ‘Yash19’ ಬಗ್ಗೆ ಅಪ್​ಡೇಟ್ ನೀಡುವಂತೆ ಕೇಳುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು ಏಪ್ರಿಲ್ 14ರಂದು. ಈ ಸಿನಿಮಾ ಸೂಪರ್ ಹಿಟ್ ಆಯಿತು. ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1200+ ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ. ಈ ಸಿನಿಮಾ ತೆರೆಗೆ ಬರುತ್ತಿದ್ದಂತೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿತು. ಅವರು ಯಾವ ಪ್ರಾಜೆಕ್ಟ್​ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದ್ದೇ ಇತ್ತು. ಆದರೆ, ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಹೀಗಾಗಿ, ರಾಧಿಕಾ ಅವರನ್ನು ಈ ಬಗ್ಗೆ ಕೇಳಲಾಗುತ್ತಿದೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ತೆಗೆದ ಫೋಟೋ ಇದು ಎನ್ನಲಾಗಿದೆ. ಈ ಫೋಟೋಗಳನ್ನು ಫ್ಯಾನ್ಸ್ ಲೈಕ್ಸ್ ಮಾಡಿದ್ದಾರೆ. ಈ ಫೋಟೋಗೆ ಕಮೆಂಟ್ ಮಾಡಿರುವ ಅನೇಕರು ಯಶ್ ಸಿನಿಮಾ ಬಗ್ಗೆ ಮಾಹಿತಿ ಕೇಳಿದ್ದಾರೆ. ಕೊಡದೇ ಇದ್ದರೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ! ‘ಅತ್ತಿಗೆ.. ಯಶ್19ನೇ ಸಿನಿಮಾ ಬಗ್ಗೆ ಅಪ್​ಡೇಟ್ ಕೊಡಿ. ಇಲ್ಲದಿದ್ದರೆ ಧರಣಿ ಕೂರ್ತ್ತೀವಿ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ.

ಇದನ್ನೂ ಓದಿ: Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

ಇನ್ನೂ ಕೆಲವರು ರಾಧಿಕಾ ಪಂಡಿತ್​ ಬಳಿ ಸಿನಿಮಾ ಮಾಡುವಂತೆ ಕೋರಿದ್ದಾರೆ. ರಾಧಿಕಾ ಸದ್ಯ ಕುಟುಂಬದ ಕಡೆ ಗಮನ ನೀಡುತ್ತಿದ್ದಾರೆ. ನಟನೆಯಿಂದ ದೂರವೇ ಇದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಅನ್ನೋದು ಅಭಿಮಾನಿಗಳ ಆಸೆ. ಇದು ಯಾವಾಗ ಈಡೇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Radhika Pandit: ಯಶ್ ಗಡ್ಡದಿಂದ ರಾಧಿಕಾ ಪಂಡಿತ್​ಗೆ ಎಷ್ಟು ಸಮಸ್ಯೆ ಆಗ್ತಿದೆ? ಉತ್ತರಿಸಿದ ನಟಿ

ಯಶ್ ಅವರು ನರ್ತನ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಿಜವಾಗಿಲ್ಲ. ಬಳಿಕ ಶಂಕರ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬಂದವು. ಅದರ ಬಗ್ಗೆಯೂ ಯಾವುದೇ ಅಪ್​ಡೇಟ್ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Sat, 1 April 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?